ಬ್ರೇಕಿಂಗ್ ನ್ಯೂಸ್
29-11-20 12:07 am Mangaluru Crime Correspondent ಕರಾವಳಿ
ಮಂಗಳೂರು, ನ.29: ಮಂಗಳೂರಿನಲ್ಲಿ ಮತ್ತೊಂದು ಕಡೆ ಮತಾಂಧರ ಗೋಡೆ ಬರಹ ಪತ್ತೆಯಾಗಿದ್ದು ಆತಂಕ ಮೂಡಿಸಿದೆ. ಮಂಗಳೂರಿನ ಪಿವಿಎಸ್ ಬಳಿಯ ನ್ಯಾಯಾಲಯದ ಆವರಣದ ಹಳೆ ಕಟ್ಟಡದ ಗೋಡೆಯಲ್ಲಿ ಉರ್ದು ಭಾಷೆಯಲ್ಲಿ ಬರಹ ಕಂಡುಬಂದಿದೆ.
ಕೋರ್ಟ್ ಆವರಣದಲ್ಲಿರುವ ಜನರೇಟರ್ ರೂಂ ಗೋಡೆಯ ಮೇಲೆ ಉರ್ದು ಭಾಷೆಯಲ್ಲಿ "Gustak E Rasool ek hi saza Sar tan say juda" ಎಂದು ಬರೆದಿದ್ದಾರೆ. ಇದರರ್ಥ "ಪ್ರವಾದಿಗೆ ಕೋಪ ಬಂದರೆ ಒಂದೇ ಶಿಕ್ಷೆ, ತಲೆ ದೇಹದಿಂದ ಬೇರ್ಪಡುವುದು" ಎಂಬುದಾಗಿ ಎನ್ನಲಾಗಿದೆ. ಈ ಬಗ್ಗೆ ಮಂಗಳೂರಿನ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎರಡು ದಿನಗಳ ಹಿಂದೆ ಬಿಜೈ ಅಪಾರ್ಟ್ಮೆಂಟ್ ಆವರಣದಲ್ಲಿ ಉಗ್ರರ ಪರ ಗೋಡೆ ಬರಹ ಪತ್ತೆಯಾಗಿ ಸಂಚಲನ ಮೂಡಿಸಿತ್ತು. ಸಂಘ ಪರಿವಾರದ ವಿರುದ್ಧ ಬೆದರಿಕೆ ಹಾಕುವ ರೀತಿ ಲಷ್ಕರ್, ತಾಲಿಬಾನ್ ಉಗ್ರರನ್ನು ಕರೆಸಬೇಕಾದೀತು ಎಂಬರ್ಥದಲ್ಲಿ ಕಿಡಿಗೇಡಿಗಳು ಉಗ್ರರ ಪರವಾಗಿ ಬರಹ ಬರೆದಿದ್ದರು.
ಬಿಜೈ ಹಾಗು ಕೋರ್ಟ್ ಅವರಣದ ಗೋಡೆ ಬರಹದಲ್ಲಿ ಸಾಮ್ಯತೆ ಕಂಡುಬಂದಿದ್ದು ಎರಡೂ ಕೃತ್ಯವನ್ನು ಒಂದೇ ತಂಡ ಎಸಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಬೈಕ್ ನಲ್ಲಿ ಬಂದು ಸ್ಪ್ರೇ ಪೇಂಟ್ ಮೂಲಕ ಗೋಡೆ ಬರಹ ಬರೆದು ಪರಾರಿಯಾಗುತ್ತಿರುವ ಬಗ್ಗೆ ಈಗಾಗಲೇ ಅನುಮಾನ ವ್ಯಕ್ತವಾಗಿದ್ದು ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ನಡೆಸುತ್ತಿದ್ದಾರೆ. ನಗರದ ಸಿಸಿಟಿವಿಗಳನ್ನು ತಪಾಸಣೆ ಮಾಡುತ್ತಿದ್ದಾರೆ. ಪತ್ತೆ ಕಾರ್ಯಾಚರಣೆಗೆ ಪೊಲೀಸರ ವಿಶೇಷ ತಂಡ ಇಳಿದಿರುವಾಗಲೇ ಮತ್ತೊಂದು ಕಡೆ ಮತಾಂಧರು ಕಿಡಿಗೇಡಿ ಕೃತ್ಯ ನಡೆಸಿರುವುದು ಪೊಲೀಸರಿಗೇ ಸವಾಲಾಗುವ ರೀತಿ ಇದೆ.
Also Read: 'ಲಷ್ಕರ್ ಜಿಂದಾಬಾದ್' ಗೋಡೆ ಬರಹ ; ಯಾರೇ ಬರೆದಿದ್ದರೂ ಕಠಿಣ ಕ್ರಮ
After Miscreants graffiti wall in support of Anti-terrorist groups at Kadri in Mangalore, another graffiti has been reported at the Mangalore Court Wall on November 28, Saturday, 2020. The Police rushed to the spot and have erased graffiti by painting on the same.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am