ಬ್ರೇಕಿಂಗ್ ನ್ಯೂಸ್
16-04-24 08:32 pm Mangalore Correspondent ಕರಾವಳಿ
ಮಂಗಳೂರು, ಎ.16: ಪ್ರಧಾನಿ ಮೋದಿಯವರು ಮಂಗಳೂರಿನಲ್ಲಿ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿರುವುದರಿಂದ ನಾರಾಯಣ ಗುರು ಸರ್ಕಲನ್ನು ರಾಷ್ಟ್ರ ಮಟ್ಟದಲ್ಲಿ ಜನರು ನೋಡುವಂತಾಗಿದೆ. ನಾರಾಯಣ ಗುರು ಇಡೀ ಜಗತ್ತಿನಲ್ಲಿ ಅತಿ ದೊಡ್ಡ ಮಾನವತಾವಾದಿ. ಗುರುಗಳ ಪ್ರತಿಮೆಗೆ ಮಾಲಾರ್ಪಣೆ ವಿಚಾರದಲ್ಲಿ ಯಾರೂ ಮತ್ಸರ ಪಡುವ ಅಗತ್ಯವಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಅವರು, ಪ್ರಧಾನಿ ಮೋದಿಯವರನ್ನು ನಮ್ಮ ಜಿಲ್ಲೆಯ ಜನರು ಆದರದಿಂದ ಬರಮಾಡಿಕೊಂಡಿದ್ದಾರೆ. ರೋಡ್ ಶೋ ನಡೆದ ರಸ್ತೆಯ ಅಲ್ಲಲ್ಲಿ ಸ್ವಯಂಪ್ರೇರಿತವಾಗಿ ಕಲಾತಂಡಗಳು ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಿದ್ದಾರೆ. ಎಲ್ಲರಿಗೂ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ ಹೇಳುತ್ತೇನೆ. ಲೇಡಿಹಿಲ್ ಸರ್ಕಲ್ ನಲ್ಲಿ ನಾರಾಯಣ ಗುರು ಸರ್ಕಲ್ ಮಾಡುವಂತಾಗಲು ಶಾಸಕ, ಸಂಸದರಿಂದ ಹಿಡಿದು ಪಾಲಿಕೆಯಲ್ಲಿ ಅಧಿಕಾರಿಗಳು, ಮೇಯರ್ ಪ್ರೇಮಾನಂದ ಶೆಟ್ಟಿ ಸೇರಿ ಎಲ್ಲರೂ ಬಹಳಷ್ಟು ಶ್ರಮ ವಹಿಸಿದ್ದಾರೆ. ಈಗ ಪ್ರಧಾನಿ ಮೋದಿ ಬಂದು ಮಾಲಾರ್ಪಣೆ ಮಾಡಿದ್ದರಿಂದ ದೇಶದ ಮಟ್ಟಕ್ಕೆ ಸರ್ಕಲ್ ಗೆ ಹೆಸರು ಬಂದಿದೆ ಎಂದರು.
![]()
ಮೋದಿ ಅವರನ್ನು ಸ್ವಾಗತಿಸಲು ಮಂಗಳೂರು ಮೇಯರ್ ಗೆ ಅವಕಾಶ ನೀಡಿಲ್ಲವೇ ಎಂಬ ಪ್ರಶ್ನೆಗೆ, ನಾವು ಎಸ್ ಪಿಜಿಗೆ ಕಳಿಸಿಕೊಟ್ಟ ಪಟ್ಟಿಯಲ್ಲಿ ಮೇಯರ್ ಹೆಸರು ಇತ್ತು. ಆದರೆ ಕೊನೆಕ್ಷಣದಲ್ಲಿ ಅವರ ಹೆಸರು ಬಿಟ್ಟು ಹೋಗಿತ್ತು. ಆ ರೀತಿಯ ಎಡವಟ್ಟು ಆಗಿದ್ದಕ್ಕೆ ನಮಗೆ ವಿಷಾದವಿದೆ ಎಂದರು. ಬಿರುವೆರ್ ಕುಡ್ಲ ತಂಡಕ್ಕೆ ಅವಕಾಶ ನೀಡಬೇಕಿತ್ತು ಎಂಬ ಅಭಿಪ್ರಾಯ ಕೇಳಿಬರುತ್ತಿದೆ ಎಂಬ ಪ್ರಶ್ನೆಗೆ, ನಾವು ಎಲ್ಲರನ್ನೂ ಜೊತೆಗೆ ಜೋಡಿಸಿಕೊಂಡು ಹೋಗುತ್ತಿದ್ದೇವೆ. ಮೂರು ದಿನದಲ್ಲಿ ಕಾರ್ಯಕ್ರಮ ಆಗಿದ್ದರಿಂದ ಕೆಲವೊಂದು ಎಡವಟ್ಟು ಆಗಿರಬಹುದು. ಅದನ್ನು ಸರಿ ಮಾಡುತ್ತೇವೆ ಎಂದಿದ್ದಾರೆ.
ವಿನಯ ಕುಮಾರ್ ಸೊರಕೆಯವರು ನಾರಾಯಣ ಗುರುಗಳ ಬಗ್ಗೆ ಮೋದಿಗೆ ಈಗ ನೆನಪಾಗಿದೆ ಎಂದು ಟೀಕಿಸಿದ್ದಕ್ಕೆ, ಗುರುಗಳ ಪ್ರತಿಮೆಗೆ ಪ್ರಧಾನಿ ಮಾಲಾರ್ಪಣೆ ಮಾಡಿದ್ದಕ್ಕೆ ಯಾರೂ ಮತ್ಸರ ಪಡಬಾರದು. ಇವರು ಬೇಕಿದ್ದರೆ ಸಿಎಂ ಸಿದ್ದರಾಮಯ್ಯ ಅವರನ್ನು ಕರೆಸಿ ಮಾಲಾರ್ಪಣೆ ಮಾಡಬಹುದಿತ್ತು. ಯಾಕೆ ಮಾಡಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
Mangalore PM offers Floral Tributes To Sri Narayana Guru, Kumpala slams those mocking.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm