ಬ್ರೇಕಿಂಗ್ ನ್ಯೂಸ್
06-04-24 12:29 pm Mangalore Correspondent ಕರಾವಳಿ
ಉಳ್ಳಾಲ, ಎ.6: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಅವರು ಉಳ್ಳಾಲದಲ್ಲಿ ಮತಯಾಚನೆ ನಡೆಸಿದರು. ಈ ವೇಳೆ ಹಿರಿಯರು, ಮಾಜಿ ಶಾಸಕರಾದ ಶಕುಂತಳಾ ಶೆಟ್ಟಿಯವರು ಪದ್ಮರಾಜ್ ಅವರನ್ನ ಆಶೀರ್ವದಿಸಿ ಸಲಹೆ ನೀಡಿದರು.
ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರು ಪ್ರತಿನಿಧಿಸುವ ಮಂಗಳೂರು (ಉಳ್ಳಾಲ) ಕ್ಷೇತ್ರದ ಕಲ್ಲಾಪು ಗ್ಲೋಬಲ್ ಮಾರ್ಕೆಟ್ ಗೆ ಇಂದು ಬೆಳಗ್ಗೆ ಪದ್ಮರಾಜ್ ಭೇಟಿ ನೀಡಿ ವರ್ತಕರು, ಗ್ರಾಹಕರಲ್ಲಿ ಮತಯಾಚನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಮಾರುಕಟ್ಟೆಯ ವರ್ತಕರು ನನಗೆ ನೀಡಿದ ಪ್ರೀತಿಗೆ ನಾನು ಆಭಾರಿಯಾಗಿದ್ದೇನೆ. ಮಂಗಳೂರು ಸೆಂಟ್ರಲ್ ಮಾರುಕಟ್ಟೆಯ ಸಮಸ್ಯೆಯಿಂದ ವರ್ತಕರು ಯಾವ ರೀತಿಯ ತೊಂದರೆ ಅನುಭವಿಸುತ್ತಿದ್ದಾರೆ ಎನ್ನುವುದನ್ನು ಅರಿತಿದ್ದೇನೆ. ಮಂಗಳೂರು ನಗರ ದೇಶದ ಬಲಿಷ್ಠ ನಗರಗಳಲ್ಲಿ ಒಂದಾಗಬೇಕು ಎನ್ನುವುದು ನನ್ನ ಗುರಿ. ಮಂಗಳೂರಿನಲ್ಲಿ ಸುಸಜ್ಜಿತ ಅಂತಾರಾಷ್ಟ್ರೀಯ ಮಾದರಿಯ ಮಾರುಕಟ್ಟೆ ನಿರ್ಮಾಣಕ್ಕೆ ಶಕ್ತಿಮೀರಿ ಪ್ರಯತ್ನಿಸುತ್ತೇನೆ. ಮಂಗಳೂರಿನಲ್ಲಿ ನಲ್ವತ್ತು ವರುಷಗಳ ಕಾಲ ಕಾಂಗ್ರೆಸ್ ಸಂಸದರಿದ್ದರು. ನಂತರ ಬಿಜೆಪಿಯವರು ಸುಳ್ಳು ಹೇಳಿ ಜಯ ಗಳಿಸಿದರೆ ಹೊರತು ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿಲ್ಲ. ಈಗಾಗಲೇ ನಾನು ಬಹುತೇಕ ಮತದಾರರನ್ನ ತಲುಪಿದ್ದೇನೆ. ಮುಂದಿನ ಹದಿನೈದು ದಿವಸಗಳಲ್ಲಿ ಎಲ್ಲ ಮತದಾರರನ್ನು ಮುಟ್ಟುವ ಪ್ರಯತ್ನ ನಡೆಸುತ್ತೇನೆ. ಮತದಾರ ಪ್ರಭುಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ನಮಗೆ ಸ್ಟಾರ್ಗಳೇ ಹೊರತು ಮಂಗಳೂರಿಗೆ ಸ್ಟಾರ್ ಪ್ರಚಾರಕರ ಅಗತ್ಯ ಇಲ್ಲ ಎಂದರು.


ಮಾಜಿ ಶಾಸಕಿ ಆಶೀರ್ವಾದ
ಪದ್ಮರಾಜ್ ಅವರು ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರ ಕುತ್ತಾರಿನ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು. ಈ ವೇಳೆ ಮಾತನಾಡಿದ ಶಕುಂತಳಾ ಶೆಟ್ಟಿಯವರು ಮೂವತ್ತು ವರ್ಷದ ಬಳಿಕ ಮಂಗಳೂರಿನಲ್ಲಿ ಮತ್ತೊಮ್ಮೆ ಕಾಂಗ್ರೆಸ್ನ ಗತ ವೈಭವವನ್ನು ಕಾಣುವಂತೆ ಮಾಡಬೇಕು. ಮಾಜಿ ಸಚಿವರಾದ ಜನಾರ್ಧನ ಪೂಜಾರಿಯವರಂತೆ ಆರ್ಥಿಕವಾಗಿ ಹಿಂದುಳಿದವರ ಸೇವೆ ಮಾಡಬೇಕು ಎಂದು ಹಾರೈಸಿದರು.
ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳ, ಕುತ್ತಾರು ಆದಿಸ್ಥಳ ಶ್ರೀ ರಕ್ತೇಶ್ವರಿ, ಬೆರ್ಮೆರ್, ಏಳ್ವೆರ್ ಸಿರಿಗಳು, ಕೊರಗಜ್ಜ ಕ್ಷೇತ್ರ, ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಕೊಲ್ಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿದ ಪದ್ಮರಾಜ್ ಗೆಲುವಿಗಾಗಿ ಪ್ರಾರ್ಥಿಸಿದರು. ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರು, ಸೋಮೇಶ್ವರ ಪುರಸಭೆ ಸದಸ್ಯ ದೀಪಕ್ ಪಿಲಾರ್, ತಾ.ಪಂ ನಿಕಟಪೂರ್ವ ಅಧ್ಯಕ್ಷ ಮಹಮ್ಮದ್ ಮೋನು, ಉಳ್ಳಾಲ ನಗರಸಭಾ ಮಾಜಿ ಸದಸ್ಯ ಉಸ್ಮಾನ್ ಕಲ್ಲಾಪು, ಗ್ಲೋಬಲ್ ಮಾರುಕಟ್ಟೆಯ ಪ್ರಮುಖರಾದ ಎ.ಜೆ.ಶೇಖರ್, ಹಾಶೀರ್, ವಿಲ್ಮಾ ಡಿಸೋಜ, ಪ್ರಭಾವತಿ ಶೆಟ್ಟಿ, ನಂದಿನಿ, ಮುನ್ನೂರು ಪಂಚಾಯತ್ ಮಾಜಿ ಅಧ್ಯಕ್ಷ ವಿಲ್ಪ್ರೆಡ್ ಡಿ ಸೋಜ, ಸದಸ್ಯರಾದ ನವೀನ್ ಡಿಸೋಜ ಮೊದಲಾದವರಿದ್ದರು.
Mangalore Congress candidate Padmaraj campaigns at ullal, visit temple.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm