ಬ್ರೇಕಿಂಗ್ ನ್ಯೂಸ್
01-04-24 02:09 pm Mangalore Correspondent ಕರಾವಳಿ
ಮಂಗಳೂರು, ಎ.1: ಮುಡಿಪು ಪೇಟೆಯ ರಾಜ್ಯ ಹೆದ್ದಾರಿಯನ್ನೇ ತಡೆದು ಇಫ್ತಾರ್ ಕೂಟ ಆಯೋಜಿಸಿದ ಬಗ್ಗೆ ತೀವ್ರ ಆಕ್ಷೇಪ ಕೇಳಿಬರುತ್ತಿದ್ದಂತೆ ಚುನಾವಣಾ ಅಧಿಕಾರಿಗಳು ಇಫ್ತಾರ್ ಆಯೋಜಕರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.
ಮೊನ್ನೆ ಶುಕ್ರವಾರ ಸಂಜೆ ಮುಡಿಪುವಿನ ಆಟೋ ಚಾಲಕರ ಸಂಘ, ರಾಜಕನ್ಮಾರ್ ಸಂಘಟನೆ ವತಿಯಿಂದ ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜಿಸಲಾಗಿತ್ತು. ಇಫ್ತಾರ್ ಕೂಟದಲ್ಲಿ ಹಿಂದುಗಳು ಸೇರಿ ಎಲ್ಲ ಸಮುದಾಯದವರು ಪಾಲ್ಗೊಂಡಿದ್ದರು. ರಸ್ತೆಯನ್ನು ಬಂದ್ ಮಾಡಿ ರಂಜಾನ್ ಹಿನ್ನೆಲೆಯಲ್ಲಿ ಇಫ್ತಾರ್ ಮಾಡಿರುವ ಬಗ್ಗೆ ವಿಡಿಯೋ ವೈರಲ್ ಆಗಿತ್ತು. ಜಾಲತಾಣದಲ್ಲಿ ಹಿಂದು ಸಂಘಟನೆಗಳ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು.

ರಸ್ತೆ ಮಧ್ಯೆ ಸಹ ಭೋಜನ ಮಾಡಿದ್ದರಿಂದ ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಹಿಂದು ಜಾಗರಣ ವೇದಿಕೆಯವರು ಸಹಾಯಕ ಚುನಾವಣಾ ಅಧಿಕಾರಿ, ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಅವರಿಗೆ ದೂರು ನೀಡಿದ್ದರು. ದೂರಿನ ಬೆನ್ನಲ್ಲೇ ಇಫ್ತಾರ್ ಆಯೋಜಿಸಿದ್ದ ಆಟೋ ಚಾಲಕರ ಸಂಘದ ಅಧ್ಯಕ್ಷ ಅಬುಬಕ್ಕರ್ ಅವರಿಗೆ ಸಹಾಯಕ ಕಮಿಷನರ್ ನೋಟಿಸ್ ನೀಡಿದ್ದು ಅನುಮತಿ ಇಲ್ಲದೆ ರಸ್ತೆಯನ್ನು ಬಂದ್ ಮಾಡಿ ಇಫ್ತಾರ್ ಕೂಟ ಆಯೋಜಿಸಿದ್ದನ್ನು ಗಂಭೀರ ಪರಿಗಣಿಸಲಾಗಿದೆ. ರಸ್ತೆ ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಿರುವ ವಿಚಾರದಲ್ಲಿ ನಿಮ್ಮ ವಿರುದ್ಧ ಯಾಕೆ ಕ್ರಮ ಕೈಗೊಳ್ಳಬಾರದು ಎಂದು ಶೋಕಾಸ್ ನೋಟಿಸ್ ಮಾಡಿದ್ದಾರೆ.
Iftar party organisers get notice from election commission for organising party at mudipu in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm