ಬ್ರೇಕಿಂಗ್ ನ್ಯೂಸ್
03-04-24 04:25 pm Mangalore Correspondent ಕರಾವಳಿ
ಮಂಗಳೂರು, ಎ.3: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಅವರು ಅದ್ದೂರಿ ಮೆರವಣಿಗೆಯಲ್ಲಿ ತೆರಳಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಮೊದಲಿಗೆ ಶರವು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿ ತೆರೆದ ವಾಹನದಲ್ಲಿ ಕುದ್ರೋಳಿಯಿಂದ ಮೆರವಣಿಗೆ ಆರಂಭಿಸಿದರು. ನಾಮಪತ್ರ ಸಲ್ಲಿಕೆಯ ಮೆರವಣಿಗೆಗೆ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಚಾಲನೆ ನೀಡಿದರು. ತೆರೆದ ವಾಹನದಲ್ಲಿ ಸಚಿವ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ರಮಾನಾಥ ರೈ ಸೇರಿದಂತೆ ಮಂಗಳೂರಿನ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು.




ಕಲ್ಲಡ್ಕದ ಗೊಂಬೆಯಾಟ, ಚೆಂಡೆ ವಾದನ, ಹುಲಿ ವೇಷ, ಕೊಂಬು, ಕಹಳೆಗಳ ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರು ಕಾಲ್ನಡಿಗೆಯಲ್ಲಿ ಕುದ್ರೋಳಿಯಿಂದ ರಥಬೀದಿಯಾಗಿ ಹಂಪನಕಟ್ಟೆ, ಕ್ಲಾಕ್ ಟವರ್, ಸ್ಟೇಟ್ ಬ್ಯಾಂಕ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. ತೆರೆದ ವಾಹನದಲ್ಲಿ ನಿಂತುಕೊಂಡೇ ಅಭ್ಯರ್ಥಿ ಪದ್ಮರಾಜ್ ಕೈಬೀಸುತ್ತಾ ಸಾಗಿದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಹಿರಿಯ ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವ, ಲೋಕಸಭೆ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ರಮಾನಾಥ ರೈ, ಮಾಜಿ ಸಚಿವ ಅಭಯಚಂದ್ರ ಜೈನ್, ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಪುತ್ತೂರು ಶಾಸಕ ಅಶೋಕ್ ರೈ, ಬೆಳ್ತಂಗಡಿ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ರಕ್ಷಿತ್ ಶಿವರಾಂ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.



ಕಪ್ಪು ಚುಕ್ಕೆಯಿಂದಾಗಿ ಹೂಡಿಕೆ ಬರುತ್ತಿಲ್ಲ
ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಪದ್ಮರಾಜ್, ಕಳೆದ 33 ವರ್ಷಗಳಿಂದ ಈ ಜಿಲ್ಲೆಯ ಮೇಲೆ ಕೋಮು ಸೂಕ್ಷ್ಮ ಪ್ರದೇಶ ಎಂಬ ಕಪ್ಪು ಚುಕ್ಕೆ ಬಿದ್ದಿದೆ. ವಿಶಿಷ್ಟ ಸಂಸ್ಕೃತಿಯ ಜಿಲ್ಲೆಯಲ್ಲಿ ಬಿಜೆಪಿ ಆಡಳಿತದಲ್ಲಿ ಕೋಮು ಸಾಮರಸ್ಯ ಕದಡಿದ್ದು ದೊಡ್ಡ ಹಿನ್ನಡೆಯಾಗಿದೆ. ಅದನ್ನು ನಿವಾರಿಸುವುದೇ ನಮ್ಮ ಉದ್ದೇಶ. ಜಾತಿ ಧರ್ಮ ಮೀರಿದ ಬಾಂಧವ್ಯ ಮಾಯವಾಗಿದೆ. ಇದರಿಂದಾಗಿ ಈ ಭಾಗದಲ್ಲಿ ಹೂಡಿಕೆ ಆಗುತ್ತಿಲ್ಲ. ಜನರು ಇದರ ಬಗ್ಗೆ ಅರಿವು ಮೂಡಿಸಿಕೊಂಡಿದ್ದು ಬದಲಾವಣೆ ಬಯಸಿದ್ದಾರೆ. ನಿರುದ್ಯೋಗ ಹೆಚ್ಚಳದಿಂದಾಗಿ ಜನರು ಕಾಂಗ್ರೆಸಿನತ್ತ ವಾಲಿದ್ದು, ಮತವಾಗಿ ಪರಿವರ್ತನೆಯಾಗಲಿದೆ.
ರಾಜ್ಯ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿ ಯೋಜನೆಗಳಿಂದ ಗೃಹಿಣಿಯ ಮುಖದಲ್ಲಿ ನಗು ಮೂಡಿಸಿದೆ. ಬಡ ಕುಟುಂಬಗಳಿಗೆ ಶಕ್ತಿ ನೀಡಿದೆ. ನಾವು ಯಾರ ಬಗ್ಗೆಯೂ ದ್ವೇಷ ಮಾಡುವುದಿಲ್ಲ. ಟೀಕೆಯನ್ನೂ ಮಾಡುವುದಿಲ್ಲ. ವಾಸ್ತವ ಏನಿದೆಯೋ ಅದನ್ನು ಜನರ ಮುಂದಿಡುತ್ತೇನೆ. ಜಾತಿ ರಾಜಕಾರಣ ಮಾಡುವುದಿಲ್ಲ. ಜನರ ಸ್ಪಂದನೆ ಉತ್ತಮವಾಗಿದ್ದು, ಈ ಬಾರಿ ನೂರಕ್ಕೆ ನೂರು ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದರು.
Dakshina Kannada (DK) Congress MP candidate Padmaraj R filed his nomination at the DC’s office on Wednesday, April 3, for the upcoming Lok Sabha (LS) elections.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm