ಬ್ರೇಕಿಂಗ್ ನ್ಯೂಸ್
28-03-24 03:25 pm Mangalore Correspondent ಕರಾವಳಿ
ಪುತ್ತೂರು, ಮಾ.28: ಕೊಡಗಿನ ಗಡಿಭಾಗ ಸುಳ್ಯ ತಾಲೂಕಿನ ಕಲ್ಮಕಾರು ಸಮೀಪದ ಕೂಜಿಮಲೆ ಎಸ್ಟೇಟ್ ನಲ್ಲಿ ಮತ್ತೆ ಶಂಕಿತ ನಕ್ಸಲರ ಚಲನವಲನ ಕಂಡುಬಂದಿದೆ. ಅಪರಿಚಿತ ಮಹಿಳೆಯೊಬ್ಬರು ರಬ್ಬರ್ ಎಸ್ಟೇಟ್ ನಲ್ಲಿ ಕಾಣಿಸಿಕೊಂಡಿದ್ದು ನಕ್ಸಲ್ ನಿಗ್ರಹ ದಳಕ್ಕೆ ಮಾಹಿತಿ ನೀಡಲಾಗಿದೆ.
ಕೂಜಿಮಲೆ ಎಸ್ಟೆಟ್ ಕೊಡಗು ಜಿಲ್ಲೆಯ ವ್ಯಾಪ್ತಿಗೆ ಸೇರಿದ್ದು ಬುಧವಾರ ಅಪರಾಹ್ನ ಅಪರಿಚಿತ ಮಹಿಳೆ ಎಸ್ಟೇಟಿನ ರಬ್ಬರ್ ತೋಟದಲ್ಲಿ ಸಂಚರಿಸುತ್ತಿರುವುದನ್ನು ಸಿಬಂದಿ ನೋಡಿದ್ದಾರೆ. ಬಳಿಕ ನಕ್ಸಲ್ ನಿಗ್ರಹ ಪಡೆಗೆ ಸ್ಥಳೀಯರು ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದು ಶೋಧ ನಡೆಸಿದ್ದಾರೆ. ಶಂಕಿತ ಮಹಿಳೆ ರಬ್ಬರ್ ತೋಟದಿಂದ ಅರಣ್ಯ ಭಾಗದತ್ತ ತೆರಳಿದ್ದಾಳೆ ಎನ್ನಲಾಗಿದೆ.
ನಕ್ಸಲ್ ನಿಗ್ರಹ ಪಡೆಯ ಸಿಬಂದಿ ಕಳೆದ ಒಂದು ವಾರದಿಂದ ಐನೆಕಿದು, ಕೂಜಿಮಲೆ ಆಸುಪಾಸಿನಲ್ಲೇ ಶೋಧ ಕಾರ್ಯ ನಡೆಸುತ್ತಿದ್ದಾರೆ. ಶಂಕಿತ ಮಹಿಳೆ ಕಾಣಿಸಿಕೊಂಡ ಮಾಹಿತಿ ಲಭ್ಯವಾದ ಕೂಡಲೇ ಎಎನ್ಎಫ್ ತಂಡ ಎಸ್ಟೇಟ್ ಪ್ರದೇಶಕ್ಕೆ ತೆರಳಿ ಶೋಧ ಕಾರ್ಯ ಆರಂಭಿಸಿದೆ. ಮಾರ್ಚ್ 16ರಂದು ನಾಲ್ವರು ಶಂಕಿತ ನಕ್ಸಲರು ಕೂಜಿಮಲೆ ಎಸ್ಟೇಟ್ ಬಳಿಯ ಅಂಗಡಿಯೊಂದಕ್ಕೆ ಭೇಟಿ ನೀಡಿ ಸಾಮಗ್ರಿ ಖರೀದಿಸಿ ಅರಣ್ಯದತ್ತ ತೆರಳಿದ್ದರು. ಆನಂತರ, ಮಾ.23ರಂದು ನಾಲ್ವರು ಶಂಕಿತರು ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾ.ಪಂ. ವ್ಯಾಪ್ತಿಯ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಭೇಟಿ ನೀಡಿ ಊಟ, ಆಹಾರ ಸಾಮಗ್ರಿ ಪಡೆದು ತೆರಳಿದ್ದರು.
ಮಾ.27ರಂದು ಮತ್ತೆ ಕೂಜಿಮಲೆ ಎಸ್ಟೇಟ್ ಪ್ರದೇಶದಲ್ಲಿ ಅಪರಿಚಿತ ಮಹಿಳೆ ಕಾಣಿಸಿಕೊಂಡಿದ್ದಾಳೆ. ಮಾ.18ರಿಂದ ವಿವಿಧೆಡೆ ನಕ್ಸಲ್ ನಿಗ್ರಹ ಪಡೆ ನಿರಂತರ ಶೋಧ ನಡೆಸುತ್ತಿದ್ರೂ ನಕ್ಸಲರ ಬಗ್ಗೆ ಯಾವುದೇ ಸುಳಿವು ದೊರಕಿಲ್ಲ.
An unidentified woman was reportedly spotted multiple times in the Koojimale estate area on Wednesday, prompting a search amid suspicions that she may be affiliated with Naxalites.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm