ಬ್ರೇಕಿಂಗ್ ನ್ಯೂಸ್
18-04-24 05:57 pm Mangalore Correspondent ಕರಾವಳಿ
ಮಂಗಳೂರು, ಎ.18: ನಗರದ ಉರ್ವಾ ಚಿಲಿಂಬಿಯ ಸಾಯಿಮಂದಿರದ ಬಳಿ ಚುನಾವಣೆ ಪ್ರಚಾರ ನಡೆಸುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿದ್ದಲ್ಲದೆ, ವಾಗ್ವಾದ ನಡೆಸಿದ ಘಟನೆ ನಡೆದಿದೆ.
ರಾಮನವಮಿ ಪ್ರಯುಕ್ತ ಸಾಯಿ ಮಂದಿರದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಹೀಗಾಗಿ ಭಕ್ತರ ಸಂಖ್ಯೆಯೂ ಹೆಚ್ಚಿತ್ತು. ಇದೇ ವೇಳೆ, ಮಂದಿರದ ಎದುರಿನ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸುತ್ತ ತೆರಳುತ್ತಿದ್ದರು. ಇದನ್ನು ಕಂಡ ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು, ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ಹೇಳಿದ್ದು ವಾಗ್ವಾದಕ್ಕೆ ಕಾರಣವಾಯಿತು.





ಕೆಲಹೊತ್ತಿನಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಸೇರಿದ್ದು, ಪರಸ್ಪರ ವಾಗ್ವಾದ ನಡೆಸಿದ್ದಾರೆ. ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ನೀವು ಯಾರು ಹೇಳೋಕೆ ಎಂದು ಬಿಜೆಪಿಯವರು ಪ್ರಶ್ನಿಸಿದರೆ, ಇಲ್ಲಿ ಪ್ರಚಾರ ಮಾಡಲಿಕ್ಕಿಲ್ಲ, ನಾವು ಮಾಡೋದಿಲ್ಲ. ಮಂದಿರದಲ್ಲಿ ರಾಜಕೀಯ ಇಲ್ಲ ಎಂದಿದ್ದಾರೆ. ನಾವು ಒಳಗಡೆ ಪ್ರಚಾರ ಮಾಡ್ತಾ ಇಲ್ಲ. ಹೊರಗಿನಿಂದ ನಾವು ಹೋಗ್ತಾ ಇದ್ದರೆ ನೀವು ಯಾಕೆ ಅಡ್ಡಿ ಬಂದಿದ್ದು ಎಂದು ವಾಗ್ವಾದ ಮಾಡಿದ್ದಾರೆ. ಹೊಯ್ ಕೈ ಆಗುತ್ತೆ ಎನ್ನುವಾಗ ಶಾಸಕ ವೇದವ್ಯಾಸ ಕಾಮತ್ ಮತ್ತು ಕಾಂಗ್ರೆಸ್ ಮುಖಂಡ ಮಿಥುನ್ ರೈ ಸ್ಥಳಕ್ಕಾಗಮಿಸಿ ಕಾರ್ಯಕರ್ತರನ್ನು ಸಮಾಧಾನ ಪಡಿಸಿದ್ದು, ದೂರಕ್ಕ ಕಳಿಸಿದ್ದಾರೆ.
ಉರ್ವಾ ಇನ್ಸ್ ಪೆಕ್ಟರ್ ಭಾರತೀ ಸ್ಥಳಕ್ಕೆ ಬಂದು ಸೇರಿದ್ದ ಜನರನ್ನು ಚದುರಿಸುವ ಕೆಲಸ ಮಾಡಿದ್ದಾರೆ. ಕೆಲಹೊತ್ತು ಚಿಲಿಂಬಿಯಲ್ಲಿ ಜನ ಸೇರಿದ್ದರಿಂದ ವಾಗ್ವಾದ, ಹೊಡೆದಾಟಕ್ಕೆ ಕಾರಣವಾಗುತ್ತಾ ಅನ್ನುವ ಸ್ಥಿತಿ ಉಂಟಾಗಿತ್ತು.
Congress BJP campaign turns into fight near Sai mandir Chilimbi in Mangalore. Police who arrived at the spot sent the members of both the party away.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm