ಬ್ರೇಕಿಂಗ್ ನ್ಯೂಸ್
18-04-24 10:35 pm Mangalore Correspondent ಕರಾವಳಿ
ಮಂಗಳೂರು, ಎ.18: ದೇಶದ ಭವಿಷ್ಯದ ದೃಷ್ಟಿಯಿಂದ, ಈ ದೇಶದಲ್ಲಿ ಹಿಂದುತ್ವ ಉಳಿಯುವುದಕ್ಕಾಗಿ, ಮಕ್ಕಳ ಭವಿಷ್ಯಕ್ಕಾಗಿ ಮೋದಿಯನ್ನ ಮತ್ತೆ ಪ್ರಧಾನಿಯಾಗಿಸುವುದು ಅನಿವಾರ್ಯ. ರಾಮನ ಮಂದಿರ ನಾವು ಬದುಕಿರುವಾಗಲೇ ಆಗುತ್ತೋ ಇಲ್ಲವೋ ಅನ್ನುವ ಸಂಶಯ ಇತ್ತು. ಕಳೆದ ಬಾರಿ ಮೋದಿಯವರಿಗೆ 303 ಸ್ಥಾನ ಕೊಟ್ಟಿದ್ದಕ್ಕಾಗಿ ರಾಮ ಮಂದಿರ ಸಾಧ್ಯವಾಯಿತು. 500 ವರ್ಷಗಳ ಬಳಿಕ ನಾವು ರಾಮ ನವಮಿಯನ್ನು ವಿಜೃಂಭಣೆಯಿಂದ ಆಚರಿಸುವ ಸ್ಥಿತಿ ಬಂದಿದೆ ಎಂದು ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ.
ಬಿಜೆಪಿ ಮಂಗಳೂರು ದಕ್ಷಿಣ ಮಂಡಲದ ವತಿಯಿಂದ ಬಿಕರ್ನಕಟ್ಟೆ ಸಮೀಪದ ಮೈದಾನದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. 2014ರ ಹಿಂದಿನ ಪತ್ರಿಕೆ ನೋಡಿದರೆ ಪ್ರತಿ ದಿನವೂ ಭ್ರಷ್ಟಾಚಾರವೇ ದೊಡ್ಡ ಸುದ್ದಿಯಾಗಿರುತ್ತಿತ್ತು. ಹತ್ತು ವರ್ಷಗಳ ಸಾಧನೆ ಏನಂದ್ರೆ ಭ್ರಷ್ಟಾಚಾರ ರಹಿತ ಆಡಳಿತ. ಹತ್ತು ವರ್ಷಗಳಲ್ಲಿ ಯಾವುದೇ ಭಯೋತ್ಪಾದನೆ, ವಿಧ್ವಂಸಕ ಕೃತ್ಯದ ಭಯ ಇಲ್ಲದೆ ಜನರು ಜೀವನ ಮಾಡುವಂತಾಗಿದ್ದು ಸಾಧನೆ. ಹಿಂದುಗಳಿಗೆ ತಲೆಯೆತ್ತಿ ನಿಲ್ಲುವ ಸ್ಥಾನಮಾನವನ್ನು ಮೋದಿ ಕೊಡಿಸಿದ್ದಾರೆ.
ಸೇನೆಯಲ್ಲಿದ್ದಾಗ ಕಾಶ್ಮೀರದಲ್ಲಿ ಕೆಲಸ ಮಾಡಿ ಬಂದವನು ನಾನು. 370ನೇ ವಿಧಿ ರದ್ದುಪಡಿಸಿದ ವಿಚಾರದಲ್ಲಿ ಅಲ್ಲಿನ ಜನರಲ್ಲಿ ಮಾತನಾಡಿದ್ದೇನೆ. ಈ ದೇಶದಲ್ಲಿ ಎರಡು ಕಾನೂನು 70 ವರ್ಷಗಳ ಕಾಲ ಇತ್ತು ಎನ್ನುವುದೇ ನಮ್ಮ ದುರಂತ. ಅದರಿಂದ ನೆಹರು ಮತ್ತು ಶೇಖ್ ಅಬ್ದುಲ್ಲಾ ಕುಟುಂಬಕ್ಕೆ ಮಾತ್ರ ಲಾಭ ಆಗಿದ್ದು ಬಿಟ್ಟರೆ ದೇಶಕ್ಕೆ ಆಗಿಲ್ಲ. ಇವರ ಸ್ವಾರ್ಥಕ್ಕಾಗಿ ದೇಶವನ್ನು ಬಲಿಕೊಡಲು ಹೇಸದವರು ಕಾಂಗ್ರೆಸಿಗರು. 370 ವಿಧಿಯನ್ನು ರದ್ದುಪಡಿಸಿದ್ದರಿಂದ ಯಾವ ರೀತಿಯ ಬದಲಾವಣೆ ಆಗಿದೆ ಅನ್ನುವುದನ್ನು ಅಲ್ಲಿ ಹೋಗಿಯೇ ನೋಡಬೇಕು.
ಈ ಸಲ ಮೋದಿಯವರು 400 ಸ್ಥಾನ ಕೇಳುತ್ತಿದ್ದಾರೆ. ಇದು ಮೋದಿಯವರ ಸ್ವಾರ್ಥಕ್ಕಾಗಿ ಅಲ್ಲ. ದೇಶದಲ್ಲಿ ಎಲ್ಲರಿಗೂ ಸಮಾನ ಅವಕಾಶ ಸಿಗಬೇಕು, ಸಮಾನತೆ ಆಗಬೇಕು ಅನ್ನುವ ಕಾರಣಕ್ಕಾಗಿ 400 ಸ್ಥಾನ ಬೇಕು. ಮುಂದೆಂದೂ ತುಷ್ಟೀಕರಣಕ್ಕಾಗಿ ಧ್ವನಿ ಎತ್ತುವ ಧೈರ್ಯವೂ ಕಾಂಗ್ರೆಸಿಗರಿಗೆ ಬರಬಾರದು. ಇನ್ನಿರುವುದು ಎಂಟು ದಿನ. ಪ್ರತಿ ಬೀದಿಯಲ್ಲೂ ಮೋದಿಯವರು ಈ ದೇಶಕ್ಕೆ ಯಾಕೆ ಬೇಕು ಅನ್ನುವುದು ಪ್ರತಿ ಜನರ ಮಾತಾಗಬೇಕು.
ಕಳೆದ ಬಾರಿ ಸಿದ್ದರಾಮಯ್ಯ ಸರಕಾರ ಇದ್ದಾಗ ಪಿಎಫ್ಐ ಮೇಲಿದ್ದ ಕೇಸುಗಳನ್ನು ಹಿಂಪಡೆದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಎಫ್ಐನವರು ಎಷ್ಟೆಲ್ಲಾ ಕೊಲೆಗಳನ್ನು ಮಾಡಿದರು ಅಂತ ನಾವು ನೋಡಿದ್ದೇವೆ. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ನಮ್ಮ ಸಂಸದರು, ಶಾಸಕರ ಅಹವಾಲಿಗೆ ಸ್ಪಂದಿಸಿ, ಗೃಹ ಸಚಿವ ಅಮಿತ್ ಷಾ ಪಿಎಫ್ಐ ಸಂಘಟನೆಯನ್ನೇ ನಿಷೇಧ ಮಾಡಿದ್ದಾರೆ. ಆದರೆ ಇಂದು ಈ ಜಿಲ್ಲೆಯ ಕಾಂಗ್ರೆಸಿಗರು ಪ್ರವೀಣ್ ನೆಟ್ಟಾರು ಅವರನ್ನು ಕೊಂದ ಎಸ್ಡಿಪಿಐ ಜೊತೆ ಸೇರಿದ್ದಾರೆ. ನಮ್ಮ ಜನರು ಓಟು ಕೇಳಲು ಬರುವ ಕಾಂಗ್ರೆಸಿಗರಲ್ಲಿ ನೀವು ಮಾಡಿದ್ದು ಸರೀನಾ ಎಂದು ಪ್ರಶ್ನೆ ಮಾಡಬೇಕಾಗಿದೆ.
ವಿಧಾನಸೌಧದಲ್ಲಿ ಕಾಂಗ್ರೆಸಿಗನ್ಯಾರೋ ಪಾಕಿಸ್ತಾನ್ ಜಿಂದಾಬಾದ್ ಹೇಳಿದ್ದನ್ನು ನಾವು ನೋಡಿದ್ದೇವೆ. ಆದರೆ, ದೇಶ ವಿರೋಧಿ ಘೋಷಣೆ ಕೂಗಿದ ಘಟನೆಯನ್ನು ಖಂಡಿಸುವುದಕ್ಕೂ ಕಾಂಗ್ರೆಸಿಗರಿಗೆ ಧೈರ್ಯ ಇಲ್ಲ ಅಂದ್ರೆ ನಾವು ಏನನ್ನಬೇಕು. ಮೊನ್ನೆ ಮಾಜಿ ಡಿಸಿಎಂ ಸವದಿಯವರು ಬೆಳಗಾವಿಯ ಕಾಂಗ್ರೆಸ್ ಸಭೆಯಲ್ಲಿ ಭಾರತ್ ಮಾತಾ ಕೀ ಜೈ ಹಾಕಲು ಪಕ್ಕದಲ್ಲಿದ್ದ ಮಲ್ಲಿಕಾರ್ಜು ಖರ್ಗೆ ಬಳಿ ಪರ್ಮಿಶನ್ ಕೇಳಬೇಕಾಯಿತು. ಇದೆಂಥಾ ದುರವಸ್ಥೆ ನೋಡಿ. ಕಾಂಗ್ರೆಸ್ ಸರಕಾರ ಬಂದ ಕೂಡಲೇ ಇವರಿಗೆ ಭಂಡ ಧೈರ್ಯ ಏನು ನೋಡಿ. ಇವತ್ತು ಚಿಲಿಂಬಿಯ ಸಾಯಿ ಮಂದಿರದ ಬಳಿ ಚುನಾವಣಾ ಪ್ರಚಾರ ಮಾಡುತ್ತಿದ್ದಾಗಲೇ ಬಿಜೆಪಿಯವರನ್ನು ಅಡ್ಡ ಹಾಕಿದ್ದಾರೆ. ತಮ್ಮ ಸರಕಾರ ಇದೆಯೆಂದು ಹೀಗೆ ಮಾಡಿದ್ದಾರೆ. ಪ್ರಚಾರ ಮಾಡಬೇಕಿದ್ದರೆ ಇವರ ಪರ್ಮಿಶನ್ ಬೇಕಾ ಎಂದು ಬ್ರಿಜೇಶ್ ಚೌಟ ಪ್ರಶ್ನೆ ಮಾಡಿದರು. ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್, ವಿಕಾಸ್ ಪುತ್ತೂರು, ರವಿಶಂಕರ ಮಿಜಾರ್ ಮತ್ತಿತರರಿದ್ದರು.
BJP MP candidate Brijesh Chowta campaigns at Bikarnakatte ground in Mangalore. Spoke about how we need to vote for Modi again as PM for India.
01-05-24 09:35 pm
HK News Desk
Raju Kage, PM Modi: ಮೋದಿ ಸತ್ತರೆ ಮುಂದೆ ಯಾರೂ ಪ್...
01-05-24 07:12 pm
ಸತ್ಯ ಆದಷ್ಟು ಬೇಗ ಹೊರ ಬರಲಿದೆ ; ಜಾಲತಾಣದಲ್ಲಿ ಪ್ರಜ...
01-05-24 06:29 pm
ಕೂಲ್ ನಗರ ಬೆಂಗಳೂರು ಈಗ 'ಬೆಂದ'ಕಾಳೂರು ! ತಾಪಮಾನದಲ್...
01-05-24 05:34 pm
Prajwal Revanna sex case, Hassan, prayers: ಪ್...
01-05-24 03:00 pm
01-05-24 10:25 pm
HK NEWS
Salman Khan Shootout: ನಟ ಸಲ್ಮಾನ್ ಖಾನ್ ಮನೆ ಮೇಲ...
01-05-24 03:57 pm
Arvind Kejriwals, Supreme Court: ಬದುಕು ಮತ್ತು...
30-04-24 11:02 pm
ಭಾರತ ಜಗತ್ತಿನ ಸೂಪರ್ ಪವರ್ ಆಗಲು ಹೊರಟಿದ್ದರೆ, ಪಾ...
30-04-24 06:20 pm
Prajwal Revanna Hassan sex, Amit Shah: ರಾಷ್ಟ್...
30-04-24 05:27 pm
01-05-24 08:55 pm
Mangalore Correspondent
Hot sun heat, Mangalore temperature; ಕರಾವಳಿಯಲ...
01-05-24 11:43 am
Mangalore Super gold and diamound showroom, T...
30-04-24 08:04 pm
Prajwal Revanna sex scam, ACP Dhanya Nayak,...
30-04-24 01:05 pm
Mangalore crime, sexual Harrasment: ಮದುವೆ ಸಮಾ...
29-04-24 10:28 pm
01-05-24 10:18 pm
Mangaluru Correspondent
Mangalore crime, Court: ಮೆಲ್ಕಾರ್ ಬಳಿ ಕೋಮು ದ್ವ...
01-05-24 06:44 pm
Cyber Fraud, Online Crime: ಹೀಗೂ ಮೋಸ ಮಾಡ್ತಾರೆ,...
30-04-24 10:16 pm
Bangalore Crime, Fraud, House Rent: ಫ್ಲ್ಯಾಟ್...
29-04-24 11:50 am
Drugs case, Gujarat coast: ಬೋಟ್ ನಲ್ಲಿ ಸಿಕ್ತು...
28-04-24 09:46 pm