ಬ್ರೇಕಿಂಗ್ ನ್ಯೂಸ್
30-11-20 02:55 pm Udupi Correspondent ಕರಾವಳಿ
ಉಡುಪಿ, ನ.30 : ಹಿಂದೂ ಧರ್ಮ ಏನು ಬಿಜೆಪಿಗರ ಸ್ವತ್ತಾ? ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆಗೆ ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ. ಹೌದು, ಖಂಡಿತವಾಗಿಯೂ ಕರಾವಳಿಯನ್ನು ನಾವು ದತ್ತು ತಗೊಂಡಿದ್ದೇವೆ. ಕರ್ನಾಟಕ ಕರಾವಳಿ ನಮ್ಮದೇ. ಉಡುಪಿಯ ಐವರು ಶಾಸಕರು ಬಿಜೆಪಿಯವರೇ ಎಂದು ಟಾಂಗ್ ನೀಡಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಸಂಸದೆ, "ಈ ಭಾಗವನ್ನು ದತ್ತು ತೆಗೆದುಕೊಳ್ಳುತ್ತೇವೆ, ಅಭಿವೃದ್ಧಿನೂ ಮಾಡುತ್ತೇವೆ. ಕಾಂಗ್ರೆಸ್ ಜನವಿರೋಧಿ ನೀತಿಗೆ ಕರಾವಳಿ ಜನ ತಕ್ಕ ಪಾಠ ಕಲಿಸುತ್ತಾರೆ. ದೇವರ ವಿಚಾರದಲ್ಲಿ ನಾವು ರಾಜಕೀಯ ಮಾಡುತ್ತಿಲ್ಲ, ಡಿಕೆಶಿ ಚುನಾವಣೆ ಬಂದಾಗ ಮಾತ್ರ ದೇವಸ್ಥಾನ ತಿರುಗುತ್ತಾರೆ'' ಎಂದು ಆರೋಪಿಸಿದರು.
ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸಿಡಿ ಹೇಳಿಕೆಗೆ, ಪ್ರತಿಕ್ರಿಯಿಸಿ ಶೋಭಾ ಕರಂದ್ಲಾಜೆ, ಡಿಕೆಶಿಯವರು ತಮಗೆ ಗೊತ್ತಿರುವ ಮಾಹಿತಿಯನ್ನು ಬಹಿರಂಗಪಡಿಸಲಿ. ಬುಟ್ಟಿಯಲ್ಲಿ ಹಾವಿದೆ, ಹಾವಿದೆ ಎಂದು ಹೆದರಿಸುವ ಕೆಲಸ ಬೇಡ. ಸಾಧ್ಯವಿದ್ದರೆ ಆ ಹಾವನ್ನು ಹೊರಗೆ ಬಿಡಿ. ಈ ಪ್ರಕರಣದಲ್ಲಿ ನಿಮ್ಮ ಷಡ್ಯಂತ್ರ ಏನಾದರೂ ಇದೆಯಾ? ನಮ್ಮ ನಾಯಕರ ವಿರುದ್ಧ ಏನು ಷಡ್ಯಂತ್ರ ಮಾಡಿದ್ದೀರಿ ಎಂದು ಪ್ರಶ್ನಿಸಿದರು.

ಸುಳ್ಳು ಹೇಳುವುದರಲ್ಲಿ ಯಡಿಯೂರಪ್ಪ ಮಿನಿ ಮೋದಿ ಇದ್ದಂತೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಗರಂ ಆದ ಸಂಸದೆ ಶೋಭಾ ಕರಂದ್ಲಾಜೆ, ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಹೇಗೆ ಆಡಳಿತ ಮಾಡಿದ್ದಾರೆ ಎಂಬುದನ್ನು ನೋಡಿದ್ದೇವೆ. ಜಾತಿ ಜಾತಿಯನ್ನು ಒಡೆಯುವ ನೀತಿ ಮಾಡಿದ್ದರು. ಅಭಿವೃದ್ಧಿಗಿಂತ ಹೆಚ್ಚಾಗಿ ಜಾತಿ ಒಡೆಯುವುದರಲ್ಲಿ ಮಗ್ನರಾಗಿದ್ದರು ಎಂದು ತಿರುಗೇಟು ನೀಡಿದರು.
ನರೇಂದ್ರ ಮೋದಿ ಕೊಟ್ಟ ಅಕ್ಕಿ, ಗೋಧಿ ಬಳಕೆ ಮಾಡಿಕೊಂಡಿರಿ. ನಾನೇ ಅನ್ನಭಾಗ್ಯ ಯೋಜನೆ ಕೊಟ್ಟೆ ಎಂದು ಸುಳ್ಳು ಹೇಳಿದಿರಿ. ಸುಳ್ಳು ಹೇಳುವುದರಲ್ಲಿ ಯಾರಾದರೂ ನಿಪುಣರು ಇದ್ದರೆ ಅದು ಕಾಂಗ್ರೆಸ್ಸಿನವರು. ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಅಥವಾ ಬೇರೆಲ್ಲೂ ಭವಿಷ್ಯವಿಲ್ಲ. ಹಾಗಾಗಿ ಸಿದ್ದರಾಮಯ್ಯ ಮಾತಿಗೆ ಯಾರೂ ಬೆಲೆ ಕೊಡುವುದಿಲ್ಲ ಎಂದು ಸಂಸದೆ ಶೋಭಾ ಆರೋಪಿಸಿದರು.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm