ಬ್ರೇಕಿಂಗ್ ನ್ಯೂಸ್
13-04-24 10:54 pm Mangaluru correspondent ಕರಾವಳಿ
ಮಂಗಳೂರು, ಎ.13: ಕೇರಳ ಸರಕಾರ ಗಣರಾಜ್ಯೋತ್ಸವ ಪರೇಡಿಗೆ ನಾರಾಯಣ ಗುರು ಸ್ತಬ್ಧಚಿತ್ರ ಮಾಡಿದಾಗ, ಇಲ್ಲದ ನೆಪ ಹೇಳಿ ನಿರಾಕರಣೆ ಮಾಡಲಾಗಿತ್ತು. ಆನಂತರ, ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗ ನಾರಾಯಣ ಗುರುಗಳ ಪಠ್ಯವನ್ನೇ ಏಳನೇ ತರಗತಿಯಿಂದ ತೆಗೆದು ಹಾಕಲಾಗಿತ್ತು. ಅದನ್ನು ಬಿಜೆಪಿ ನಾಯಕರು ಪ್ರಶ್ನೆ ಮಾಡಲಿಲ್ಲ. ಇದೀಗ ಬಿಲ್ಲವ ಸಮಾಜದ ಓಲೈಕೆಗಾಗಿ ಬಿಜೆಪಿಗೆ ಮತ್ತೆ ನಾರಾಯಣ ಗುರು ನೆನಪಾಗಿದ್ದಾರೆ. ಪ್ರಧಾನಿ ಮೋದಿಯವರ ಮೂಲಕ ಮಾಲಾರ್ಪಣೆ ಮಾಡುವ ಕಾರ್ಯಕ್ರಮ ಇಟ್ಟುಕೊಂಡಿದ್ದಾರೆ ಎಂದು ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಕಟಕಿಯಾಡಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸ್ತಬ್ಧಚಿತ್ರದ ವಿಚಾರ ಬಂದಾಗ ಇಲ್ಲಿನ ಸಂಸದರು ಮುಂದಿನ ವರ್ಷವೇ ನಾವು ಸ್ತಬ್ಧಚಿತ್ರ ಮಾಡಿಸುತ್ತೇವೆ ಎಂದಿದ್ದರು. ಆದರೆ ಅದು ಈಡೇರಿಕೆ ಆಗಿಲ್ಲ. ನಾವು ಬಿಲ್ಲವ ಸಮಾಜದಿಂದ ಪ್ರತಿಭಟನೆ ನಡೆಸಿದಾಗಲೂ ಯಾವುದೇ ಬಿಜೆಪಿ ನಾಯಕರು ನಮಗೆ ಬೆಂಬಲ ನೀಡಿಲ್ಲ. ಏಳನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಿಂದ ನಾರಾಯಣ ಗುರುಗಳ ಪಠ್ಯ ತೆಗೆದು ಹಾಕಿದ್ದ ರೋಹಿತ್ ಚಕ್ರತೀರ್ಥ ಅವರನ್ನು ನಮ್ಮ ವಿರೋಧ ನಡುವೆಯೇ ಮಂಗಳೂರಿಗೆ ತಂದು ಸನ್ಮಾನ ಮಾಡಿದ್ದರು. ಬೆಳ್ತಂಗಡಿಯ ವೇಣೂರಿನಲ್ಲಿ ಅಜಿಲರಸರು ವಿರೋಧಿಸಿದ್ದರೂ ಪ್ರೇಕ್ಷಕರ ರೀತಿಯಲ್ಲಿ ಶಾಸಕ ಹರೀಶ್ ಪೂಂಜ, ರೋಹಿತನ್ನು ಕರೆಸಿ ಸನ್ಮಾನ ಮಾಡಿಸಿದ್ದರು. ಬಿಲ್ಲವ ಸಮಾಜಕ್ಕೆ ಅಪಮಾನ ಮಾಡಿದವರನ್ನು ಸನ್ಮಾನಿಸುವ ಅಗತ್ಯ ಏನಿತ್ತು ಎಂದು ಪ್ರಶ್ನಿಸಿದರು.
ಸಮುದಾಯದ ಭಾವನೆ ಜೊತೆ ಚೆಲ್ಲಾಟವಾಡಿದರೆ ಅದಕ್ಕೆ ತಕ್ಕ ಉತ್ತರವನ್ನು ಸಮಾಜ ಈ ಬಾರಿಯ ಚುನಾವಣೆಯಲ್ಲಿ ನೀಡಲಿದೆ. ಬಿಲ್ಲವ ಸಮಾಜ ಮುಗ್ಧ ಮತ್ತು ನಂಬಿಕಸ್ಥ ಸಮಾಜ. ಭಾವನಾತ್ಮಕವಾಗಿ ಚೆಲ್ಲಾಟವಾಡಬಹುದು ಎಂದು ಸ್ಥಳೀಯ ನಾಯಕರು ಭಾವಿಸಿದ್ದರೆ ಅದು ಇನ್ನು ಮುಂದೆ ಸಾಧ್ಯವಿಲ್ಲ. ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು ಮತ್ತು ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಸಮುದಾಯದ ಅಭ್ಯರ್ಥಿಗಳ ಗೆಲುವಿಗಾಗಿ ಕೆಲಸ ಮಾಡುತ್ತಿದ್ದೇವೆ. ಸಮಾಜದಲ್ಲಿ ಬದಲಾವಣೆ ಎಷ್ಟರ ಮಟ್ಟಿಗೆ ಆಗಿದೆ ಎಂಬುದು ಚುನಾವಣೆ ಫಲಿತಾಂಶದಿಂದ ನಿರ್ಧಾರ ಆಗಲಿದೆ ಎಂದು ಸತ್ಯಜಿತ್ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಬೆಂಗಳೂರು ಬಿಲ್ಲವ ಸಂಘದ ಅಧ್ಯಕ್ಷ ವೇದ ಕುಮಾರ್, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಗೆಜ್ಜೆಗಿರಿ ಕ್ಷೇತ್ರದ ಮಾಧ್ಯಮ ವಕ್ತಾರ ರಾಜೇಂದ್ರ ಚಿಲಿಂಬಿ ಉಪಸ್ಥಿತರಿದ್ದರು.
Satyajit Surathkal, the state president of Narayana Guru Vichara Vedike, expressed his concern over the Bharatiya Janata Party's (BJP) use of the names of Brahmashree Narayana Guru and Koti Chennaya for political gains, stating that it continues to hurt the sentiments of the Billawa community.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm