ಬ್ರೇಕಿಂಗ್ ನ್ಯೂಸ್
13-04-24 10:54 pm Mangaluru correspondent ಕರಾವಳಿ
ಮಂಗಳೂರು, ಎ.13: ಕೇರಳ ಸರಕಾರ ಗಣರಾಜ್ಯೋತ್ಸವ ಪರೇಡಿಗೆ ನಾರಾಯಣ ಗುರು ಸ್ತಬ್ಧಚಿತ್ರ ಮಾಡಿದಾಗ, ಇಲ್ಲದ ನೆಪ ಹೇಳಿ ನಿರಾಕರಣೆ ಮಾಡಲಾಗಿತ್ತು. ಆನಂತರ, ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗ ನಾರಾಯಣ ಗುರುಗಳ ಪಠ್ಯವನ್ನೇ ಏಳನೇ ತರಗತಿಯಿಂದ ತೆಗೆದು ಹಾಕಲಾಗಿತ್ತು. ಅದನ್ನು ಬಿಜೆಪಿ ನಾಯಕರು ಪ್ರಶ್ನೆ ಮಾಡಲಿಲ್ಲ. ಇದೀಗ ಬಿಲ್ಲವ ಸಮಾಜದ ಓಲೈಕೆಗಾಗಿ ಬಿಜೆಪಿಗೆ ಮತ್ತೆ ನಾರಾಯಣ ಗುರು ನೆನಪಾಗಿದ್ದಾರೆ. ಪ್ರಧಾನಿ ಮೋದಿಯವರ ಮೂಲಕ ಮಾಲಾರ್ಪಣೆ ಮಾಡುವ ಕಾರ್ಯಕ್ರಮ ಇಟ್ಟುಕೊಂಡಿದ್ದಾರೆ ಎಂದು ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಕಟಕಿಯಾಡಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸ್ತಬ್ಧಚಿತ್ರದ ವಿಚಾರ ಬಂದಾಗ ಇಲ್ಲಿನ ಸಂಸದರು ಮುಂದಿನ ವರ್ಷವೇ ನಾವು ಸ್ತಬ್ಧಚಿತ್ರ ಮಾಡಿಸುತ್ತೇವೆ ಎಂದಿದ್ದರು. ಆದರೆ ಅದು ಈಡೇರಿಕೆ ಆಗಿಲ್ಲ. ನಾವು ಬಿಲ್ಲವ ಸಮಾಜದಿಂದ ಪ್ರತಿಭಟನೆ ನಡೆಸಿದಾಗಲೂ ಯಾವುದೇ ಬಿಜೆಪಿ ನಾಯಕರು ನಮಗೆ ಬೆಂಬಲ ನೀಡಿಲ್ಲ. ಏಳನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಿಂದ ನಾರಾಯಣ ಗುರುಗಳ ಪಠ್ಯ ತೆಗೆದು ಹಾಕಿದ್ದ ರೋಹಿತ್ ಚಕ್ರತೀರ್ಥ ಅವರನ್ನು ನಮ್ಮ ವಿರೋಧ ನಡುವೆಯೇ ಮಂಗಳೂರಿಗೆ ತಂದು ಸನ್ಮಾನ ಮಾಡಿದ್ದರು. ಬೆಳ್ತಂಗಡಿಯ ವೇಣೂರಿನಲ್ಲಿ ಅಜಿಲರಸರು ವಿರೋಧಿಸಿದ್ದರೂ ಪ್ರೇಕ್ಷಕರ ರೀತಿಯಲ್ಲಿ ಶಾಸಕ ಹರೀಶ್ ಪೂಂಜ, ರೋಹಿತನ್ನು ಕರೆಸಿ ಸನ್ಮಾನ ಮಾಡಿಸಿದ್ದರು. ಬಿಲ್ಲವ ಸಮಾಜಕ್ಕೆ ಅಪಮಾನ ಮಾಡಿದವರನ್ನು ಸನ್ಮಾನಿಸುವ ಅಗತ್ಯ ಏನಿತ್ತು ಎಂದು ಪ್ರಶ್ನಿಸಿದರು.
ಸಮುದಾಯದ ಭಾವನೆ ಜೊತೆ ಚೆಲ್ಲಾಟವಾಡಿದರೆ ಅದಕ್ಕೆ ತಕ್ಕ ಉತ್ತರವನ್ನು ಸಮಾಜ ಈ ಬಾರಿಯ ಚುನಾವಣೆಯಲ್ಲಿ ನೀಡಲಿದೆ. ಬಿಲ್ಲವ ಸಮಾಜ ಮುಗ್ಧ ಮತ್ತು ನಂಬಿಕಸ್ಥ ಸಮಾಜ. ಭಾವನಾತ್ಮಕವಾಗಿ ಚೆಲ್ಲಾಟವಾಡಬಹುದು ಎಂದು ಸ್ಥಳೀಯ ನಾಯಕರು ಭಾವಿಸಿದ್ದರೆ ಅದು ಇನ್ನು ಮುಂದೆ ಸಾಧ್ಯವಿಲ್ಲ. ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು ಮತ್ತು ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಸಮುದಾಯದ ಅಭ್ಯರ್ಥಿಗಳ ಗೆಲುವಿಗಾಗಿ ಕೆಲಸ ಮಾಡುತ್ತಿದ್ದೇವೆ. ಸಮಾಜದಲ್ಲಿ ಬದಲಾವಣೆ ಎಷ್ಟರ ಮಟ್ಟಿಗೆ ಆಗಿದೆ ಎಂಬುದು ಚುನಾವಣೆ ಫಲಿತಾಂಶದಿಂದ ನಿರ್ಧಾರ ಆಗಲಿದೆ ಎಂದು ಸತ್ಯಜಿತ್ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಬೆಂಗಳೂರು ಬಿಲ್ಲವ ಸಂಘದ ಅಧ್ಯಕ್ಷ ವೇದ ಕುಮಾರ್, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಗೆಜ್ಜೆಗಿರಿ ಕ್ಷೇತ್ರದ ಮಾಧ್ಯಮ ವಕ್ತಾರ ರಾಜೇಂದ್ರ ಚಿಲಿಂಬಿ ಉಪಸ್ಥಿತರಿದ್ದರು.
Satyajit Surathkal, the state president of Narayana Guru Vichara Vedike, expressed his concern over the Bharatiya Janata Party's (BJP) use of the names of Brahmashree Narayana Guru and Koti Chennaya for political gains, stating that it continues to hurt the sentiments of the Billawa community.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am