ಬ್ರೇಕಿಂಗ್ ನ್ಯೂಸ್
01-12-20 05:16 pm Mangalore Correspondent ಕರಾವಳಿ
ಮಂಗಳೂರು, ಡಿ.1: ಆಯುಷ್ ಇಲಾಖೆಯ ‘ಸೃಷ್ಟಿ ಕ್ರಿಯೆ’ಯ ಯೋಜನೆ ಫಲ ನೀಡಿದೆ. ಮದುವೆಯಾಗಿ 9 ವರ್ಷಗಳಾದರೂ ಮಕ್ಕಳಾಗದೆ ಬೇಸತ್ತಿದ್ದ ಮಹಿಳೆ ಗರ್ಭಿಣಿಯಾಗಿ ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ್ದಾರೆ.
ಹಾಸನ ಜಿಲ್ಲೆಯ ತರೀಕೆರೆ ಮೂಲದ ರಮೇಶ್ – ಶಶಿಕಲಾ ದಂಪತಿಗೆ ಮದುವೆಯಾಗಿ 9 ವರ್ಷಗಳಾದರೂ ಮಗು ಆಗಿರಲಿಲ್ಲ. ಅಲೋಪತಿ ಮತ್ತು ಆಯುರ್ವೇದ ಪ್ರಕಾರ ಹಲವೆಡೆ ಔಷಧಿಯನ್ನೂ ಮಾಡಿದ್ದರು. ಕಳೆದ ಬಾರಿಯ 2019ರ ಡಿಸೆಂಬರ್ ತಿಂಗಳಲ್ಲಿ ದಂಪತಿ ಆಯುಷ್ ಇಲಾಖೆಯಡಿ ಆರಂಭಗೊಂಡ ಸೃಷ್ಟಿ ಯೋಜನೆಯ ವಿಚಾರ ತಿಳಿದು ಪರೀಕ್ಷೆಗೆ ಬಂದಿದ್ದರು. ಅದರಂತೆ, ದಂಪತಿ ಅಲೋಪತಿ ಮತ್ತು ಆಯುರ್ವೇದ ಔಷಧ ನಿಲ್ಲಿಸಿ, ಹೋಮಿಯೋಪತಿ ಔಷಧಿ ಆರಂಭಿಸಿದ್ದರು.
ಎರಡೇ ತಿಂಗಳಲ್ಲಿ ಶಶಿಕಲಾ ಸಹಜ ಎನ್ನುವಂತೆ ಗರ್ಭ ಧರಿಸಿದ್ದರು. ಫೆಬ್ರವರಿಯಲ್ಲಿ ಗರ್ಭಿಣಿಯಾಗಿದ್ದ ಮಹಿಳೆ ಇದೀಗ ನವೆಂಬರ್ 28ರಂದು ಮಗುವಿಗೆ ಜನ್ಮ ನೀಡಿದ್ದಾರೆ. ಮಗು 3.3 ಕೆಜಿ ಭಾರ ಹೊಂದಿದ್ದು ಆರೋಗ್ಯವಾಗಿದೆ ಎಂದು ಚಿಕಿತ್ಸೆ ನೀಡಿರುವ ಯೇನಪೋಯ ಆಸ್ಪತ್ರೆಯ ಹೋಮಿಯೋಪತಿ ವಿಭಾಗದ ವೈದ್ಯ ಡಾ.ಕಿರಣ್ ಶಶಿಕಾಂತ್ ಹೇಳಿದ್ದಾರೆ. ಆಯುಷ್ ಸಂಯೋಜನೆಯಡಿ ಆರಂಭಗೊಂಡ ಸೃಷ್ಟಿ ಯೋಜನೆಯಲ್ಲಿ ಮಗುವಾಗಿದ್ದು ರಾಜ್ಯದಲ್ಲಿ ಇದೇ ಮೊದಲು.

ಜಿಲ್ಲಾ ಆಯುಷ್ ಇಲಾಖೆಯಡಿ ಯೇನಪೋಯ ಹೋಮಿಯೋಪತಿಕ್ ಮೆಡಿಕಲ್ ಕಾಲೇಜಿನ ಸಹಯೋಗದಲ್ಲಿ ಸೃಷ್ಟಿ ಯೋಜನೆ ಆರಂಭಿಸಲಾಗಿತ್ತು. ಮಕ್ಕಳಾಗದವರಿಗೆ ನವೀನ ತೆರನಾದ ಚಿಕಿತ್ಸೆ ನೀಡುವ ಮೂಲಕ ಗರ್ಭಿಣಿಯಾಗಿಸುವ ಯೋಜನೆಗೆ 2019ರ ಆಗಸ್ಟ್ 29ರಂದು ಆಯುಷ್ ಇಲಾಖೆ ಸಚಿವ ಶ್ರೀಪಾದ್ ನಾಯ್ಕ್ ಚಾಲನೆ ನೀಡಿದ್ದರು.
ಸೃಷ್ಟಿ ಹೋಮಿಯೋಪತಿಕ್ ಫರ್ಟಿಲಿಟಿ ಕೇರ್ ಸೆಂಟರ್ ಎನ್ನುವ ವಿಭಾಗವನ್ನು ಆಯುಷ್ ಇಲಾಖೆಯಡಿ ವೆನ್ಲಾಕ್ ಆಸ್ಪತ್ರೆಯಲ್ಲಿ ಆರಂಭಿಸಲಾಗಿದ್ದು 42 ಮಂದಿ ಮಕ್ಕಳಾಗದವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಕ್ಕಳಾಗದೆ ನೋವು ಅನುಭವಿಸುವ ದಂಪತಿಗೆ ಇದೊಂದು ಆಶಾಕಿರಣ ಎಂದು ಆಯುಷ್ ವೈದ್ಯ ಡಾ.ಮೊಹಮ್ಮದ್ ಇಕ್ಬಾಲ್ ತಿಳಿಸಿದ್ದಾರೆ.
An experiment undertaken under ambitious 'Srishti' scheme introduced by the Ayush department of Dakshina Kannada district to help childless couples to have children, has borne fruits perhaps for the first time in the state. A baby has been born out of homeopathy fertility treatment.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am