ಬ್ರೇಕಿಂಗ್ ನ್ಯೂಸ್
30-03-24 10:42 am Bangalore Correspondent ಕರಾವಳಿ
ಉಳ್ಳಾಲ, ಮಾ.29: ಅಡ್ಯಾರ್ ಪದವಿನಿಂದ ನಾಪತ್ತೆಯಾಗಿದ್ದ ತಾಯಿ, ಮಗು ಹರೇಕಳ ಗ್ರಾಮದ ಕಡವಿನಬಳಿ ಸಮೀಪದ ನೇತ್ರಾವತಿ ನದಿಯಲ್ಲಿ ಶುಕ್ರವಾರ ರಾತ್ರಿ ಶವವಾಗಿ ಪತ್ತೆಯಾಗಿದ್ದು, ಒಂದು ವರ್ಷದ ಗಂಡು ಮಗುವಿನೊಂದಿಗೆ ಗೃಹಿಣಿ ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.
ಅಡ್ಯಾರು ಪದವಿನ ದುರ್ಗಾಪರಮೇಶ್ವರಿ ದೇವಸ್ಥಾನ ಬಳಿಯ ನಿವಾಸಿ ಚೈತ್ರಾ( 30) ಮೃತ ಗೃಹಿಣಿ. ಚೈತ್ರಾ ಶುಕ್ರವಾರ ಮಧ್ಯಾಹ್ನ ತನ್ನ ಒಂದು ವರುಷದ ಗಂಡು ಮಗು ದಿಯಾಂಶ್ ಜತೆ ಆಟೋ ರಿಕ್ಷಾ ಒಂದರಲ್ಲಿ ಹರೇಕಳ ಸೇತುವೆಯ ಮೂಲಕ ಹರೇಕಳ ಕಡವಿನಬಳಿ ಬಂದಿದ್ದರಂತೆ. ಈ ಬಗ್ಗೆ ಸಿಸಿಟಿವಿಯಲ್ಲೂ ದಾಖಲೆ ದೊರೆತಿದೆ. ನದಿ ತೀರದಲ್ಲಿ ಚೈತ್ರಾ ಮಗುವನ್ನ ಎತ್ತಿಕೊಂಡು ಸಾಗುತ್ತಿರುವುದನ್ನ ಸ್ಥಳೀಯರೂ ನೋಡಿದ್ದರು.
ಮಧ್ಯಾಹ್ನದ ಬಳಿಕ ಚೈತ್ರಾಳ ಕುಟುಂಬಸ್ಥರು ಹರೇಕಳಕ್ಕೆ ಬಂದು ವಿಚಾರಿಸಿದ್ದು, ಚೈತ್ರಾ ನಾಪತ್ತೆಯಾಗಿರುವ ಬಗ್ಗೆ ತಿಳಿದಿತ್ತು. ರಾತ್ರಿ 8.30 ರ ವೇಳೆಗೆ ಹರೇಕಳ ನೇತ್ರಾವತಿ ನದಿಯಲ್ಲಿ ಚೈತ್ರ ಮತ್ತು ಆಕೆಯ ಮಗುವಿನ ಶವ ಪತ್ತೆಯಾಗಿದೆ. ಮಹಿಳೆಯು ಮಗುವಿನೊಂದಿಗೆ ಆತ್ಮಹತ್ಯೆಗೈದಿರಬಹುದೆಂದು ಶಂಕಿಸಲಾಗಿದೆ. ಕೊಣಾಜೆ ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಚೈತ್ರಾಳ ಪತಿ ನಾಗರಾಜ್ ಅವರು ದಿನಗೂಲಿ ನೌಕರನಾಗಿದ್ದು ಪತ್ನಿ, ಮಗುವನ್ನ ಚೆನ್ನಾಗಿಯೇ ನೋಡಿ ಕೊಳ್ಳುತ್ತಿದ್ದರೆಂದು ಕುಟುಂಬವನ್ನ ಹತ್ತಿರದಿಂದ ಬಲ್ಲವರು ತಿಳಿಸಿದ್ದಾರೆ. ಕಳೆದ ಹತ್ತು ದಿವಸಗಳ ಹಿಂದಷ್ಟೆ ನಾಗರಾಜ್, ಚೈತ್ರಾ ದಂಪತಿ ತಮ್ಮ ಮಗುವಿನ ಪ್ರಥಮ ವರ್ಷದ ಹುಟ್ಟುಹಬ್ಬವನ್ನ ದೇರಳಕಟ್ಟೆಯ ವೃದ್ಧಾಶ್ರಮವೊಂದರಲ್ಲಿ ಆಚರಿಸಿ ಸಂಭ್ರಮಿಸಿದ್ದರು.
The lifeless bodies of Chaitra and her one-year-old child, Diyansh, both residents of Adyar Padavu, were discovered near Harekala Bridge. The mother and child were reported missing on the afternoon of Friday, March 29.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm