ಬ್ರೇಕಿಂಗ್ ನ್ಯೂಸ್
03-04-24 06:02 pm Bangalore Correspondent ಕರಾವಳಿ
ಮಂಗಳೂರು, ಎ.3: ದಕ್ಷಿಣ ಕನ್ನಡ ಹಿಂದುತ್ವದ ಭದ್ರಕೋಟೆ ಎಂಬ ಪ್ರಶ್ನೆಗೆ, ಹಿಂದೆ ರಾಜರು ಕಟ್ಟಿದ ಕೋಟೆಗಳೇ ಉಳಿದಿಲ್ಲ. ಪುಡಿಯಾಗಿ ಹೋಗಿವೆ. ಮಹಾರಾಷ್ಟ್ರದಲ್ಲಿ ಸಾವರ್ಕರ್ ಕಟ್ಟಿದ ಹಿಂದುತ್ವದ ಕೋಟೆಯೂ ಉಳಿದಿಲ್ಲ. ಇದೆಲ್ಲ ಯಾವ ಲೆಕ್ಕ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆಗಮಿಸಿದ್ದ ಅವರಲ್ಲಿ ಮಾಧ್ಯಮದವರು ಪ್ರಶ್ನೆ ಇಟ್ಟಾಗ, ಹಿಂದೆ ಸಾವರ್ಕರ್ ಮಹಾರಾಷ್ಟ್ರದಲ್ಲಿ ಹಿಂದುತ್ವದ ಕೋಟೆ ಅಂತ ಮಾಡಿದ್ದರು. ಆ ಕೋಟೆಯೇ ಉಳಿದುಕೊಂಡಿಲ್ಲ. ಇವರು ಹಣ ಕೊಟ್ಟು ಕೋಟೆಗಳನ್ನು ಖರೀದಿಸಲು ಸಾಧ್ಯವಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರಣಾಂತರಗಳಿಂದ ಬಿಜೆಪಿ ಗೆದ್ದಿದೆ. ಅದಕ್ಕೆ ಹಿಂದುತ್ವದ ಕೋಟೆ ಕಾರಣವಲ್ಲ. ಇದ್ಯಾವುದೇ ಕೋಟೆಗಳೂ ಉಳಿಯೋದಿಲ್ಲ ಎಂದು ಹೇಳಿದರು.
ದೇಶ ವಿಭಜನೆ ಹೇಳಿಕೆ ನೀಡಿದವರಿಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿದ್ದಾರೆಂದು ಅಮಿತ್ ಷಾ ಟೀಕಿಸಿದ್ದನ್ನು ಕೇಳಿದಾಗ, ಹಿಂದೆ ಇಂದಿರಾ ಗಾಂಧಿ ಕಾಲದಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ ವಿಭಜನೆಯಾಗಿತ್ತು. ಅದು ಬಿಟ್ಟರೆ ಯಾರೋ ಹೇಳಿಕೆ ನೀಡಿದರೆ ದೇಶ ವಿಭಜನೆ ಆಗುತ್ತಾ.. ಹಿಂದೆ ಸಿಕ್ಕಿಂ ಸ್ವತಂತ್ರ ದೇಶವಾಗಿದ್ದುದನ್ನು ನಮ್ಮ ದೇಶದಲ್ಲಿ ರಾಜ್ಯವಾಗಿಸಿ ಜೋಡಿಸಿದ್ದು ಇಂದಿರಾ ಗಾಂಧಿ. ಈಗಲೂ ಆಡಳಿತದಲ್ಲಿರುವ ಸರಕಾರಕ್ಕೆ ದೇಶವನ್ನು ಉಳಿಸುವ ಜವಾಬ್ದಾರಿ ಇರುತ್ತದೆ.
ಮೋದಿಯವರು ಈಗ ಕಛ್ ದೀವು ದ್ವೀಪವನ್ನು ಬಿಟ್ಟು ಕೊಡುವುದಾಗಿ ಹೇಳಿದ್ದಾರೆ. ಇವರ ಆರೆಸ್ಸೆಸ್, ಬಿಜೆಪಿಯವರು ಹೇಳಿದಂತೆ ಚೀನಾ ಎರಡು ಸಾವಿರ ಚದರ ಕಿಲೋ ಮೀಟರ್ ಜಾಗವನ್ನು ಅತಿಕ್ರಮಿಸಿದೆ. ಈ ವಿಚಾರ ನಾವು ಹೇಳಿದ್ದಲ್ಲ. ಅವರದೇ ಸದಸ್ಯರು ಹೇಳಿದ್ದಾರೆ. ಆ ಭೂಮಿಯನ್ನು ಯಾವಾಗ ಮರಳಿ ಕಿತ್ತುಕೊಳ್ಳುತ್ತಾರೆಂದು ಹೇಳಲಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್, ಪ್ರಧಾನಿ ಮೋದಿಗೆ ಸವಾಲೆಸೆದಿದ್ದಾರೆ.
B K Hariprasad slams about Hindutva in Mangalore, says we have destroyed Savarkar, Mangalore Hindutva is nothing before us he added.
13-07-26 10:32 am
HK News Staffer
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 11:51 am
HK News Staffer
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm