ಬ್ರೇಕಿಂಗ್ ನ್ಯೂಸ್
03-04-24 04:58 pm Mangalore Correspondent ಕರಾವಳಿ
ಮಂಗಳೂರು, ಎ.3: ದೇಶದಲ್ಲಿ ಕಾನೂನಾತ್ಮಕ ರೀತಿಯಲ್ಲಿ ಭ್ರಷ್ಟಾಚಾರ ಮಾಡಿರುವುದು ಬಿಜೆಪಿ. ಅತಿ ಹೆಚ್ಚು ಭ್ರಷ್ಟಾಚಾರ ಮಾಡಿರುವ ಪಾರ್ಟಿ ಇದ್ದರೆ ಅದು ಬಿಜೆಪಿ. ಕಾನೂನನ್ನು ದುರುಪಯೋಗ ಮಾಡಿಕೊಂಡು ಬಿಜೆಪಿ 12 ಸಾವಿರ ಕೋಟಿಯನ್ನು ಲೂಟಿ ಮಾಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆಗಮಿಸಿದ್ದ ಸಚಿವರು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಐಟಿ, ಇಡಿಯಂತಹ ತನಿಖಾ ಸಂಸ್ಥೆಗಳನ್ನು ಮುಂದಿಟ್ಟು ನೀವು ಹಣ ಕೊಡದೇ ಇದ್ದರೆ ರೈಡ್ ಮಾಡ್ತೀವಿ ಎಂದು ಹೇಳಿ ಕೇಸು ಹಾಕಿಸಿ, ಬಳಿಕ ಹಣ ಕೊಟ್ಟ ಮೇಲೆ ಕೇಸನ್ನು ಮುಚ್ಚಿ ಹಾಕಿದ್ದಾರೆ. ಇದನ್ನೆಲ್ಲ ದೇಶದ ಜನರು ನೋಡುತ್ತಿದ್ದು, ಈ ಬಾರಿ ಉತ್ತರ ನೀಡಲಿದ್ದಾರೆ. ಈ ಸಲದ ಚುನಾವಣೆ ಅತ್ಯಂತ ಅಸಮಂಜಸ ಸ್ಥಿತಿಯಲ್ಲಿ ನಡೆಯುತ್ತಿದ್ದು, ಈ ಹಿಂದೆ ಯಾವತ್ತೂ ಈ ರೀತಿ ಆಗಿದ್ದು ಇಲ್ಲ.
ಕಾಂಗ್ರೆಸಿಗೆ ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರದ ಕೆಲಸಗಳು ಮತ್ತು ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆ. ಗ್ಯಾರಂಟಿ ಯೋಜನೆಯ ಲಾಭ ಪಡೆದವರು ನಮ್ಮ ಕೈಹಿಡಿಯಲಿದ್ದಾರೆ. ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಮೇಲೆ ವಿಶ್ವಾಸ, ನಂಬಿಕೆ ಬಂದಿದೆ. ಬಿಜೆಪಿಯವರು ಗ್ಯಾರಂಟಿ ಭರವಸೆಗಳನ್ನು ಹೇಳಿದ್ದು ಬಿಟ್ಟರೆ ಉಳಿಸಿಕೊಂಡಿಲ್ಲ.
ವರ್ಷಕ್ಕೆ ಎರಡು ಕೋಟಿ ಉದ್ಯೋಗ ಎಂದಿದ್ದನ್ನು ಮಾಡಿದ್ದಾರೆಯೇ.. ಡಾಲರಿಗೆ 45 ರೂಪಾಯಿ ಮಾಡ್ತೀವಿ ಎಂದಿದ್ದರು, ಈಗ ಡಾಲರಿಗೆ 83 ರೂ. ಆಗಿದೆ. ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಎಂದಿದ್ದರು. ರೈತರ ಸ್ಥಿತಿ ಏನಾಗಿದೆ, ಇವರು ಯಾವ್ದಾದ್ರೂ ಹೇಳಿದ್ದನ್ನು ಮಾಡಿದ್ದು ಇದೆಯೇ.. ಬಿಜೆಪಿ ಗ್ಯಾರಂಟಿಗೆ ಬೆಲೆ ಇಲ್ಲ, ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇದೆ ಎಂದು ಹೇಳಿದರು. ನಿನ್ನೆ ಅಮಿತ್ ಷಾ ಬಂದು ಸುಳ್ಳನ್ನೇ ಹೇಳಿಕೊಂಡು ಹೋಗಿದ್ದಾರೆ. ಬರ ಪರಿಹಾರ ಕೊಡದೆ ಸುಳ್ಳು ಹೇಳಿ ನಂಬಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
Mangalore Dinesh Gundu Rao says no guarantee works of BJP, no worth BJP gaurnatees in state, only congress gaurnatees are worth he slammed speaking to media persons in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm