ಬ್ರೇಕಿಂಗ್ ನ್ಯೂಸ್
17-04-24 02:16 pm Mangalore Correspondent ಕರಾವಳಿ
ಮಂಗಳೂರು, ಎ.17: ಕಾರು ಡಿಕ್ಕಿಯಾಗಿ ಬೈಕ್ ಸವಾರ, ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಯಾರ್ ನಲ್ಲಿ ನಡೆದಿದೆ.
ಬೆಳ್ತಂಗಡಿ ಮೂಲದ, ಅಡ್ಯಾರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಸಾವಿಯೊ ಮಹೇಶ್ (21) ಮೃತರು. ಅವರ ಜೊತೆಗಿದ್ದ ಸಹ ಸವಾರ, ಬೆಳ್ತಂಗಡಿ ಲಾಯ್ಲ ನಿವಾಸಿ ಪ್ರಣಮ್ ಶೆಟ್ಟಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಿಬ್ಬರೂ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಾಸ್ಟೆಲ್ ನಲ್ಲಿದ್ದುಕೊಂಡು ಓದುತ್ತಿದ್ದರು.

ಸೋಮವಾರ ಸಂಜೆ ಹೊರಗಡೆ ಟ್ಯೂಶನ್ ಮುಗಿಸಿ ಬೈಕಿನಲ್ಲಿ ರಾತ್ರಿ 9 ಗಂಟೆ ವೇಳೆಗೆ ಹಿಂತಿರುಗಿ ಸಹ್ಯಾದ್ರಿ ಕಾಲೇಜಿನತ್ತ ಬರುತ್ತಿದ್ದರು. ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಎದುರಿನ ರಸ್ತೆಯಿಂದ ಗೇಟಿನತ್ತ ತಿರುವು ಪಡೆಯುತ್ತಿದ್ದಾಗ ಬಿ.ಸಿ.ರೋಡ್ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಆಡಿ ಕಾರು ವೇಗವಾಗಿ ಬಂದು ಬೈಕಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ಇಬ್ಬರೂ ಗಂಭೀರ ಗಾಯಗೊಂಡಿದ್ದಾರೆ. ಮಹೇಶ್ ಅವರ ಮುಖ ಮತ್ತು ತಲೆಯ ಹಿಂಭಾಗಕ್ಕೆ ತೀವ್ರ ಗಾಯಗೊಂಡಿದ್ದು ಅವರನ್ನು ಕೂಡಲೇ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮಹೇಶ್ ಸಾವನ್ನಪ್ಪಿದ್ದರು.
ಗಾಯಾಳುಗಳನ್ನು ಆಟೋ ಚಾಲಕ ನಾಸಿರ್ ಕೂಡಲೇ ಆಸ್ಪತ್ರೆಗೆ ಒಯ್ದಿದ್ದು ನಾಸಿರ್ ದೂರಿನನ್ವಯ ಕಾರು ಚಾಲಕ ಶ್ಯಾಮ್ ಸುಧೀರ್ ವಿರುದ್ಧ ನಗರ ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನಿಂದ ಬಿಸಿ ರೋಡ್ ರಾಷ್ಟ್ರೀಯ ಹೆದ್ದಾರಿ ರಸ್ತೆ ಅವೈಜ್ಞಾನಿಕ ರೀತಿಯಲ್ಲಿದ್ದು ರಸ್ತೆ ವಿಭಜಕದ ನಡುವೆ ಜಾಗ ಇಲ್ಲ. ಯು ಟರ್ನ್ ಪಡೆಯುವಲ್ಲಿ ಎಲ್ಲ ಕಡೆಯೂ ಸಮಸ್ಯೆ ಇದ್ದು ಅಪಘಾತಕ್ಕೆ ಕಾರಣವಾಗುತ್ತಿದೆ. ಇತ್ತೀಚೆಗೆ ಅರ್ಕುಳದಲ್ಲಿ ಇದೇ ರೀತಿ ಹಲವಾರು ಅಪಘಾತಗಳಾಗಿದ್ದು ನಡುವೆ ನಿಲ್ಲುವುದಕ್ಕೂ ಜಾಗ ಇಲ್ಲದೆ ದ್ವಿಚಕ್ರ ವಾಹನ ಸವಾರರು ಬಲಿಯಾಗುತ್ತಿದ್ದಾರೆ.
Mangalore accident at Adyar, 21 year old engineering student dies after audi car rams bike. He was a engineering student of Shyadri college. The deceased has been identified as Savio Mahesh from Belthangady.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm