ಬ್ರೇಕಿಂಗ್ ನ್ಯೂಸ್
01-12-20 11:06 am Mangalore Correspondent ಕರಾವಳಿ
ಮಂಗಳೂರು, ಡಿ.1: ಉಳ್ಳಾಲ ಬಳಿಯ ಅಳಿವೆಬಾಗಿಲು ಬಳಿ ಸಮುದ್ರ ಮಧ್ಯೆ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು ಆರು ಜನ ನಾಪತ್ತೆಯಾಗಿದ್ದಾರೆ.
22 ಜನರಿದ್ದ ಪರ್ಸಿನ್ ಮೀನುಗಾರಿಕೆ ಬೋಟ್ ನಸುಕಿನಲ್ಲಿ ಹಿಂತಿರುಗುತ್ತಿದ್ದಾಗ ಭಾರೀ ಅಲೆಗಳ ಹೊಡೆತಕ್ಕೆ ಮುಳುಗಡೆಯಾಗಿದೆ. ಉಳ್ಳಾಲದ ಅಳಿವೆಬಾಗಿಲಿನ ಸಮೀಪದಲ್ಲಿ ನೇತ್ರಾವತಿ ನದಿ ಸಮುದ್ರ ಸೇರುವುದಕ್ಕಿಂತ ಸ್ವಲ್ಪ ದೂರದಲ್ಲಿ ದುರಂತ ನಡೆದಿದೆ ಎನ್ನಲಾಗುತ್ತಿದೆ. ಬೋಟಿನಲ್ಲಿದ್ದ 22 ಜನ ಮೀನುಗಾರರಲ್ಲಿ 6 ಮಂದಿ ನಾಪತ್ತೆಯಾಗಿದ್ದಾರೆ.



ಮಂಗಳೂರಿನ ಬೋಳಾರದ ಶ್ರೀರಕ್ಷಾ ಹೆಸರಿನ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿದ್ದು ಮಂಗಳೂರು, ಉಳ್ಳಾಲದವರು ಸೇರಿ ತಮಿಳುನಾಡು ಮೂಲದ ಕಾರ್ಮಿಕರು ಬೋಟಿನಲ್ಲಿದ್ದರು. ಈ ಪೈಕಿ ಮಂಗಳೂರಿನ ಪಾಂಡುರಂಗ ಸುವರ್ಣ (58), ಪ್ರೀತಮ್ (25), ಚಿಂತನ್(21), ಜಿಯಾವುಲ್ಲಾ (32), ಅನ್ಸಾರ್ (31), ಹಸೈನಾರ್ (25) ಸಮುದ್ರದಲ್ಲಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಬೋಟಿನಲ್ಲಿ ಭಾರೀ ಪ್ರಮಾಣದಲ್ಲಿ ಮೀನುಗಳ ಸಂಗ್ರಹ ಇತ್ತು. ಹಿಂತಿರುಗಿ ಬರುತ್ತಿದ್ದಾಗ ಅಲೆಗಳ ಹೊಡೆತಕ್ಕೆ ಬೋಟ್ ಮಗುಚಿದೆ ಎನ್ನಲಾಗುತ್ತಿದೆ. ಇನ್ನೊಂದು ಮೂಲದ ಪ್ರಕಾರ, ಮತ್ತಷ್ಟು ಮೀನು ಬಲೆಗೆ ಬಿದ್ದಿದ್ದು ಬೋಟಿಗೆ ಎಳೆದು ಹಾಕುವ ವೇಳೆ ಒಂದು ಬದಿಗೆ ಇಡೀ ಬೋಟ್ ಮಗುಚಿದೆ ಎನ್ನಲಾಗುತ್ತಿದೆ. ಕೂಡಲೇ ಇತರೇ ಮೀನುಗಾರಿಕಾ ದೋಣಿಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. 16 ಮಂದಿ ಡಿಂಗಿ ಮೂಲಕ ಈಜಿ ಬೇರೆ ದೋಣಿಗಳ ಮೂಲಕ ಪಾರಾಗಿದ್ದಾರೆ.
Video:
Six fishermen go missing In a tragic boat accident near Ullal. The boat, named 'Shree Raksha' from Bolar had left bolar for fishing on Monday. As many as 22 fishermen were in the boat. Fourteen out of the 22 managed to rescue themselves with the help of lifeboats.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am