ಬ್ರೇಕಿಂಗ್ ನ್ಯೂಸ್
14-04-24 09:01 pm Mangaluru Correspondent ಕರಾವಳಿ
ಮಂಗಳೂರು, ಎ.14: ಮಂಗಳೂರಿನಲ್ಲಿ ಇಂದು ಕೇಸರಿ ಪಾಳಯದ ಜನಸಾಗರವೇ ಹರಿದಿತ್ತು. ಪ್ರಧಾನಿ ಮೋದಿಯನ್ನು ನೋಡಲು ಸಂಜೆ ಐದು ಗಂಟೆಯಿಂದಲೇ ಲಕ್ಷಾಂತರ ಜನರು ಸೇರಿದ್ದರು. ಜನರು ಹೂಮಳೆಗರೆಯುತ್ತಿದ್ದಂತೆ ಮೋದಿ ಕೈಮುಗಿಯುತ್ತಲೇ ಸಾಗಿದರು.
ಸರಿಯಾಗಿ 7.50ಕ್ಕೆ ಲೇಡಿಹಿಲ್ ಬಳಿಯ ನಾರಾಯಣ ಗುರು ಸರ್ಕಲ್ ಬಂದಿಳಿದ ಮೋದಿ, ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ರೋಡ್ ಶೋ ವಾಹನ ಏರಿದರು. ವಾಹನದಲ್ಲಿ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಜೊತೆಗಿದ್ದರು.




































ರಸ್ತೆಯ ಇಕ್ಕೆಲಗಳಲ್ಲೂ ಜನರು, ಅಭಿಮಾನಿಗಳು ನೆರೆದಿದ್ದರು. ಅಲ್ಲಲ್ಲಿ ಮೋದಿ ಬರುವ ಮೊದಲು ಜನರಿಗೆ ಬೋರ್ ಆಗದಂತೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಾಡಾಗಿತ್ತು. ಮೋದಿ ತೆರೆದ ವಾಹನದಲ್ಲಿ ಬರುತ್ತಿದ್ದಂತೆ ಜನರ ಮೋದಿ ಮೋದಿ ಜೈಕಾರ ಮೊಳಗಿತು. ಭಾರೀ ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳು ಮೋದಿ ಮೋದಿ ಘೋಷಣೆ ಹಾಕಿದರು. ರಸ್ತೆಯುದ್ಸಕ್ಕೂ ಸೇರಿದ ಜನರ ಒಂದೇ ಕಂಠದ ಕೂಗು ಕೇಳಿ ಸ್ವತಃ ಮೋದಿಯೇ ಪುಳಕಗೊಂಡರು. ಕೆಲವು ಜಾಗದಲ್ಲಿ ಜನರು ಹುಚ್ಚೆದ್ದು ಕುಣಿಯುವುದೂ ಕಂಡುಬಂತು. ಮೋದಿಯವರೇ ತಮಗೆ ಬಿದ್ದ ಹೂವುಗಳನ್ನು ಮರಳಿ ಜನರತ್ತ ಎಸೆದಿದ್ದೂ ಕಂಡುಬಂತು. ಮಹಿಳೆಯರು, ಮಕ್ಕಳು, ವೃದ್ಧರು ಬಹುಪಾಲು ಯುವಜನರು ಬಿಳಿ ಗಡ್ಡದ ಮೋದಿಯವರ ವರ್ಚಸ್ಸು ಕಂಡು ಆನಂದ ತುಂದಿಲರಾದರು.
ನಾರಾಯಣ ಗುರು ವೃತ್ತದಿಂದ ಲಾಲ್ ಬಾಗ್, ಪಿವಿಎಸ್ ವೃತ್ತದ ಮೂಲಕ ನವಭಾರತ್ ಸರ್ಕಲ್ ಬಳಿ ರೋಡ್ ಶೋ ಕೊನೆಗೊಂಡಿತು. ಬಳಿಕ ಅಲ್ಲಿಂದಲೇ ವಾಹನದಿಂದ ಇಳಿದು ಮೋದಿ ಎಸ್ಕಾರ್ಟ್ ವಾಹನದಲ್ಲಿ ಹಂಪನಕಟ್ಟೆ ಮೂಲಕ ಮರಳಿ ಏರ್ಪೋರ್ಟ್ ನತ್ತ ಸಾಗಿದರು. ಜನರು ಜೈಶ್ರೀರಾಮ್, ಜೈ ಮೋದಿ ಎನ್ನುತ್ತ ಮನೆಯತ್ತ ನಡೆದರು.
A massive crowd gathered in Mangaluru to witness the roadshow of Prime Minister (PM) Narendra Modi on Sunday, April 14. The event kicked off at Narayana Guru Circle at Ladyhill and concluded at Navbharath Circle. PM Modi was warmly welcomed at Narayana Guru Circle with an aarti ritual, followed by the garlanding of the statue of Narayana Guru before embarking on the roadshow.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm