ಬ್ರೇಕಿಂಗ್ ನ್ಯೂಸ್
28-03-24 03:25 pm Mangalore Correspondent ಕರಾವಳಿ
ಪುತ್ತೂರು, ಮಾ.28: ಕೊಡಗಿನ ಗಡಿಭಾಗ ಸುಳ್ಯ ತಾಲೂಕಿನ ಕಲ್ಮಕಾರು ಸಮೀಪದ ಕೂಜಿಮಲೆ ಎಸ್ಟೇಟ್ ನಲ್ಲಿ ಮತ್ತೆ ಶಂಕಿತ ನಕ್ಸಲರ ಚಲನವಲನ ಕಂಡುಬಂದಿದೆ. ಅಪರಿಚಿತ ಮಹಿಳೆಯೊಬ್ಬರು ರಬ್ಬರ್ ಎಸ್ಟೇಟ್ ನಲ್ಲಿ ಕಾಣಿಸಿಕೊಂಡಿದ್ದು ನಕ್ಸಲ್ ನಿಗ್ರಹ ದಳಕ್ಕೆ ಮಾಹಿತಿ ನೀಡಲಾಗಿದೆ.
ಕೂಜಿಮಲೆ ಎಸ್ಟೆಟ್ ಕೊಡಗು ಜಿಲ್ಲೆಯ ವ್ಯಾಪ್ತಿಗೆ ಸೇರಿದ್ದು ಬುಧವಾರ ಅಪರಾಹ್ನ ಅಪರಿಚಿತ ಮಹಿಳೆ ಎಸ್ಟೇಟಿನ ರಬ್ಬರ್ ತೋಟದಲ್ಲಿ ಸಂಚರಿಸುತ್ತಿರುವುದನ್ನು ಸಿಬಂದಿ ನೋಡಿದ್ದಾರೆ. ಬಳಿಕ ನಕ್ಸಲ್ ನಿಗ್ರಹ ಪಡೆಗೆ ಸ್ಥಳೀಯರು ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದು ಶೋಧ ನಡೆಸಿದ್ದಾರೆ. ಶಂಕಿತ ಮಹಿಳೆ ರಬ್ಬರ್ ತೋಟದಿಂದ ಅರಣ್ಯ ಭಾಗದತ್ತ ತೆರಳಿದ್ದಾಳೆ ಎನ್ನಲಾಗಿದೆ.
ನಕ್ಸಲ್ ನಿಗ್ರಹ ಪಡೆಯ ಸಿಬಂದಿ ಕಳೆದ ಒಂದು ವಾರದಿಂದ ಐನೆಕಿದು, ಕೂಜಿಮಲೆ ಆಸುಪಾಸಿನಲ್ಲೇ ಶೋಧ ಕಾರ್ಯ ನಡೆಸುತ್ತಿದ್ದಾರೆ. ಶಂಕಿತ ಮಹಿಳೆ ಕಾಣಿಸಿಕೊಂಡ ಮಾಹಿತಿ ಲಭ್ಯವಾದ ಕೂಡಲೇ ಎಎನ್ಎಫ್ ತಂಡ ಎಸ್ಟೇಟ್ ಪ್ರದೇಶಕ್ಕೆ ತೆರಳಿ ಶೋಧ ಕಾರ್ಯ ಆರಂಭಿಸಿದೆ. ಮಾರ್ಚ್ 16ರಂದು ನಾಲ್ವರು ಶಂಕಿತ ನಕ್ಸಲರು ಕೂಜಿಮಲೆ ಎಸ್ಟೇಟ್ ಬಳಿಯ ಅಂಗಡಿಯೊಂದಕ್ಕೆ ಭೇಟಿ ನೀಡಿ ಸಾಮಗ್ರಿ ಖರೀದಿಸಿ ಅರಣ್ಯದತ್ತ ತೆರಳಿದ್ದರು. ಆನಂತರ, ಮಾ.23ರಂದು ನಾಲ್ವರು ಶಂಕಿತರು ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾ.ಪಂ. ವ್ಯಾಪ್ತಿಯ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಭೇಟಿ ನೀಡಿ ಊಟ, ಆಹಾರ ಸಾಮಗ್ರಿ ಪಡೆದು ತೆರಳಿದ್ದರು.
ಮಾ.27ರಂದು ಮತ್ತೆ ಕೂಜಿಮಲೆ ಎಸ್ಟೇಟ್ ಪ್ರದೇಶದಲ್ಲಿ ಅಪರಿಚಿತ ಮಹಿಳೆ ಕಾಣಿಸಿಕೊಂಡಿದ್ದಾಳೆ. ಮಾ.18ರಿಂದ ವಿವಿಧೆಡೆ ನಕ್ಸಲ್ ನಿಗ್ರಹ ಪಡೆ ನಿರಂತರ ಶೋಧ ನಡೆಸುತ್ತಿದ್ರೂ ನಕ್ಸಲರ ಬಗ್ಗೆ ಯಾವುದೇ ಸುಳಿವು ದೊರಕಿಲ್ಲ.
An unidentified woman was reportedly spotted multiple times in the Koojimale estate area on Wednesday, prompting a search amid suspicions that she may be affiliated with Naxalites.
15-07-25 10:35 am
Bangalore Correspondent
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm