ಬ್ರೇಕಿಂಗ್ ನ್ಯೂಸ್
28-03-24 03:25 pm Mangalore Correspondent ಕರಾವಳಿ
ಪುತ್ತೂರು, ಮಾ.28: ಕೊಡಗಿನ ಗಡಿಭಾಗ ಸುಳ್ಯ ತಾಲೂಕಿನ ಕಲ್ಮಕಾರು ಸಮೀಪದ ಕೂಜಿಮಲೆ ಎಸ್ಟೇಟ್ ನಲ್ಲಿ ಮತ್ತೆ ಶಂಕಿತ ನಕ್ಸಲರ ಚಲನವಲನ ಕಂಡುಬಂದಿದೆ. ಅಪರಿಚಿತ ಮಹಿಳೆಯೊಬ್ಬರು ರಬ್ಬರ್ ಎಸ್ಟೇಟ್ ನಲ್ಲಿ ಕಾಣಿಸಿಕೊಂಡಿದ್ದು ನಕ್ಸಲ್ ನಿಗ್ರಹ ದಳಕ್ಕೆ ಮಾಹಿತಿ ನೀಡಲಾಗಿದೆ.
ಕೂಜಿಮಲೆ ಎಸ್ಟೆಟ್ ಕೊಡಗು ಜಿಲ್ಲೆಯ ವ್ಯಾಪ್ತಿಗೆ ಸೇರಿದ್ದು ಬುಧವಾರ ಅಪರಾಹ್ನ ಅಪರಿಚಿತ ಮಹಿಳೆ ಎಸ್ಟೇಟಿನ ರಬ್ಬರ್ ತೋಟದಲ್ಲಿ ಸಂಚರಿಸುತ್ತಿರುವುದನ್ನು ಸಿಬಂದಿ ನೋಡಿದ್ದಾರೆ. ಬಳಿಕ ನಕ್ಸಲ್ ನಿಗ್ರಹ ಪಡೆಗೆ ಸ್ಥಳೀಯರು ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದು ಶೋಧ ನಡೆಸಿದ್ದಾರೆ. ಶಂಕಿತ ಮಹಿಳೆ ರಬ್ಬರ್ ತೋಟದಿಂದ ಅರಣ್ಯ ಭಾಗದತ್ತ ತೆರಳಿದ್ದಾಳೆ ಎನ್ನಲಾಗಿದೆ.
ನಕ್ಸಲ್ ನಿಗ್ರಹ ಪಡೆಯ ಸಿಬಂದಿ ಕಳೆದ ಒಂದು ವಾರದಿಂದ ಐನೆಕಿದು, ಕೂಜಿಮಲೆ ಆಸುಪಾಸಿನಲ್ಲೇ ಶೋಧ ಕಾರ್ಯ ನಡೆಸುತ್ತಿದ್ದಾರೆ. ಶಂಕಿತ ಮಹಿಳೆ ಕಾಣಿಸಿಕೊಂಡ ಮಾಹಿತಿ ಲಭ್ಯವಾದ ಕೂಡಲೇ ಎಎನ್ಎಫ್ ತಂಡ ಎಸ್ಟೇಟ್ ಪ್ರದೇಶಕ್ಕೆ ತೆರಳಿ ಶೋಧ ಕಾರ್ಯ ಆರಂಭಿಸಿದೆ. ಮಾರ್ಚ್ 16ರಂದು ನಾಲ್ವರು ಶಂಕಿತ ನಕ್ಸಲರು ಕೂಜಿಮಲೆ ಎಸ್ಟೇಟ್ ಬಳಿಯ ಅಂಗಡಿಯೊಂದಕ್ಕೆ ಭೇಟಿ ನೀಡಿ ಸಾಮಗ್ರಿ ಖರೀದಿಸಿ ಅರಣ್ಯದತ್ತ ತೆರಳಿದ್ದರು. ಆನಂತರ, ಮಾ.23ರಂದು ನಾಲ್ವರು ಶಂಕಿತರು ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾ.ಪಂ. ವ್ಯಾಪ್ತಿಯ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಭೇಟಿ ನೀಡಿ ಊಟ, ಆಹಾರ ಸಾಮಗ್ರಿ ಪಡೆದು ತೆರಳಿದ್ದರು.
ಮಾ.27ರಂದು ಮತ್ತೆ ಕೂಜಿಮಲೆ ಎಸ್ಟೇಟ್ ಪ್ರದೇಶದಲ್ಲಿ ಅಪರಿಚಿತ ಮಹಿಳೆ ಕಾಣಿಸಿಕೊಂಡಿದ್ದಾಳೆ. ಮಾ.18ರಿಂದ ವಿವಿಧೆಡೆ ನಕ್ಸಲ್ ನಿಗ್ರಹ ಪಡೆ ನಿರಂತರ ಶೋಧ ನಡೆಸುತ್ತಿದ್ರೂ ನಕ್ಸಲರ ಬಗ್ಗೆ ಯಾವುದೇ ಸುಳಿವು ದೊರಕಿಲ್ಲ.
An unidentified woman was reportedly spotted multiple times in the Koojimale estate area on Wednesday, prompting a search amid suspicions that she may be affiliated with Naxalites.
13-07-26 10:32 am
HK News Staffer
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 11:51 am
HK News Staffer
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm