ಬ್ರೇಕಿಂಗ್ ನ್ಯೂಸ್
18-04-24 05:57 pm Mangalore Correspondent ಕರಾವಳಿ
ಮಂಗಳೂರು, ಎ.18: ನಗರದ ಉರ್ವಾ ಚಿಲಿಂಬಿಯ ಸಾಯಿಮಂದಿರದ ಬಳಿ ಚುನಾವಣೆ ಪ್ರಚಾರ ನಡೆಸುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿದ್ದಲ್ಲದೆ, ವಾಗ್ವಾದ ನಡೆಸಿದ ಘಟನೆ ನಡೆದಿದೆ.
ರಾಮನವಮಿ ಪ್ರಯುಕ್ತ ಸಾಯಿ ಮಂದಿರದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಹೀಗಾಗಿ ಭಕ್ತರ ಸಂಖ್ಯೆಯೂ ಹೆಚ್ಚಿತ್ತು. ಇದೇ ವೇಳೆ, ಮಂದಿರದ ಎದುರಿನ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸುತ್ತ ತೆರಳುತ್ತಿದ್ದರು. ಇದನ್ನು ಕಂಡ ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು, ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ಹೇಳಿದ್ದು ವಾಗ್ವಾದಕ್ಕೆ ಕಾರಣವಾಯಿತು.





ಕೆಲಹೊತ್ತಿನಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಸೇರಿದ್ದು, ಪರಸ್ಪರ ವಾಗ್ವಾದ ನಡೆಸಿದ್ದಾರೆ. ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ನೀವು ಯಾರು ಹೇಳೋಕೆ ಎಂದು ಬಿಜೆಪಿಯವರು ಪ್ರಶ್ನಿಸಿದರೆ, ಇಲ್ಲಿ ಪ್ರಚಾರ ಮಾಡಲಿಕ್ಕಿಲ್ಲ, ನಾವು ಮಾಡೋದಿಲ್ಲ. ಮಂದಿರದಲ್ಲಿ ರಾಜಕೀಯ ಇಲ್ಲ ಎಂದಿದ್ದಾರೆ. ನಾವು ಒಳಗಡೆ ಪ್ರಚಾರ ಮಾಡ್ತಾ ಇಲ್ಲ. ಹೊರಗಿನಿಂದ ನಾವು ಹೋಗ್ತಾ ಇದ್ದರೆ ನೀವು ಯಾಕೆ ಅಡ್ಡಿ ಬಂದಿದ್ದು ಎಂದು ವಾಗ್ವಾದ ಮಾಡಿದ್ದಾರೆ. ಹೊಯ್ ಕೈ ಆಗುತ್ತೆ ಎನ್ನುವಾಗ ಶಾಸಕ ವೇದವ್ಯಾಸ ಕಾಮತ್ ಮತ್ತು ಕಾಂಗ್ರೆಸ್ ಮುಖಂಡ ಮಿಥುನ್ ರೈ ಸ್ಥಳಕ್ಕಾಗಮಿಸಿ ಕಾರ್ಯಕರ್ತರನ್ನು ಸಮಾಧಾನ ಪಡಿಸಿದ್ದು, ದೂರಕ್ಕ ಕಳಿಸಿದ್ದಾರೆ.
ಉರ್ವಾ ಇನ್ಸ್ ಪೆಕ್ಟರ್ ಭಾರತೀ ಸ್ಥಳಕ್ಕೆ ಬಂದು ಸೇರಿದ್ದ ಜನರನ್ನು ಚದುರಿಸುವ ಕೆಲಸ ಮಾಡಿದ್ದಾರೆ. ಕೆಲಹೊತ್ತು ಚಿಲಿಂಬಿಯಲ್ಲಿ ಜನ ಸೇರಿದ್ದರಿಂದ ವಾಗ್ವಾದ, ಹೊಡೆದಾಟಕ್ಕೆ ಕಾರಣವಾಗುತ್ತಾ ಅನ್ನುವ ಸ್ಥಿತಿ ಉಂಟಾಗಿತ್ತು.
Congress BJP campaign turns into fight near Sai mandir Chilimbi in Mangalore. Police who arrived at the spot sent the members of both the party away.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm