ಬ್ರೇಕಿಂಗ್ ನ್ಯೂಸ್
31-03-24 04:52 pm Mangaluru Correspondent ಕರಾವಳಿ
ಮಂಗಳೂರು, ಮಾ.31: ಸೌದಿ ಅರೇಬಿಯಾದಲ್ಲಿ ಉದ್ಯಮ ನಡೆಸುತ್ತಿದ್ದ ಮಂಗಳೂರಿನ ನಿವಾಸಿಯೊಬ್ಬರು ಜೈಲು ಸೇರಿದ್ದಾರೆ. ಮಂಗಳೂರಿನ ಜಪ್ಪಿನಮೊಗರಿನಲ್ಲಿ ನಿವಾಸ ಹೊಂದಿರುವ ಇಸ್ಮಾಯಿಲ್ ದಂಡರಕೋಲಿ(65) ಎಂಬವರು ಕಳೆದ 9 ತಿಂಗಳಿನಿಂದ ಸೌದಿಯಲ್ಲಿ ಜೈಲು ಸೇರಿದ್ದು, ಅವರನ್ನು ಜೈಲಿನಿಂದ ಪಾರು ಮಾಡುವಂತೆ ಕುಟುಂಬಸ್ಥರು ವಿದೇಶಾಂಗ ಇಲಾಖೆಗೆ ಪತ್ರ ಬರೆದಿದ್ದಾರೆ.
ಇಸ್ಮಾಯಿಲ್ ಅವರು ಕಳೆದ 27 ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಇದ್ದಾರೆ. ಹತ್ತು ವರ್ಷಗಳಿಂದ ರಿಯಾದ್ ನಲ್ಲಿ ಲಾಂಡ್ರಿ ಶಾಪ್ ನಡೆಸುತ್ತಿದ್ದರು. ಲಾಂಡ್ರಿ ಉದ್ಯಮದಲ್ಲಿ ನಷ್ಟಕ್ಕೊಳಗಾಗಿದ್ದ ಇಸ್ಮಾಯಿಲ್ ಅವರು ಕೇರಳದ ಇಬ್ಬರು ಮತ್ತು ಈಜಿಪ್ಟ್ ದೇಶದ ಒಬ್ಬರಲ್ಲಿ ಹಣವನ್ನು ಸಾಲ ಪಡೆದಿದ್ದರು. ಇದರಿಂದಾಗಿ ಲಾಂಡ್ರಿ ಶಾಪ್ ನಡೆಸುವುದಕ್ಕಾಗದೇ ಅದನ್ನು ಕಳಕೊಂಡಿದ್ದರು. ಅದರ ಮಾಲೀಕರು ಲಾಂಡ್ರಿ ಶಾಪ್ ಅನ್ನು ಬೇರೆಯವರಿಗೆ ನೀಡಿದ್ದರು.
ಇದೇ ವೇಳೆ, ಈಜಿಪ್ಟ್ ದೇಶದ ಪ್ರಜೆ ತನ್ನ ಹಣ ಪಡೆದು ವಂಚಿಸಿದ್ದಾನೆಂದು ಇಸ್ಮಾಯಿಲ್ ವಿರುದ್ಧ ದೂರು ನೀಡಿದ್ದರು. ಇದರಿಂದ ವಂಚನೆ ಪ್ರಕರಣದಲ್ಲಿ ಸೌದಿಯ ಕಾನೂನಿನಂತೆ ಇಸ್ಮಾಯಿಲ್ ಅವರನ್ನು ಪೊಲೀಸರು ಬಂಧಿಸಿದ್ದು, ಜೈಲಿಗೆ ಹಾಕಿದ್ದಾರೆ. ಆದರೆ 65 ವರ್ಷದ ಇಸ್ಮಾಯಿಲ್ ತೀವ್ರ ಮಧುಮೇಹ ಮತ್ತು ಬಿಪಿಯಿಂದ ಬಳಲುತ್ತಿದ್ದು, ಜೈಲಿನಲ್ಲಿ ತೊಂದರೆಗೆ ಸಿಲುಕಿದ್ದಾರೆ. ಹೀಗಾಗಿ ಇಸ್ಮಾಯಿಲ್ ಅವರ ಪುತ್ರಿ ವಿದೇಶಾಂಗ ಸಚಿವ ಜೈಶಂಕರ್ ಅವರಿಗೆ ಪತ್ರ ಬರೆದಿದ್ದು, ನೆರವು ಯಾಚಿಸಿದ್ದಾರೆ.
ಈ ಬಗ್ಗೆ ಇಸ್ಮಾಯಿಲ್ ಅವರ ಭಾವ, ಉಳ್ಳಾಲದ ಹಸನ್ ಮೊಹಮ್ಮದ್ ಅವರನ್ನು ಹೆಡ್ ಲೈನ್ ಕರ್ನಾಟಕ ಸಂಪರ್ಕಿಸಿದಾಗ, ಎಂಬೆಸ್ಸಿಯಿಂದ ಮರುದಿನವೇ ಫೋನ್ ಕರೆ ಬಂದಿದೆ. ಜೈಲಿನಿಂದ ಬಿಡುಗಡೆಗೆ ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ. ಅಲ್ಲದೆ, ನಾವು ಸೌದಿಯಲ್ಲಿ ಸಮಾಜ ಸೇವೆಯಲ್ಲಿ ತೊಡಗಿರುವ ಮಂದಿಗೂ ಸಹಾಯ ಕೇಳಿದ್ದೇವೆ. ಇಸ್ಮಾಯಿಲ್ ದೊಡ್ಡ ತಪ್ಪು ಮಾಡಿಲ್ಲ. ಈಜಿಪ್ಟ್ ವ್ಯಕ್ತಿಯ ಬಳಿ 15 ಸಾವಿರ ರಿಯಾಲ್ ಪಡೆದಿದ್ದರು. ಪ್ರತಿಯಾಗಿ 6 ಸಾವಿರ ರಿಯಾಲ್ ಹಿಂತಿರುಗಿಸಿದ್ದು, ಕೇವಲ 9 ಸಾವಿರ ಅಷ್ಟೇ ಬಾಕಿ ಇತ್ತು. ಆದರೆ, ಸೌದಿಯಲ್ಲಿ ಬಡ್ಡಿ ನಿಷೇಧ ಇದ್ದರೂ ಬಡ್ಡಿ ಮೊತ್ತ ಸೇರಿಸಿ 38 ಸಾವಿರ ರಿಯಾಲ್ ಬಾಕಿಯೆಂದು ದೂರು ನೀಡಿದ್ದಾರೆ. ಆ ಹಣವನ್ನು ಕೋರ್ಟಿಗೆ ಕಟ್ಟಿದರೆ ಬಿಡುಗಡೆ ಆಗಬಹುದು. ನಮ್ಮವರು ಯಾರೂ ಸೌದಿಯಲ್ಲಿ ಇಲ್ಲ. ಇದರಿಂದಾಗಿ ತೊಂದರೆಯಾಗಿದೆ ಎಂದು ಹೇಳಿದ್ದಾರೆ. ಈಗ ಆರೋಗ್ಯದಲ್ಲಿ ಏರುಪೇರಾಗಿದ್ದು ಇಸ್ಮಾಯಿಲ್ ಅವರೇ ಫೋನ್ ಕರೆ ಮಾಡಿದ್ದರು ಎಂದವರು ತಿಳಿಸಿದ್ದಾರೆ.
Mangalore 65-year-old Dandakere Ismail was arrested in Saudi Arabia over a financial dispute 10 months ago, and his health has been badly affected due to diabetes. His daughter, Mangalore Shainaz, writes a letter to External Affairs Minister Jaishankar, seeking help for his release.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
17-05-25 10:51 pm
HK News Desk
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
17-05-25 10:09 pm
Mangalore Correspondent
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
Siddaramaiah, Cm Mangalore, BJP black flag: ಸ...
16-05-25 06:05 pm
17-05-25 05:00 pm
Bangalore Correspondent
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm