ಬ್ರೇಕಿಂಗ್ ನ್ಯೂಸ್
16-04-24 08:32 pm Mangalore Correspondent ಕರಾವಳಿ
ಮಂಗಳೂರು, ಎ.16: ಪ್ರಧಾನಿ ಮೋದಿಯವರು ಮಂಗಳೂರಿನಲ್ಲಿ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿರುವುದರಿಂದ ನಾರಾಯಣ ಗುರು ಸರ್ಕಲನ್ನು ರಾಷ್ಟ್ರ ಮಟ್ಟದಲ್ಲಿ ಜನರು ನೋಡುವಂತಾಗಿದೆ. ನಾರಾಯಣ ಗುರು ಇಡೀ ಜಗತ್ತಿನಲ್ಲಿ ಅತಿ ದೊಡ್ಡ ಮಾನವತಾವಾದಿ. ಗುರುಗಳ ಪ್ರತಿಮೆಗೆ ಮಾಲಾರ್ಪಣೆ ವಿಚಾರದಲ್ಲಿ ಯಾರೂ ಮತ್ಸರ ಪಡುವ ಅಗತ್ಯವಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಅವರು, ಪ್ರಧಾನಿ ಮೋದಿಯವರನ್ನು ನಮ್ಮ ಜಿಲ್ಲೆಯ ಜನರು ಆದರದಿಂದ ಬರಮಾಡಿಕೊಂಡಿದ್ದಾರೆ. ರೋಡ್ ಶೋ ನಡೆದ ರಸ್ತೆಯ ಅಲ್ಲಲ್ಲಿ ಸ್ವಯಂಪ್ರೇರಿತವಾಗಿ ಕಲಾತಂಡಗಳು ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಿದ್ದಾರೆ. ಎಲ್ಲರಿಗೂ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ ಹೇಳುತ್ತೇನೆ. ಲೇಡಿಹಿಲ್ ಸರ್ಕಲ್ ನಲ್ಲಿ ನಾರಾಯಣ ಗುರು ಸರ್ಕಲ್ ಮಾಡುವಂತಾಗಲು ಶಾಸಕ, ಸಂಸದರಿಂದ ಹಿಡಿದು ಪಾಲಿಕೆಯಲ್ಲಿ ಅಧಿಕಾರಿಗಳು, ಮೇಯರ್ ಪ್ರೇಮಾನಂದ ಶೆಟ್ಟಿ ಸೇರಿ ಎಲ್ಲರೂ ಬಹಳಷ್ಟು ಶ್ರಮ ವಹಿಸಿದ್ದಾರೆ. ಈಗ ಪ್ರಧಾನಿ ಮೋದಿ ಬಂದು ಮಾಲಾರ್ಪಣೆ ಮಾಡಿದ್ದರಿಂದ ದೇಶದ ಮಟ್ಟಕ್ಕೆ ಸರ್ಕಲ್ ಗೆ ಹೆಸರು ಬಂದಿದೆ ಎಂದರು.
![]()
ಮೋದಿ ಅವರನ್ನು ಸ್ವಾಗತಿಸಲು ಮಂಗಳೂರು ಮೇಯರ್ ಗೆ ಅವಕಾಶ ನೀಡಿಲ್ಲವೇ ಎಂಬ ಪ್ರಶ್ನೆಗೆ, ನಾವು ಎಸ್ ಪಿಜಿಗೆ ಕಳಿಸಿಕೊಟ್ಟ ಪಟ್ಟಿಯಲ್ಲಿ ಮೇಯರ್ ಹೆಸರು ಇತ್ತು. ಆದರೆ ಕೊನೆಕ್ಷಣದಲ್ಲಿ ಅವರ ಹೆಸರು ಬಿಟ್ಟು ಹೋಗಿತ್ತು. ಆ ರೀತಿಯ ಎಡವಟ್ಟು ಆಗಿದ್ದಕ್ಕೆ ನಮಗೆ ವಿಷಾದವಿದೆ ಎಂದರು. ಬಿರುವೆರ್ ಕುಡ್ಲ ತಂಡಕ್ಕೆ ಅವಕಾಶ ನೀಡಬೇಕಿತ್ತು ಎಂಬ ಅಭಿಪ್ರಾಯ ಕೇಳಿಬರುತ್ತಿದೆ ಎಂಬ ಪ್ರಶ್ನೆಗೆ, ನಾವು ಎಲ್ಲರನ್ನೂ ಜೊತೆಗೆ ಜೋಡಿಸಿಕೊಂಡು ಹೋಗುತ್ತಿದ್ದೇವೆ. ಮೂರು ದಿನದಲ್ಲಿ ಕಾರ್ಯಕ್ರಮ ಆಗಿದ್ದರಿಂದ ಕೆಲವೊಂದು ಎಡವಟ್ಟು ಆಗಿರಬಹುದು. ಅದನ್ನು ಸರಿ ಮಾಡುತ್ತೇವೆ ಎಂದಿದ್ದಾರೆ.
ವಿನಯ ಕುಮಾರ್ ಸೊರಕೆಯವರು ನಾರಾಯಣ ಗುರುಗಳ ಬಗ್ಗೆ ಮೋದಿಗೆ ಈಗ ನೆನಪಾಗಿದೆ ಎಂದು ಟೀಕಿಸಿದ್ದಕ್ಕೆ, ಗುರುಗಳ ಪ್ರತಿಮೆಗೆ ಪ್ರಧಾನಿ ಮಾಲಾರ್ಪಣೆ ಮಾಡಿದ್ದಕ್ಕೆ ಯಾರೂ ಮತ್ಸರ ಪಡಬಾರದು. ಇವರು ಬೇಕಿದ್ದರೆ ಸಿಎಂ ಸಿದ್ದರಾಮಯ್ಯ ಅವರನ್ನು ಕರೆಸಿ ಮಾಲಾರ್ಪಣೆ ಮಾಡಬಹುದಿತ್ತು. ಯಾಕೆ ಮಾಡಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
Mangalore PM offers Floral Tributes To Sri Narayana Guru, Kumpala slams those mocking.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm