ಬ್ರೇಕಿಂಗ್ ನ್ಯೂಸ್
06-04-24 04:14 pm Mangalore Correspondent ಕರಾವಳಿ
ಮಂಗಳೂರು, ಎ.6: ಬಜರಂಗದಳ ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲು ಅವರನ್ನು ಚುನಾವಣೆ ಸಂದರ್ಭದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದ ಆಗಬಾರದೆಂದು ಮೈಸೂರಿಗೆ ಗಡಿಪಾರು ಮಾಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಭರತ್ ಕುಮ್ಡೇಲು ಅವರನ್ನು ಮಾ.28ರಿಂದ ಜೂ.30ರ ವರೆಗೆ ದ.ಕ. ಜಿಲ್ಲೆಯಿಂದ ಮೈಸೂರು ಜಿಲ್ಲೆಯ ಸರಸ್ವತಿಪುರಂ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಿ, ತಕ್ಷಣದಿಂದ ಜಾರಿಗೆ ಬರುವಂತೆ ಮಂಗಳೂರು ಉಪ ವಿಭಾಗದ ದಂಡಾಧಿಕಾರಿ ಹರ್ಷವರ್ಧನ ಎಸ್.ಜೆ. ಆದೇಶ ಮಾಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಭರತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಗಡಿಪಾರು ಆದೇಶವನ್ನು ರದ್ದುಪಡಿಸಿದೆ.
ಬಂಟ್ವಾಳ ತಾಲೂಕು ಪುದು ಗ್ರಾಮದ ನಿವಾಸಿ ಭರತ್ ಕುಮ್ಡೇಲು ಬಜರಂಗದಳ ಜಿಲ್ಲಾ ಸಂಯೋಜಕ ಜವಾಬ್ದಾರಿಯಲ್ಲಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಹೊಂದಿದ್ದು ವೆಹಿಕಲ್ ಸೀಝರ್ ಇನ್ನಿತರ ಕೆಲಸ ಮಾಡಿಕೊಂಡಿದ್ದಾರೆ. ಬಜರಂಗದಳ ಕಾರ್ಯಕರ್ತನಾಗಿದ್ದು ತನ್ನ ಸಹಚರರೊಂದಿಗೆ ಸೇರಿ ಫರಂಗಿಪೇಟೆ, ಕಡೆಗೋಳಿ, ಬಿಸಿರೋಡ್ ಹಾಗೂ ಬಂಟ್ವಾಳ ಪರಿಸರದಲ್ಲಿ ಕೊಲೆ, ಕೊಲೆಯತ್ನ, ದೊಂಬಿ, ಹಲ್ಲೆ, ಗಲಭೆ ಇತ್ಯಾದಿಗಳನ್ನು ನಡೆಸಿ ಸಾರ್ವಜನಿಕ ಶಾಂತಿಭಂಗ ಕೃತ್ಯಗಳಲ್ಲಿ ತೊಡಗಿದ್ದು ಸಾಮಾಜಿಕ ಸಾಮರಸ್ಯಕ್ಕೆ ತೊಡಕು ಉಂಟುಮಾಡುವ ಪ್ರವೃತ್ತಿಯವರು ಎಂದು ಪೊಲೀಸರು ವರದಿ ನೀಡಿದ್ದರು.
ಇದರಂತೆ, ಪೊಲೀಸ್ ಕಾಯ್ದೆ ಕಲಂ 55(ಬಿ)ಯಡಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡುವಂತೆ ಬಂಟ್ವಾಳ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕರು ಮಂಗಳೂರು ಉಪವಿಭಾಗದ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಅದರಂತೆ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55(ಎ)ಮತ್ತು 55(ಬಿ) ಅಡಿಯಲ್ಲಿ ಭರತ್ ಕುಮ್ಡೇಲು ಅವರನ್ನು ಮಾ.28ರಿಂದ ಜೂ.30ರ ವರೆಗೆ ದ.ಕ. ಜಿಲ್ಲೆಯಿಂದ ಮೈಸೂರಿಗೆ ಗಡಿಪಾರು ಮಾಡಿ, ತಕ್ಷಣದಿಂದ ಜಾರಿಗೆ ಬರುವಂತೆ ಮಂಗಳೂರು ಉಪವಿಭಾಗದ ದಂಡಾಧಿಕಾರಿ ಹರ್ಷವರ್ಧನ ಎಸ್.ಜೆ. ಆದೇಶ ಮಾಡಿದ್ದರು. ಭರತ್ ಕುಮ್ಡೇಲು ಪರವಾಗಿ ಹೈಕೋರ್ಟಿನಲ್ಲಿ ಅರುಣ್ಶ್ಯಾಮ್ ಹಾಗೂ ಸುಯೋಗ್ ಹೇರಳೆ ವಕಾಲತ್ತು ವಹಿಸಿದ್ದರು.
Mangalore Bharath Kumdel from Bajrang Dal exile notice, court brings stay.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 07:19 pm
Mangalore Correspondent
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
15-07-25 06:52 pm
Bangalore Correspondent
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am