ಬ್ರೇಕಿಂಗ್ ನ್ಯೂಸ್
26-03-24 12:06 pm Mangalore Correspondent ಕರಾವಳಿ
ಪುತ್ತೂರು, ಮಾ.26: ಕುಕ್ಕೆ ಸುಬ್ರಹ್ಮಣ್ಯ ಬಳಿಯ ಐನೆಕಿದು ಗ್ರಾಮದ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿದ್ದ ಅನುಮಾನದಲ್ಲಿ ಸುಬ್ರಹ್ಮಣ್ಯ ಠಾಣೆ ಪೊಲೀಸರು ನಾಲ್ವರ ವಿರುದ್ಧ ಎಫ್ಐ ಆರ್ ದಾಖಲಿಸಿದ್ದಾರೆ.
ಈ ಬಗ್ಗೆ ನಕ್ಸಲ್ ನಿಗ್ರಹ ದಳ, ಕಾರ್ಕಳ ವಿಭಾಗೀಯ ಎಸ್ ಪಿ ಜಿತೇಂದ್ರ ಮಾಹಿತಿ ನೀಡಿದ್ದಾರೆ, ರೈತ ಅಶೋಕ್ ಎಂಬವರ ಮನೆಗೆ ಬಂದಿದ್ದ ಶಂಕಿತ ನಕ್ಸಲರು ಅವರ ಮನೆಯಿಂದ ಅಕ್ಕಿ, ಮೆಣಸಿನಕಾಯಿ ಹಾಗೂ ಇನ್ನಿತರ ದಿನಸಿ ಪದಾರ್ಥಗಳನ್ನು ಕೊಂಡೊಯ್ದಿದ್ದಾರೆ ಎಂದು ಹೇಳಿದ್ದಾರೆ.
ಶನಿವಾರ ಸಂಜೆ 6.30 ಕ್ಕೆ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ನಮ್ಮ ಮನೆಗೆ ಬಂದಿದ್ದರು. ಓರ್ವ ಮಹಿಳೆ 30-35 ವರ್ಷದ ವಯಸ್ಸಿನವರಾಗಿದ್ದು, ಮತ್ತೋರ್ವ ಮಹಿಳೆಗೆ 40-45 ವರ್ಷ ವಯಸ್ಸಾಗಿತ್ತು. ಅವರು ತಮ್ಮ ಬಳಿ ಬಂದೂಕು ಹೊಂದಿದ್ದರು. ಕನ್ನಡ, ತುಳು ಭಾಷೆಗಳಲ್ಲಿ ಮಾತನಾಡುತ್ತಿದ್ದರು. ಅವರು ತಮ್ಮನ್ನು ನಕ್ಸಲರೆಂದು ಪರಿಚಯಿಸಿಕೊಂಡು, ಬಡವರಿಗೆ ನ್ಯಾಯ ಒದಗಿಸುವುದಕ್ಕಾಗಿ ಕೆಲಸ ಮಾಡುತ್ತಿರುವುದಾಗಿ ಹೇಳಿದರು. ಅಷ್ಟೇ ಅಲ್ಲದೇ ಆಹಾರ ಕೇಳಿಕೊಂಡ ಅವರು ಕೆಲವು ದಿನಸಿ ಪದಾರ್ಥಗಳನ್ನು ಕೇಳಿ ಪಡೆದಿದ್ದಾರೆ. ಭಯದಿಂದ ನಾವು ಅವರು ಕೇಳಿದ್ದನ್ನು ಕೊಟ್ಟೆವು. ತಮ್ಮನ್ನು ಬೆಂಬಲಿಸುವಂತೆ ಕೇಳಿದ ಅವರು ಈ ಮಾಹಿತಿಯನ್ನು ಯಾರಿಗಾದರೂ ನೀಡಿದರೆ ಕೊಲ್ಲುವುದಾಗಿ ಬಂದೂಕು ತೋರಿಸಿ ಬೆದರಿಕೆ ಹಾಕಿ ಸಂಜೆ 7:30 ವೇಳೆಗೆ ಹೊರಟುಹೋದರು ಎಂದು ಅಶೋಕ್ ಹೇಳಿದ್ದಾರೆ.
ಶಂಕಿತ ನಕ್ಸಲರ ವಿರುದ್ಧ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಮತ್ತು 1967ರ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
Mangalore Naxals movement at Inakidu village in kukke subramanya, FIR lodged on four. Three unidentified persons, suspected to be cadres of the Communist Party of India-Maoist (CPI-Maoist), reportedly visited a house near Kukke Subrahmanya in Kadaba taluk (revenue unit) in Dakshina Kannada District of Karnataka on March 23.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm