ಬ್ರೇಕಿಂಗ್ ನ್ಯೂಸ್
28-03-24 07:12 pm Mangalore Correspondent ಕರಾವಳಿ
ಬಂಟ್ವಾಳ, ಮಾ.28: ಸರಕಾರಿ ಉದ್ಯೋಗ ತೆಗೆಸಿ ಕೊಡುವುದಾಗಿ ಹೇಳಿ ಯುವಕನೊರ್ವನಿಗೆ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ ಆರೋಪದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡನ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ನಿವಾಸಿ ಕಾರ್ತಿಕ್ ಎಂಬವರು ವಾಮದಪದವು ನಿವಾಸಿ, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಪದ್ಮನಾಭ ಸಾಮಂತ್ ಎಂಬವರು ಲಕ್ಷಾಂತರ ರೂ. ವಂಚನೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಕುಕ್ಕಿಪಾಡಿ ನಿವಾಸಿ ಕಾರ್ತಿಕ್ ಬಡ ಕುಟುಂಬದ ಯುವಕನಾಗಿದ್ದು, ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದ. ಸರಕಾರಿ ಉದ್ಯೋಗದ ಕನಸು ಹೊಂದಿದ್ದ ಈತನಿಗೆ ಪರಿಚಯದ ಪದ್ಮನಾಭ ಸಾಮಂತ ಸರಕಾರಿ ಉದ್ಯೋಗ ನೀಡುವ ಭರವಸೆ ನೀಡಿದ್ದು ಬೆಂಗಳೂರಿನ ಕಾವೇರಿ ಭವನದಲ್ಲಿರುವ ನೀರಾವರಿ ನಿಗಮದಲ್ಲಿ ಗುಮಾಸ್ತ ಉದ್ಯೋಗ ತೆಗೆಸಿಕೊಡುವುದಾಗಿ ಹೇಳಿದ್ದ.
ಸರಕಾರಿ ಉದ್ಯೋಗ ತೆಗೆಸಿಕೊಡಲು 2 ಲಕ್ಷ ಹಣ ನೀಡುವಂತೆ ತಿಳಿಸಿದ್ದಲ್ಲದೆ, ನಂಬಿಕೆಯನ್ನು ಮೂಡಿಸಲು ನೀರಾವರಿ ನಿಗಮದ ಹೆಸರಿನಲ್ಲಿ ಛಾಪ ಕಾಗದವನ್ನು ತೋರಿಸಿದ್ದ. ಉದ್ಯೋಗ ಸಿಕ್ಕಿದ ಮೇಲೆ ತಂದೆ, ತಾಯಿಗೆ ಇ.ಎಸ್.ಐ ಸೌಲಭ್ಯಕ್ಕಾಗಿ ಇಬ್ಬರ ಬ್ಯಾಂಕ್ ಪಾಸ್ ಪುಸ್ತಕ, ಜೆರಾಕ್ಸ್ ಪ್ರತಿ ಹಾಗೂ ಕಾರ್ತಿಕ್ ನ ಬ್ಯಾಂಕ್ ಜೆರಾಕ್ಸ್ ಪಾಸ್ ಪುಸ್ತಕ ಪಡೆದಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಜೊತೆಗೆ ನಿಗಮದ ಎಂ.ಡಿ. ಅವರಿಗೆ ಹಣ ನೀಡುವ ನೆಪದಲ್ಲಿ ಹಂತ ಹಂತವಾಗಿ ರೂ. 1,51,750 ಲಕ್ಷ ರೂ. ಪಡೆದಿದ್ದ. ಆದರೆ ಕೆಲಸ ಸಿಗುವುದು ಕಂಡುಬರದ ಹಿನ್ನೆಲೆಯಲ್ಲಿ ವಿಚಾರಿಸಿದಾಗ ಇನ್ನೂ ಒಂದು ಲಕ್ಷ ಹಣವನ್ನು ನೀಡುವಂತೆ ಬೇಡಿಕೆ ಇಟ್ಟಿದ್ದ.
ಇದರಿಂದ ಸಂಶಯಗೊಂಡ ಕಾರ್ತಿಕ್ ಬೆಂಗಳೂರಿನ ಕಾವೇರಿ ನಿಗಮದಲ್ಲಿರುವ ನೀರಾವರಿ ಇಲಾಖೆಯನ್ನು ವಿಚಾರಿಸಿದಾಗ ಅಲ್ಲಿ ಯಾವುದೇ ಉದ್ಯೋಗದ ಅವಕಾಶ ಇಲ್ಲದಿರುವುದು ಮತ್ತು ಈತನ ಅರ್ಜಿ ಹೋಗದಿರುವುದು ತಿಳಿದುಬಂತು. ವಂಚನೆ ವಿಚಾರ ತಿಳಿದು, ಸಾಮಾಜಿಕ ಜಾಲತಾಣದಲ್ಲಿ ಅನ್ಯಾಯವನ್ನು ಹೇಳಿಕೊಂಡಿದ್ದ. ಇದೀಗ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ.
A youth was duped of lakhs of rupees on the pretext of getting him a government job. A complaint has been registered against the district Congress leader at Punjalakatte police station for allegedly duping him of money.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm