ಬ್ರೇಕಿಂಗ್ ನ್ಯೂಸ್
01-12-20 11:06 am Mangalore Correspondent ಕರಾವಳಿ
ಮಂಗಳೂರು, ಡಿ.1: ಉಳ್ಳಾಲ ಬಳಿಯ ಅಳಿವೆಬಾಗಿಲು ಬಳಿ ಸಮುದ್ರ ಮಧ್ಯೆ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು ಆರು ಜನ ನಾಪತ್ತೆಯಾಗಿದ್ದಾರೆ.
22 ಜನರಿದ್ದ ಪರ್ಸಿನ್ ಮೀನುಗಾರಿಕೆ ಬೋಟ್ ನಸುಕಿನಲ್ಲಿ ಹಿಂತಿರುಗುತ್ತಿದ್ದಾಗ ಭಾರೀ ಅಲೆಗಳ ಹೊಡೆತಕ್ಕೆ ಮುಳುಗಡೆಯಾಗಿದೆ. ಉಳ್ಳಾಲದ ಅಳಿವೆಬಾಗಿಲಿನ ಸಮೀಪದಲ್ಲಿ ನೇತ್ರಾವತಿ ನದಿ ಸಮುದ್ರ ಸೇರುವುದಕ್ಕಿಂತ ಸ್ವಲ್ಪ ದೂರದಲ್ಲಿ ದುರಂತ ನಡೆದಿದೆ ಎನ್ನಲಾಗುತ್ತಿದೆ. ಬೋಟಿನಲ್ಲಿದ್ದ 22 ಜನ ಮೀನುಗಾರರಲ್ಲಿ 6 ಮಂದಿ ನಾಪತ್ತೆಯಾಗಿದ್ದಾರೆ.



ಮಂಗಳೂರಿನ ಬೋಳಾರದ ಶ್ರೀರಕ್ಷಾ ಹೆಸರಿನ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿದ್ದು ಮಂಗಳೂರು, ಉಳ್ಳಾಲದವರು ಸೇರಿ ತಮಿಳುನಾಡು ಮೂಲದ ಕಾರ್ಮಿಕರು ಬೋಟಿನಲ್ಲಿದ್ದರು. ಈ ಪೈಕಿ ಮಂಗಳೂರಿನ ಪಾಂಡುರಂಗ ಸುವರ್ಣ (58), ಪ್ರೀತಮ್ (25), ಚಿಂತನ್(21), ಜಿಯಾವುಲ್ಲಾ (32), ಅನ್ಸಾರ್ (31), ಹಸೈನಾರ್ (25) ಸಮುದ್ರದಲ್ಲಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಬೋಟಿನಲ್ಲಿ ಭಾರೀ ಪ್ರಮಾಣದಲ್ಲಿ ಮೀನುಗಳ ಸಂಗ್ರಹ ಇತ್ತು. ಹಿಂತಿರುಗಿ ಬರುತ್ತಿದ್ದಾಗ ಅಲೆಗಳ ಹೊಡೆತಕ್ಕೆ ಬೋಟ್ ಮಗುಚಿದೆ ಎನ್ನಲಾಗುತ್ತಿದೆ. ಇನ್ನೊಂದು ಮೂಲದ ಪ್ರಕಾರ, ಮತ್ತಷ್ಟು ಮೀನು ಬಲೆಗೆ ಬಿದ್ದಿದ್ದು ಬೋಟಿಗೆ ಎಳೆದು ಹಾಕುವ ವೇಳೆ ಒಂದು ಬದಿಗೆ ಇಡೀ ಬೋಟ್ ಮಗುಚಿದೆ ಎನ್ನಲಾಗುತ್ತಿದೆ. ಕೂಡಲೇ ಇತರೇ ಮೀನುಗಾರಿಕಾ ದೋಣಿಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. 16 ಮಂದಿ ಡಿಂಗಿ ಮೂಲಕ ಈಜಿ ಬೇರೆ ದೋಣಿಗಳ ಮೂಲಕ ಪಾರಾಗಿದ್ದಾರೆ.
Video:
Six fishermen go missing In a tragic boat accident near Ullal. The boat, named 'Shree Raksha' from Bolar had left bolar for fishing on Monday. As many as 22 fishermen were in the boat. Fourteen out of the 22 managed to rescue themselves with the help of lifeboats.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm