ಬ್ರೇಕಿಂಗ್ ನ್ಯೂಸ್
30-03-24 10:35 pm Mangalore Correspondent ಕರಾವಳಿ
ಪುತ್ತೂರು, ಮಾ.30: ಕಡಬದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮುಸ್ಲಿಂ ಮುಖಂಡರು ತಮ್ಮನ್ನು ಪಕ್ಷದಲ್ಲಿ ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ನಾಯಕರ ಜೊತೆಗೆ ವಾಗ್ವಾದ ನಡೆಸಿದ ಪ್ರಸಂಗ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ಏರು ಧ್ವನಿಯಲ್ಲಿ ರಾಜ್ಯ ಮಟ್ಟದ ನಾಯಕರು ಸ್ಥಳೀಯ ನಾಯಕರು ಪ್ರಶ್ನೆ ಮಾಡಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಡಬ ಮತ್ತು ಸುಳ್ಯ ಬ್ಲಾಕ್ ಕಾಂಗ್ರೆಸ್ ನಲ್ಲಿ ಅಭ್ಯರ್ಥಿ ವಿಚಾರದಲ್ಲಿ ವಾಗ್ವಾದ ನಡೆದಿತ್ತು. ಕೃಷ್ಣಪ್ಪ ಅವರನ್ನು ರಾಜ್ಯ ಘಟಕ ಅಭ್ಯರ್ಥಿ ಮಾಡಿದ್ದಕ್ಕೆ ಸ್ಥಳೀಯ ನಾಯಕರು ವಿರೋಧಿಸಿದ್ದರು. ತಮ್ಮ ಅಭ್ಯರ್ಥಿ ನಂದ ಕುಮಾರ್ ಎಂದು ಪ್ರತ್ಯೇಕವಾಗಿ ಸಭೆಯನ್ನೂ ನಡೆಸಿದ್ದರು. ಬಂಡಾಯ ಸ್ಪರ್ಧಿಸುವ ಬಗ್ಗೆಯೂ ಮಾತನಾಡಿದ್ದರು. ಬಳಿಕ ಆ ವಿಚಾರವನ್ನು ಅಲ್ಲಿಂದಲ್ಲಿಗೆ ಕೊನೆಗೊಳಿಸಲಾಗಿತ್ತು. ನಂದಕುಮಾರ್ ಬಣವೂ ತಣ್ಣಗಾಗಿತ್ತು.
ಆದರೆ ಇದೀಗ ಲೋಕಸಭೆ ಚುನಾವಣೆಯ ಪ್ರಚಾರ ಶುರುವಾಗುತ್ತಿದ್ದಂತೆ ಕಡಬ ಬ್ಲಾಕ್ ಕಾಂಗ್ರೆಸಿನ ಮುಸ್ಲಿಂ ಮುಖಂಡರು ಜಿಲ್ಲಾ ನಾಯಕರ ಜೊತೆಗೆ ವಾಗ್ವಾದ ನಡೆಸಿದ್ದಾರೆ. ಸಭೆ ಶುರುವಾಗೋದಕ್ಕೂ ಮುನ್ನ ಕೆಲವು ಸ್ಥಳೀಯ ಪುಢಾರಿಗಳು ತಮಗೇನೂ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಪ್ರಶ್ನೆ ಎತ್ತಿದ್ದಾರೆ. ಸಮಾಧಾನಿಸಲು ಬಂದು ವಿನಯ ಕುಮಾರ್ ಸೊರಕೆ, ಚಂದ್ರಹಾಸ ಶೆಟ್ಟಿ, ಅಭ್ಯರ್ಥಿ ಪದ್ಮರಾಜ್ ಜೊತೆಗೂ ವಾಗ್ವಾದ ನಡೆಸಿದ್ದಾರೆ. ಒಂದು ಹಂತದಲ್ಲಿ ನಾವು ಸಭೆಗೆ ಬರೋದಿಲ್ಲ ಎಂದು ಹೊರಗೆ ನಡೆದಿದ್ದಾರೆ. ಬಳಿಕ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಅಸಮಾಧಾನಗೊಂಡ ಕಾರ್ಯಕರ್ತರನ್ನು ಮನವೊಲಿಸಲು ಯತ್ನಿಸಿದ್ದಾರೆ.
ಈ ಬಗ್ಗೆ ಸುಳ್ಯ ಕಾಂಗ್ರೆಸಿನ ನಾಯಕರೊಬ್ಬರಲ್ಲಿ ಕೇಳಿದಾಗ, ಸುಳ್ಯ ವಿಧಾನಸಭೆ ಕ್ಷೇತ್ರದಲ್ಲಿ ಸುಳ್ಯ ಮತ್ತು ಕಡಬ ಬ್ಲಾಕ್ ಇದೆ. ಸುಳ್ಯ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ಸಮಿತಿ ಮತ್ತು ಗ್ಯಾರಂಟಿ ಯೋಜನೆ ಸಮಿತಿ ಎರಡರಲ್ಲೂ ಮುಸ್ಲಿಮರನ್ನೇ ಅಧ್ಯಕ್ಷರಾಗಿ ಮಾಡಲಾಗಿದೆ. ಸುಳ್ಯದಲ್ಲಿ 24 ಸಾವಿರದಷ್ಟು ಮುಸ್ಲಿಂ ಮತದಾರರಿದ್ದಾರೆ. ಈಗಲೇ ತಮ್ಮ ಓಟು ಪೂರ್ತಿ ಕಾಂಗ್ರೆಸಿಗೆ ಹಾಕುತ್ತೇವೆಂದು ಹೇಳಿ ಎಲ್ಲ ಪ್ರಮುಖ ಹುದ್ದೆಗಳನ್ನೂ ಕೇಳಿ ಪಡೆಯುತ್ತಿದ್ದಾರೆ. ಕಡಬದಲ್ಲಿ ಪ್ರತ್ಯೇಕವಾಗಿ ಪ್ರಚಾರ ಸಮಿತಿ ಮಾಡಿಲ್ಲ. ಸುಳ್ಯದ ಒಟ್ಟು ಮತದಾರರಲ್ಲಿ 70 ಶೇಕಡಾ ಒಕ್ಕಲಿಗರೇ ಇದ್ದಾರೆ. ಜಾತಿವಾರು ಕೇಳಿದರೆ, ಎಲ್ಲರಿಗೂ ಕೊಡಬೇಕಾದೀತು. ಇವರು ಇಷ್ಟೆಲ್ಲ ಕೊಟ್ಟರೂ ಪಕ್ಷದ ಪ್ರಚಾರ ಸಭೆಯಲ್ಲಿ ಅಪಸ್ವರ ಎತ್ತಿದ್ದಾರೆ ಎಂದು ಹೇಳಿದ್ದಾರೆ.
ಸಭೆಯಲ್ಲಿದ್ದ ಇನ್ನೊಬ್ಬರಲ್ಲಿ ಕೇಳಿದಾಗ, ಕಡಬ ಬ್ಲಾಕ್ ಕಾಂಗ್ರೆಸ್ ನಲ್ಲಿ ಮುಸ್ಲಿಮರಿಗೆ ಪದಾಧಿಕಾರಿ ಹುದ್ದೆ ಕೊಟ್ಟಿಲ್ಲ ಅನ್ನುವುದು ಆವರ ಆಕ್ಷೇಪ ಆಗಿತ್ತು. ಇಲ್ಲಿಂದ ನಾವು ಕೆಲವರ ಹೆಸರನ್ನು ಕಳಿಸಿಕೊಟ್ಟಿದ್ದೆವು. ಜಿಲ್ಲಾ ಮಟ್ಟದಲ್ಲಿ, ರಾಜ್ಯ ಮಟ್ಟದಲ್ಲಿ ಬೇರೆ ಹೆಸರುಗಳನ್ನು ಶಿಫಾರಸು ಮಾಡಲಾಗಿತ್ತು ಎಂದಿದ್ದಾರೆ. ಬಳಿಕ ಜಿಲ್ಲಾಧ್ಯಕ್ಷರು ಮತ್ತು ವಿನಯ ಕುಮಾರ್ ಸೊರಕೆ ಅವರು, ನಿಮ್ಮಲ್ಲಿ ಒಬ್ಬರಿಗೆ ಎರಡೇ ದಿನದಲ್ಲಿ ಪ್ರಮುಖ ಹುದ್ದೆಯನ್ನು ಕೊಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಮುಸ್ಲಿಂ ಮುಖಂಡರನ್ನು ಸಮಾಧಾನಪಡಿಸಿದ ಬಳಿಕ ಕಾರ್ಯಕರ್ತರ ಸಭೆ ನಡೆಯಿತು. ಅಭ್ಯರ್ಥಿ ಪದ್ಮರಾಜ್ ಮಾತನಾಡಿ, ಈ ಭಾಗದ ಪ್ರಮುಖ ಬೆಳೆಯಾದ ಅಡಿಕೆ ಮತ್ತು ರಬ್ಬರ್ ಬೆಲೆಯ ವಿಚಾರದಲ್ಲಿ ಲೋಕಸಭೆಯಲ್ಲಿ ಧ್ವನಿ ಎತ್ತುತ್ತೇನೆ. ಅಲ್ಲದೆ, ಅಡಿಕೆ ಹಳದಿ ರೋಗದ ಬಗ್ಗೆ ಸಂಶೋಧನೆ ನಡೆಸಲು ಅಧ್ಯಯನ ಸಮಿತಿಯನ್ನು ರಚಿಸಲು ಕೇಂದ್ರ ಮಟ್ಟದಲ್ಲಿ ಒತ್ತಡ ತರುತ್ತೇನೆ ಎಂದು ಭರವಸೆ ನೀಡಿದ್ದಾರೆ. ಸಭೆಯಲ್ಲಿ ಕೆಪಿಸಿಸಿ ಸದಸ್ಯ ಕೃಷ್ಣಪ್ಪ, ಸುಳ್ಯ ಬ್ಲಾಕ್ ಅಧ್ಯಕ್ಷ ಪಿಸಿ ಜಯರಾಮ್, ಕೆಪಿಸಿಸಿ ಸದಸ್ಯ ಡಾ.ರಘು, ಸುಳ್ಯ ಕ್ಷೇತ್ರದ ಚುನಾವಣಾ ವೀಕ್ಷಕ ಜಯಪ್ರಕಾಶ್ ರೈ, ಚುನಾವಣಾ ಉಸ್ತುವಾರಿ ಬಾಲಕೃಷ್ಣ ಬಳ್ಳೇರಿ, ಪ್ರಚಾರ ಸಮಿತಿ ಉಸ್ತುವಾರಿ ವೆಂಕಪ್ಪ ಗೌಡ, ಕಿರಣ್ ಬುಡ್ಲೆಗುತ್ತು ಮತ್ತಿತರರು ಇದ್ದರು.
Congress Muslim leaders fight erupts amid leaders in Kadaba office in Mangalore for not giving any post at congress party even after 24 thousand Muslims voters are in Kadaba
13-07-26 10:32 am
HK News Staffer
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 11:51 am
HK News Staffer
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm