ಬ್ರೇಕಿಂಗ್ ನ್ಯೂಸ್
03-04-24 04:58 pm Mangalore Correspondent ಕರಾವಳಿ
ಮಂಗಳೂರು, ಎ.3: ದೇಶದಲ್ಲಿ ಕಾನೂನಾತ್ಮಕ ರೀತಿಯಲ್ಲಿ ಭ್ರಷ್ಟಾಚಾರ ಮಾಡಿರುವುದು ಬಿಜೆಪಿ. ಅತಿ ಹೆಚ್ಚು ಭ್ರಷ್ಟಾಚಾರ ಮಾಡಿರುವ ಪಾರ್ಟಿ ಇದ್ದರೆ ಅದು ಬಿಜೆಪಿ. ಕಾನೂನನ್ನು ದುರುಪಯೋಗ ಮಾಡಿಕೊಂಡು ಬಿಜೆಪಿ 12 ಸಾವಿರ ಕೋಟಿಯನ್ನು ಲೂಟಿ ಮಾಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆಗಮಿಸಿದ್ದ ಸಚಿವರು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಐಟಿ, ಇಡಿಯಂತಹ ತನಿಖಾ ಸಂಸ್ಥೆಗಳನ್ನು ಮುಂದಿಟ್ಟು ನೀವು ಹಣ ಕೊಡದೇ ಇದ್ದರೆ ರೈಡ್ ಮಾಡ್ತೀವಿ ಎಂದು ಹೇಳಿ ಕೇಸು ಹಾಕಿಸಿ, ಬಳಿಕ ಹಣ ಕೊಟ್ಟ ಮೇಲೆ ಕೇಸನ್ನು ಮುಚ್ಚಿ ಹಾಕಿದ್ದಾರೆ. ಇದನ್ನೆಲ್ಲ ದೇಶದ ಜನರು ನೋಡುತ್ತಿದ್ದು, ಈ ಬಾರಿ ಉತ್ತರ ನೀಡಲಿದ್ದಾರೆ. ಈ ಸಲದ ಚುನಾವಣೆ ಅತ್ಯಂತ ಅಸಮಂಜಸ ಸ್ಥಿತಿಯಲ್ಲಿ ನಡೆಯುತ್ತಿದ್ದು, ಈ ಹಿಂದೆ ಯಾವತ್ತೂ ಈ ರೀತಿ ಆಗಿದ್ದು ಇಲ್ಲ.
ಕಾಂಗ್ರೆಸಿಗೆ ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರದ ಕೆಲಸಗಳು ಮತ್ತು ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆ. ಗ್ಯಾರಂಟಿ ಯೋಜನೆಯ ಲಾಭ ಪಡೆದವರು ನಮ್ಮ ಕೈಹಿಡಿಯಲಿದ್ದಾರೆ. ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಮೇಲೆ ವಿಶ್ವಾಸ, ನಂಬಿಕೆ ಬಂದಿದೆ. ಬಿಜೆಪಿಯವರು ಗ್ಯಾರಂಟಿ ಭರವಸೆಗಳನ್ನು ಹೇಳಿದ್ದು ಬಿಟ್ಟರೆ ಉಳಿಸಿಕೊಂಡಿಲ್ಲ.
ವರ್ಷಕ್ಕೆ ಎರಡು ಕೋಟಿ ಉದ್ಯೋಗ ಎಂದಿದ್ದನ್ನು ಮಾಡಿದ್ದಾರೆಯೇ.. ಡಾಲರಿಗೆ 45 ರೂಪಾಯಿ ಮಾಡ್ತೀವಿ ಎಂದಿದ್ದರು, ಈಗ ಡಾಲರಿಗೆ 83 ರೂ. ಆಗಿದೆ. ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಎಂದಿದ್ದರು. ರೈತರ ಸ್ಥಿತಿ ಏನಾಗಿದೆ, ಇವರು ಯಾವ್ದಾದ್ರೂ ಹೇಳಿದ್ದನ್ನು ಮಾಡಿದ್ದು ಇದೆಯೇ.. ಬಿಜೆಪಿ ಗ್ಯಾರಂಟಿಗೆ ಬೆಲೆ ಇಲ್ಲ, ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇದೆ ಎಂದು ಹೇಳಿದರು. ನಿನ್ನೆ ಅಮಿತ್ ಷಾ ಬಂದು ಸುಳ್ಳನ್ನೇ ಹೇಳಿಕೊಂಡು ಹೋಗಿದ್ದಾರೆ. ಬರ ಪರಿಹಾರ ಕೊಡದೆ ಸುಳ್ಳು ಹೇಳಿ ನಂಬಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
Mangalore Dinesh Gundu Rao says no guarantee works of BJP, no worth BJP gaurnatees in state, only congress gaurnatees are worth he slammed speaking to media persons in Mangalore.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm