ಬ್ರೇಕಿಂಗ್ ನ್ಯೂಸ್
30-11-20 02:55 pm Udupi Correspondent ಕರಾವಳಿ
ಉಡುಪಿ, ನ.30 : ಹಿಂದೂ ಧರ್ಮ ಏನು ಬಿಜೆಪಿಗರ ಸ್ವತ್ತಾ? ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆಗೆ ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ. ಹೌದು, ಖಂಡಿತವಾಗಿಯೂ ಕರಾವಳಿಯನ್ನು ನಾವು ದತ್ತು ತಗೊಂಡಿದ್ದೇವೆ. ಕರ್ನಾಟಕ ಕರಾವಳಿ ನಮ್ಮದೇ. ಉಡುಪಿಯ ಐವರು ಶಾಸಕರು ಬಿಜೆಪಿಯವರೇ ಎಂದು ಟಾಂಗ್ ನೀಡಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಸಂಸದೆ, "ಈ ಭಾಗವನ್ನು ದತ್ತು ತೆಗೆದುಕೊಳ್ಳುತ್ತೇವೆ, ಅಭಿವೃದ್ಧಿನೂ ಮಾಡುತ್ತೇವೆ. ಕಾಂಗ್ರೆಸ್ ಜನವಿರೋಧಿ ನೀತಿಗೆ ಕರಾವಳಿ ಜನ ತಕ್ಕ ಪಾಠ ಕಲಿಸುತ್ತಾರೆ. ದೇವರ ವಿಚಾರದಲ್ಲಿ ನಾವು ರಾಜಕೀಯ ಮಾಡುತ್ತಿಲ್ಲ, ಡಿಕೆಶಿ ಚುನಾವಣೆ ಬಂದಾಗ ಮಾತ್ರ ದೇವಸ್ಥಾನ ತಿರುಗುತ್ತಾರೆ'' ಎಂದು ಆರೋಪಿಸಿದರು.
ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸಿಡಿ ಹೇಳಿಕೆಗೆ, ಪ್ರತಿಕ್ರಿಯಿಸಿ ಶೋಭಾ ಕರಂದ್ಲಾಜೆ, ಡಿಕೆಶಿಯವರು ತಮಗೆ ಗೊತ್ತಿರುವ ಮಾಹಿತಿಯನ್ನು ಬಹಿರಂಗಪಡಿಸಲಿ. ಬುಟ್ಟಿಯಲ್ಲಿ ಹಾವಿದೆ, ಹಾವಿದೆ ಎಂದು ಹೆದರಿಸುವ ಕೆಲಸ ಬೇಡ. ಸಾಧ್ಯವಿದ್ದರೆ ಆ ಹಾವನ್ನು ಹೊರಗೆ ಬಿಡಿ. ಈ ಪ್ರಕರಣದಲ್ಲಿ ನಿಮ್ಮ ಷಡ್ಯಂತ್ರ ಏನಾದರೂ ಇದೆಯಾ? ನಮ್ಮ ನಾಯಕರ ವಿರುದ್ಧ ಏನು ಷಡ್ಯಂತ್ರ ಮಾಡಿದ್ದೀರಿ ಎಂದು ಪ್ರಶ್ನಿಸಿದರು.

ಸುಳ್ಳು ಹೇಳುವುದರಲ್ಲಿ ಯಡಿಯೂರಪ್ಪ ಮಿನಿ ಮೋದಿ ಇದ್ದಂತೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಗರಂ ಆದ ಸಂಸದೆ ಶೋಭಾ ಕರಂದ್ಲಾಜೆ, ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಹೇಗೆ ಆಡಳಿತ ಮಾಡಿದ್ದಾರೆ ಎಂಬುದನ್ನು ನೋಡಿದ್ದೇವೆ. ಜಾತಿ ಜಾತಿಯನ್ನು ಒಡೆಯುವ ನೀತಿ ಮಾಡಿದ್ದರು. ಅಭಿವೃದ್ಧಿಗಿಂತ ಹೆಚ್ಚಾಗಿ ಜಾತಿ ಒಡೆಯುವುದರಲ್ಲಿ ಮಗ್ನರಾಗಿದ್ದರು ಎಂದು ತಿರುಗೇಟು ನೀಡಿದರು.
ನರೇಂದ್ರ ಮೋದಿ ಕೊಟ್ಟ ಅಕ್ಕಿ, ಗೋಧಿ ಬಳಕೆ ಮಾಡಿಕೊಂಡಿರಿ. ನಾನೇ ಅನ್ನಭಾಗ್ಯ ಯೋಜನೆ ಕೊಟ್ಟೆ ಎಂದು ಸುಳ್ಳು ಹೇಳಿದಿರಿ. ಸುಳ್ಳು ಹೇಳುವುದರಲ್ಲಿ ಯಾರಾದರೂ ನಿಪುಣರು ಇದ್ದರೆ ಅದು ಕಾಂಗ್ರೆಸ್ಸಿನವರು. ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಅಥವಾ ಬೇರೆಲ್ಲೂ ಭವಿಷ್ಯವಿಲ್ಲ. ಹಾಗಾಗಿ ಸಿದ್ದರಾಮಯ್ಯ ಮಾತಿಗೆ ಯಾರೂ ಬೆಲೆ ಕೊಡುವುದಿಲ್ಲ ಎಂದು ಸಂಸದೆ ಶೋಭಾ ಆರೋಪಿಸಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am