ಬ್ರೇಕಿಂಗ್ ನ್ಯೂಸ್
05-04-24 07:01 pm Mangalore Correspondent ಕರಾವಳಿ
ಮಂಗಳೂರು, ಎ.5: ಸೌಜನ್ಯಾ ಪರ ಹೋರಾಟಕ್ಕೆ ಪ್ರಮುಖ ರಾಜಕೀಯ ಪಕ್ಷಗಳು ಬೆಂಬಲ ನೀಡದೇ ಇರುವುದರಿಂದ ಹೋರಾಟಗಾರರು ನೋಟಾ ಅಭಿಯಾನ ಕೈಗೆತ್ತಿಕೊಂಡಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಈ ಬಗ್ಗೆ ಜಾಗೃತಿ ಅಭಿಯಾನ ನಡೆಸಲಾಗುವುದು ಎಂದು ಹೋರಾಟ ಸಮಿತಿಯ ಗಿರೀಶ್ ಮಟ್ಟೆಣ್ಣನವರ್ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ನೋಟಾ ಅಭಿಯಾನ ಯಾಕೆ ಮಾಡಬೇಕು, ಅದರಿಂದ ಯಾವ ಸಾಧನೆ ಮಾಡಲು ಸಾಧ್ಯ ಎಂಬ ಪ್ರಶ್ನೆಯನ್ನು ಕೆಲವರು ಕೇಳುತ್ತಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಪ್ರಕಾರ, ವ್ಯವಸ್ಥೆಯ ವಿರುದ್ಧ ಆಕ್ರೋಶ ಉಂಟಾದಾಗ, ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಬಗ್ಗೆ ಅಸಮ್ಮತಿ ಇದ್ದಾಗ, ರಾಜಕೀಯ ವ್ಯವಸ್ಥೆಯ ಶುದ್ಧೀಕರಣಕ್ಕಾಗಿ ನೋಟಾ ಇರುವುದು. ಇವಿಎಂ ಮೆಷಿನಲ್ಲಿ ಇರುವ ಅಭ್ಯರ್ಥಿಗಳ ಪೈಕಿ ಯಾರಿಗೂ ನನ್ನ ಮತ ಇಲ್ಲವೆಂದು ದಾಖಲೀಕರಣ ಮಾಡುವುದು ನೋಟಾ ಆಗಿರುತ್ತದೆ.
ಅತಿ ಹೆಚ್ಚು ನೋಟಾ ದಾಖಲಾಗುವುದರಿಂದ ವಿಷಯಾಧಾರಿತವಾಗಿ ಇಡೀ ದೇಶದ ಗಮನಸೆಳೆಯಲು ಸಾಧ್ಯವಿದೆ. ನ್ಯಾಯಾಂಗ, ಕಾರ್ಯಾಂಗದ ಗಮನ ಸೆಳೆಯುವುದಕ್ಕಾಗಿ ಅಭಿಯಾನ ಮಾಡುತ್ತೇವೆ. ಬಿಹಾರದ ಲೋಕಸಭೆ ಕ್ಷೇತ್ರ ಒಂದರಲ್ಲಿ 51 ಸಾವಿರ ನೋಟಾ ಮತ ಬಿದ್ದಿರುವುದು ಇಡೀ ದೇಶದ ಗಮನ ಸೆಳೆದಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಚಾರ್ವಾಕ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಇದೇ ರೀತಿ ಗೆದ್ದ ಅಭ್ಯರ್ಥಿಗಿಂತ ಎರಡನೇ ಅತಿ ಹೆಚ್ಚು ನೋಟಾ ಬಿದ್ದಿರುವುದು ದಾಖಲಾಗಿತ್ತು. ರಸ್ತೆಯ ವಿಚಾರದಲ್ಲಿ ಜನರ ಪ್ರತಿಭಟನೆ ಇರುವುದನ್ನು ತಿಳಿದು ಚುನಾವಣೆಯಾದ ಬೆನ್ನಲ್ಲೇ ಅಲ್ಲಿ ರಸ್ತೆ ನಿರ್ಮಾಣ ಆಗಿತ್ತು.
ಇಡೀ ರಾಜ್ಯದಲ್ಲಿ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂಬ ನಿಟ್ಟಿನಲ್ಲಿ ನೋಟಾ ಅಭಿಯಾನ ಮಾಡುತ್ತಿದ್ದೇವೆ. ಈ ಬಾರಿ ಹೆಣ್ಮಕ್ಕಳ ಪರವಾಗಿ ಧ್ವನಿ ಎತ್ತುವುದಕ್ಕಾಗಿ ನೋಟಾಕ್ಕೆ ಮತ ಹಾಕಬೇಕೆಂದು ಜನರಲ್ಲಿ ಕೇಳಿಕೊಳ್ಳುತ್ತೇವೆ. ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತೆಲಂಗಾಣ, ಆಂಧ್ರಪ್ರದೇಶ, ಉತ್ತರ ಪ್ರದೇಶದಲ್ಲಿ ಹೆಚ್ಚು ಗಂಭೀರವಾಗಿ ತೆಗೆದುಕೊಳ್ಳುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ಅನ್ನುವುದೂ ನಮ್ಮ ಕಳಕಳಿ. ನೋಟಾಗೆ ಅತಿ ಹೆಚ್ಚು ಮತಗಳು ಬಂದರೆ ನ್ಯಾಯಾಂಗದ ಗಮನಕ್ಕೆ ಬಂದು ಸೌಜನ್ಯಾ ಪ್ರಕರಣದ ಬಗ್ಗೆ ನಿರ್ಧಾರಕ್ಕೆ ಬರಬಹುದೆಂಬ ವಿಶ್ವಾಸವಿದೆ. ಸೌಜನ್ಯಾ ಮಾತ್ರವಲ್ಲ, ಈ ಭಾಗದಲ್ಲಿ ವೇದವಲ್ಲಿ, ಪ್ರೇಮಲತಾ ಹೀಗೆ ಹಲವಾರು ಅತ್ಯಾಚಾರ, ಕೊಲೆ ಪ್ರಕರಣವಾಗಿದ್ದು, ಹೀಗಾಗಿ ಕರಾವಳಿ ಜೆಲ್ಲೆಗಳಲ್ಲಿ ಅಭಿಯಾನಕ್ಕೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ಸುಳ್ಯದಲ್ಲಿ ಎ.24ರಂದು ಬೃಹತ್ ಜನಜಾಗೃತಿ ಸಮಾವೇಶವನ್ನೂ ಮಾಡುತ್ತೇವೆ ಎಂದು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಪ್ರಸನ್ನ ರವಿ, ತಮ್ಮಣ್ಣ ಶೆಟ್ಟಿ ಉಪಸ್ಥಿತರಿದ್ದರು.
NOTA Movement for Saujanya; Awareness campaign to make the country aware of cases of sexual violence; Girish Mattennavar.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm