ಬ್ರೇಕಿಂಗ್ ನ್ಯೂಸ್
03-04-24 04:25 pm Mangalore Correspondent ಕರಾವಳಿ
ಮಂಗಳೂರು, ಎ.3: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಅವರು ಅದ್ದೂರಿ ಮೆರವಣಿಗೆಯಲ್ಲಿ ತೆರಳಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಮೊದಲಿಗೆ ಶರವು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿ ತೆರೆದ ವಾಹನದಲ್ಲಿ ಕುದ್ರೋಳಿಯಿಂದ ಮೆರವಣಿಗೆ ಆರಂಭಿಸಿದರು. ನಾಮಪತ್ರ ಸಲ್ಲಿಕೆಯ ಮೆರವಣಿಗೆಗೆ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಚಾಲನೆ ನೀಡಿದರು. ತೆರೆದ ವಾಹನದಲ್ಲಿ ಸಚಿವ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ರಮಾನಾಥ ರೈ ಸೇರಿದಂತೆ ಮಂಗಳೂರಿನ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು.




ಕಲ್ಲಡ್ಕದ ಗೊಂಬೆಯಾಟ, ಚೆಂಡೆ ವಾದನ, ಹುಲಿ ವೇಷ, ಕೊಂಬು, ಕಹಳೆಗಳ ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರು ಕಾಲ್ನಡಿಗೆಯಲ್ಲಿ ಕುದ್ರೋಳಿಯಿಂದ ರಥಬೀದಿಯಾಗಿ ಹಂಪನಕಟ್ಟೆ, ಕ್ಲಾಕ್ ಟವರ್, ಸ್ಟೇಟ್ ಬ್ಯಾಂಕ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. ತೆರೆದ ವಾಹನದಲ್ಲಿ ನಿಂತುಕೊಂಡೇ ಅಭ್ಯರ್ಥಿ ಪದ್ಮರಾಜ್ ಕೈಬೀಸುತ್ತಾ ಸಾಗಿದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಹಿರಿಯ ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವ, ಲೋಕಸಭೆ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ರಮಾನಾಥ ರೈ, ಮಾಜಿ ಸಚಿವ ಅಭಯಚಂದ್ರ ಜೈನ್, ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಪುತ್ತೂರು ಶಾಸಕ ಅಶೋಕ್ ರೈ, ಬೆಳ್ತಂಗಡಿ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ರಕ್ಷಿತ್ ಶಿವರಾಂ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.



ಕಪ್ಪು ಚುಕ್ಕೆಯಿಂದಾಗಿ ಹೂಡಿಕೆ ಬರುತ್ತಿಲ್ಲ
ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಪದ್ಮರಾಜ್, ಕಳೆದ 33 ವರ್ಷಗಳಿಂದ ಈ ಜಿಲ್ಲೆಯ ಮೇಲೆ ಕೋಮು ಸೂಕ್ಷ್ಮ ಪ್ರದೇಶ ಎಂಬ ಕಪ್ಪು ಚುಕ್ಕೆ ಬಿದ್ದಿದೆ. ವಿಶಿಷ್ಟ ಸಂಸ್ಕೃತಿಯ ಜಿಲ್ಲೆಯಲ್ಲಿ ಬಿಜೆಪಿ ಆಡಳಿತದಲ್ಲಿ ಕೋಮು ಸಾಮರಸ್ಯ ಕದಡಿದ್ದು ದೊಡ್ಡ ಹಿನ್ನಡೆಯಾಗಿದೆ. ಅದನ್ನು ನಿವಾರಿಸುವುದೇ ನಮ್ಮ ಉದ್ದೇಶ. ಜಾತಿ ಧರ್ಮ ಮೀರಿದ ಬಾಂಧವ್ಯ ಮಾಯವಾಗಿದೆ. ಇದರಿಂದಾಗಿ ಈ ಭಾಗದಲ್ಲಿ ಹೂಡಿಕೆ ಆಗುತ್ತಿಲ್ಲ. ಜನರು ಇದರ ಬಗ್ಗೆ ಅರಿವು ಮೂಡಿಸಿಕೊಂಡಿದ್ದು ಬದಲಾವಣೆ ಬಯಸಿದ್ದಾರೆ. ನಿರುದ್ಯೋಗ ಹೆಚ್ಚಳದಿಂದಾಗಿ ಜನರು ಕಾಂಗ್ರೆಸಿನತ್ತ ವಾಲಿದ್ದು, ಮತವಾಗಿ ಪರಿವರ್ತನೆಯಾಗಲಿದೆ.
ರಾಜ್ಯ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿ ಯೋಜನೆಗಳಿಂದ ಗೃಹಿಣಿಯ ಮುಖದಲ್ಲಿ ನಗು ಮೂಡಿಸಿದೆ. ಬಡ ಕುಟುಂಬಗಳಿಗೆ ಶಕ್ತಿ ನೀಡಿದೆ. ನಾವು ಯಾರ ಬಗ್ಗೆಯೂ ದ್ವೇಷ ಮಾಡುವುದಿಲ್ಲ. ಟೀಕೆಯನ್ನೂ ಮಾಡುವುದಿಲ್ಲ. ವಾಸ್ತವ ಏನಿದೆಯೋ ಅದನ್ನು ಜನರ ಮುಂದಿಡುತ್ತೇನೆ. ಜಾತಿ ರಾಜಕಾರಣ ಮಾಡುವುದಿಲ್ಲ. ಜನರ ಸ್ಪಂದನೆ ಉತ್ತಮವಾಗಿದ್ದು, ಈ ಬಾರಿ ನೂರಕ್ಕೆ ನೂರು ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದರು.
Dakshina Kannada (DK) Congress MP candidate Padmaraj R filed his nomination at the DC’s office on Wednesday, April 3, for the upcoming Lok Sabha (LS) elections.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm