ಬ್ರೇಕಿಂಗ್ ನ್ಯೂಸ್
02-04-24 11:18 am Mangalore Correspondent ಕರಾವಳಿ
ಬಂಟ್ವಾಳ, ಏ 2: ಮನೆಯ ಮೇಲಿಂದ ಕೆಳಗೆಬಿದ್ದು 15 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬಂಟ್ವಾಳದಲ್ಲಿ ಕಳೆದ ರಾತ್ರಿ ನಡೆದಿದೆ. ಬಂಟ್ವಾಳದ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಪುತ್ರ ಆದಿಶ್, ಮೃತ ಬಾಲಕ.
ಬಾಲಕನಿಗೆ ಮೊಬೈಲ್ ಗೀಳು ಇತ್ತು. ಯಾವಾಗಲೂ ಮೊಬೈಲ್ನಲ್ಲೇ ಮುಳುಗಿರುತ್ತಿದ್ದನಂತೆ. ರಾತ್ರಿ ವೇಳೆ ಮೊಬೈಲ್ ನೋಡುತ್ತ ಹೋಗುವಾಗ ಆಯತಪ್ಪಿ ಮನೆಯ ಮೇಲಿಂದ ಕೆಳಗೆ ಬಿದ್ದು ಬಾಲಕ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಮನೆಯವರಿಗೆ ಗೊತ್ತಿಲ್ಲದಂತೆ ಮೊಬೈಲ್ ಹಿಡಿದುಕೊಂಡು ಮನೆ ಮೇಲೆ ಹೋಗಿದ್ದ ವೇಳೆ ಕೆಳಗೆ ಬಿದ್ದಿದ್ದಾನೆ. ಘಟನೆಯಲ್ಲಿ ಬಾಲಕನ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿತ್ತು. ಬಾಲಕನ ತಂದೆ ಬೆಳಗ್ಗೆ ಎದ್ದು ಹೊರಗೆ ಬಂದಾಗ ಆತ ಕೆಳಗೆ ಬಿದ್ದಿರುವುದು ಗಮನಕ್ಕೆ ಬಂದಿದೆ. ಮನೆ ಮೇಲಿಂದ ಬಟ್ಟೆ ತೊಳೆಯುವ ಕಲ್ಲಿನ ಮೇಲೆ ಬಾಲಕ ಬಿದ್ದಿರುವುದು ಕಂಡುಬಂದಿದೆ.
ಬಾಲಕನಿಗೆ ರಾತ್ರಿ ವೇಳೆಯೂ ಮೊಬೈಲ್ ಬಳಕೆ ಹಾಗೂ ಟಿವಿ ನೋಡುವ ಅಭ್ಯಾಸ ಇತ್ತು. ಮನೆ ತಗ್ಗು ಪ್ರದೇಶದಲ್ಲಿರುವ ಕಾರಣಕ್ಕೆ ಪಿಲ್ಲರ್ ಹಾಕಿ ಮೇಲೆ ಮನೆ ನಿರ್ಮಿಸಿದ್ದರು.
ಬಾಲಕನ ತಂದೆ ದಿನೇಶ್ ಹೋಟೆಲ್ ನಡೆಸುತ್ತಿದ್ದು, ಅವರ ಪತ್ನಿ ಬೆಳಗ್ಗೆ ಹೋಟೆಲ್ನಲ್ಲಿ ಕೆಲಸವಿದೆ ಎಂದು ಅಲ್ಲೇ ಮಲಗಿದ್ದರು. ಬಾಲ್ಯದಿಂದಲೂ ಒಬ್ಬನೇ ಮಲಗುವ ಅಭ್ಯಾಸವಿದ್ದ ಬಾಲಕ, ರಾತ್ರಿ ವೇಳೆ ಎದ್ದರೂ ತಂದೆ, ತಾಯಿ ಗಮನಕ್ಕೆ ಬರುತ್ತಿರಲಿಲ್ಲ. ಬಂಟ್ವಾಳ ಖಾಸಗಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದ ಆದಿಶ್ಗೆ ಇತ್ತೀಚಿಗಷ್ಟೇ ಪರೀಕ್ಷೆಗಳು ಮುಗಿದಿದ್ದವು.
ನಮ್ಮ ಮಗ ಯಾವಾಗಲೂ ಮೊಬೈಲ್ಅನ್ನು ಹಿಡಿದುಕೊಂಡೇ ಇರುತ್ತಿದ್ದ. ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದನೇ ಅಥವಾ ಏನನ್ನು ನೋಡುತ್ತಿದ್ದ ಎಂಬುದು ಗೊತ್ತಿಲ್ಲ ಎಂದು ಹೆತ್ತವರು ತಿಳಿಸಿದ್ದಾರೆ.
15 year old boy falls from house top and dies while using mobile at Bantwal in Mangalore. The deceased has been identified as Adish. It is said he was highly addicted to mobile phone.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm