ಬ್ರೇಕಿಂಗ್ ನ್ಯೂಸ್
10-04-24 07:23 pm Mangalore Correspondent ಕರಾವಳಿ
ಮಂಗಳೂರು, ಎ.10: ಎಪ್ರಿಲ್ 14ರಂದು ಪ್ರಧಾನಿ ಮೋದಿ ಮಂಗಳೂರಿಗೆ ಆಗಮಿಸಲಿದ್ದು, ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಮಂಗಳೂರು ನಗರದ ನಾರಾಯಣ ಗುರು ಸರ್ಕಲ್ ನಿಂದ ಲಾಲ್ ಬಾಗ್, ಪಿವಿಎಸ್ ವೃತ್ತದ ಮೂಲಕ ನವಭಾರತ್ ಸರ್ಕಲ್ ಆಗಿ ಹಂಪನಕಟ್ಟೆಯ ವರೆಗೆ ರೋಡ್ ಶೋ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.
ಕುಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಮೋದಿ ಸಮಾವೇಶ ನಡೆಸುವುದೆಂದು ಈ ಹಿಂದೆ ನಿರ್ಧರಿಸಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ಸಮಾವೇಶ ರದ್ದುಪಡಿಸಿದ್ದು ಮಂಗಳೂರಿನಲ್ಲಿ ರೋಡ್ ಶೋ ನಡೆಸಲು ನಿರ್ಧರಿಸಲಾಗಿದೆ. ಮಂಗಳೂರು ನಗರದ ಉರ್ವಾ ಬಳಿಯ ನಾರಾಯಣ ಗುರು ಸರ್ಕಲ್ ನಲ್ಲಿ ನಾರಾಯಣ ಗುರುಗಳ ಪ್ರತಿಮೆಗೆ ಅಂದು ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಮಾಲಾರ್ಪಣೆ ಮಾಡಲಿದ್ದಾರೆ. ಆನಂತರ, ತೆರೆದ ವಾಹನದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಸತೀಶ್ ಕುಂಪಲ ತಿಳಿಸಿದ್ದಾರೆ.
ಎರಡೂವರೆ ಕಿಮೀ ಉದ್ದಕ್ಕೆ ರೋಡ್ ಶೋ ನಡೆಸುವ ಬಗ್ಗೆ ನಾವು ಕೇಂದ್ರ ಬಿಜೆಪಿ ಕಮಿಟಿಗೆ ಅಹವಾಲು ಕಳಿಸಿದ್ದೇವೆ. ಎಸ್ ಪಿಜಿ ಭದ್ರತಾ ವಿಭಾಗವು ಇಲ್ಲಿನ ಪರಿಸ್ಥಿತಿ ನೋಡಿಕೊಂಡು ಎಷ್ಟು ಉದ್ದಕ್ಕೆ ರೋಡ್ ಶೋ ನಡೆಸುವುದೆಂದು ನಿರ್ಧರಿಸಲಿದ್ದಾರೆ ಎಂದು ಸತೀಶ್ ಕುಂಪಲ ಹೇಳಿದ್ದಾರೆ. ಲಾಲ್ ಬಾಗ್, ಬಳ್ಳಾಲ್ ಬಾಗ್ ರಸ್ತೆಯಲ್ಲಿ ರೋಡ್ ಶೋ ನಡೆಸಿದರೆ ಅತಿ ಹೆಚ್ಚು ಜನ ಸೇರುವುದಕ್ಕೆ ಅವಕಾಶ ಇರಲಿದ್ದು ಭಾರೀ ಸಂಖ್ಯೆಯಲ್ಲಿ ಜನರನ್ನು ಸೇರಿಸಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ.
Modi road show on April 14 at 5 pm in mangalore. Initially, it was planned to hold Vijaya Sankalpa Samavesha at Gold Finch City at Kuloor. However, the convention has been cancelled and a road show will be organised in the city.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm