ಬ್ರೇಕಿಂಗ್ ನ್ಯೂಸ್
11-04-24 03:59 pm Mangaluru Correspondent ಕರಾವಳಿ
ಮಂಗಳೂರು, ಎ.11: ಪ್ರಧಾನಿ ನರೇಂದ್ರ ಮೋದಿ ಎ.14ರಂದು ಮಂಗಳೂರಿನಲ್ಲಿ ರೋಡ್ ಶೋ ನಡೆಸಲಿರುವುದರಿಂದ ಎಸ್ ಪಿಜಿ ಭದ್ರತಾ ವಿಭಾಗದ ಅಧಿಕಾರಿಗಳು ಆಗಮಿಸಿದ್ದು, ಪರಿಶೀಲನೆ ನಡೆಸಲಿದ್ದಾರೆ.
ಪ್ರಧಾನಿ ಮೋದಿಯವರ ಭದ್ರತೆಯ ಹೊಣೆ ಹೊತ್ತಿರುವ ಎಸ್ ಪಿಜಿ ತಂಡದ ಅಧಿಕಾರಿಗಳು ರೋಡ್ ಶೋ ನಡೆಯುವ ರಸ್ತೆಯ ಉದ್ದಕ್ಕೂ ಕಾಲ್ನಡಿಗೆಯಲ್ಲಿ ಸಾಗಿ ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ಮೋದಿ ರೋಡ್ ಶೋ ನಡೆಸುವ ರೂಟ್ ಮ್ಯಾಪ್ ಸಿದ್ಧವಾಗಿದ್ದು, ನಗರದ (ಲೇಡಿಹಿಲ್) ನಾರಾಯಣ ಗುರು ವೃತ್ತದಿಂದ ತೊಡಗಿ ಲಾಲ್ ಬಾಗ್, ಪಿವಿಎಸ್ ವೃತ್ತದ ಮೂಲಕ ನವಭಾರತ್ ಸರ್ಕಲ್ ಬಳಿಕ ಕೆಎಸ್ ರಾವ್ ರಸ್ತೆಯಲ್ಲಿ ಅಧಿಕಾರಿಗಳು ಸಂಚರಿಸಿ ಪರಿಶೀಲನೆ ನಡೆಸಿದ್ದಾರೆ.




ಎಸ್ ಪಿಜಿ ಹಾಗೂ ಆಂತರಿಕ ಭದ್ರತಾ ವಿಭಾಗದ ಗುಪ್ತಚರ ಪಡೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೇಟ್ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಬಿಜೆಪಿ ಜಿಲ್ಲಾ ನಾಯಕರು ಜೊತೆಗಿದ್ದು ಎಸ್ ಪಿಜಿ ಕೇಳಿದ ಪ್ರಶ್ನೆಗಳಿಗೆ ಮಾಹಿತಿ ನೀಡಿದ್ದಾರೆ. ಎ.14ರಂದು ಮೋದಿಯವರು ಸಂಜೆ 6 ಗಂಟೆ ವೇಳೆಗೆ ನಾರಾಯಣ ಗುರು ವೃತ್ತಕ್ಕೆ ಆಗಮಿಸಿ, ಗುರುವರ್ಯರ ಪ್ರತಿಮೆಗೆ ಮಾಲಾರ್ಪಣೆಗೈದು ರೋಡ್ ಶೋ ಆರಂಭಿಸಲಿದ್ದಾರೆ. ಲಾಲ್ ಬಾಗ್, ಪಿವಿಎಸ್ ವೃತ್ತ, ನವಭಾರತ ಸರ್ಕಲ್, ಕೆಎಸ್ ರಾವ್ ರಸ್ತೆಯ ಮೂಲಕ ಹಂಪನಕಟ್ಟೆ ವೃತ್ತದ ವರೆಗೆ 2.5 ಕಿಮೀ ಉದ್ದಕ್ಕೆ ರೋಡ್ ಶೋ ನಡೆಯಲಿದೆ.
ರಸ್ತೆಯ ಇಕ್ಕೆಲಗಳಲ್ಲಿಯೂ ಭಾರೀ ಸಂಖ್ಯೆಯಲ್ಲಿ ಜನರು ಸೇರಲಿದ್ದು, ಬಿಜೆಪಿಯಿಂದ ಮಂಗಳೂರು ಉತ್ತರ, ದಕ್ಷಿಣ, ಉಳ್ಳಾಲ ಮತ್ತು ಮೂಡುಬಿದ್ರೆ ಮಂಡಲ ವ್ಯಾಪ್ತಿಯಿಂದ ಕಾರ್ಯಕರ್ತರು, ಅಭಿಮಾನಿಗಳನ್ನು ಕರೆತರಲು ಯೋಜನೆ ರೂಪಿಸಲಾಗಿದೆ. ಇದಲ್ಲದೆ, ವಿಶಿಷ್ಟ ರೀತಿಯಲ್ಲಿ ಮೋದಿಯವರನ್ನು ಸ್ವಾಗತಿಸಲು ಲೋಕಸಭಾ ಚುನಾವಣಾ ಸಮಿತಿ ಸಿದ್ಧತೆ ನಡೆಸಿದೆ.
PM Modi Road Show in Mangalore, the SGP team checks security in the city with the police team along with BJP leaders. Prime Minister Narendra Modi will not address an election rally in Mangaluru on April 14, but instead will conduct a roadshow in the city on the same day, according to Satish Kumpala, president of the Dakshina Kannada unit of the BJP.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm