ಬ್ರೇಕಿಂಗ್ ನ್ಯೂಸ್
19-04-24 05:18 pm Mangalore Correspondent ಕರಾವಳಿ
ಮಂಗಳೂರು, ಎ.19: ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರೊಡನೆ ಒಡಂಬಡಿಕೆ ಮಾಡಿಕೊಂಡ ಮಂಗಳೂರಿನ ಕೊಂಕಣಿ ನಾಟಕ ರೆಪರ್ಟರಿ ಕಲಾಕುಲ್ ಇಲ್ಲಿ ಒಂದು ವರ್ಷದ ರಂಗ ತರಬೇತಿ ಡಿಪ್ಲೋಮಾ ಕೋರ್ಸ್ ಆರಂಭಿಸಲಾಗುವುದು ಎಂದು ಮಾಂಡ್ ಸೊಭಾಣ್ ಗುರಿಕಾರ ಎರಿಕ್ ಒಝೇರಿಯೊ ತಿಳಿಸಿದ್ದಾರೆ.
ಕೊಂಕಣಿ ಸಾಂಸ್ಕೃತಿಕ ಕ್ಷೇತ್ರದ ದಿಗ್ಗಜ ಮಾಂಡ್ ಸೊಭಾಣ್ ಕೊಂಕಣಿ ರಂಗಭೂಮಿಗೆ ಮಹತ್ತರ ಕೊಡುಗೆ ನೀಡಿದೆ. `ಕಲಾಕುಲ್’ ಕೊಂಕಣಿಯ ಏಕಮಾತ್ರ ನಾಟಕ ರೆಪರ್ಟರಿಯನ್ನು ಆರಂಭಿಸಿ, ಆಧುನಿಕ ನಾಟಕಗಳನ್ನು ರಚಿಸಿ ಪ್ರದರ್ಶಿಸಿದ ಕೀರ್ತಿ ಇದಕ್ಕೆ ಸಲ್ಲುತ್ತದೆ. ಕಳೆದ 13 ವರ್ಷಗಳಿಂದ ಖಾಸಗಿಯಾಗಿ ಕೊಂಕಣಿ ರಂಗಭೂಮಿ ಡಿಪ್ಲೋಮಾ ನಡೆಸುತ್ತಿದ್ದು, ಇದುವರೆಗೆ ನೂರಾರು ವಿದ್ಯಾರ್ಥಿಗಳು ಈ ಡಿಪ್ಲೋಮಾ ಪಡೆದಿದ್ದಾರೆ. ಸುಮಾರು 50 ನಾಟಕ, ಕಿರುನಾಟಕಗಳ 250 ಕ್ಕೂ ಮಿಕ್ಕಿ ಪ್ರದರ್ಶನಗಳು ದೇಶ ವಿದೇಶಗಳಲ್ಲಿ ನಡೆದಿವೆ.
ಮಾಂಡ್ ಸೊಭಾಣ್ ಸಂಸ್ಥೆಯು `ಕಲಾಂಗಣ’ ಸಾಂಸ್ಕೃತಿಕ ಕೇಂದ್ರವನ್ನು ಸ್ಥಾಪಿಸಿದ್ದು ಇಲ್ಲಿ ಅನನ್ಯ ಬಯಲು ರಂಗ ಮಂದಿರದೊಡನೆ, ರಂಗ ತರಬೇತಿ ಮತ್ತು ಸಂಶೋಧನೆಗೆ ಅಗತ್ಯವಿರುವ ಎಲ್ಲಾ ಸವಲತ್ತುಗಳನ್ನು ಕಲ್ಪಿಸಲಾಗಿದೆ. ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ನಾಗೇಶ್ ವಿ. ಬೆಟ್ಟಕೋಟೆ ನೇತೃತ್ವದ ತಂಡ ಆಗಮಿಸಿ, ಪರಿಶೀಲಿಸಿದ ಬಳಿಕ ಕಲಾಕುಲ್ ವತಿಯಿಂದ ಒಂದು ವರ್ಷದ ರಂಗ ತರಬೇತಿ ಡಿಪ್ಲೋಮಾ ನಡೆಸಲು ಅನುಮೋದನೆ ನೀಡಿದೆ. ವಿಶ್ವವಿದ್ಯಾಲಯದ ನಿರ್ದೇಶನದ ಮೇರೆಗೆ ಆಡಳಿತ ಸಮಿತಿ ರಚಿಸಲಾಗಿದ್ದು, ಅದು ಸಭೆ ಸೇರಿ ಶೈಕ್ಷಣಿಕ ಮಾರ್ಗದರ್ಶಿ ಸೂತ್ರಗಳನ್ನು ರಚಿಸಿದೆ. ಅದರಂತೆ ಸೂಕ್ತ ತಯಾರಿ ನಡೆಸಿದ್ದು, ಎನ್ಎಸ್ ಡಿ ಮತ್ತು ರಂಗಾಯಣದಿಂದ ಪದವಿ ಪಡೆದ ಉಪನ್ಯಾಸಕರನ್ನು ನೇಮಿಸಲಾಗುವುದು.
ಜುಲೈ 01 ರಿಂದ ಆರಂಭವಾಗುವ 2024-25 ನೇ ಶೈಕ್ಷಣಿಕ ವರ್ಷದಿಂದ ಈ ರಂಗ ತರಬೇತಿ ಡಿಪ್ಲೋಮಾ ಕೋರ್ಸ್ ಆರಂಭಿಸಲಾಗುವುದು. ಕನಿಷ್ಠ ಪಿಯುಸಿ ವಿದ್ಯಾರ್ಹತೆ ಹೊಂದಿದ ಯಾವುದೇ ಮಾತೃಭಾಷೆಯ ವಿದ್ಯಾರ್ಥಿಗಳು ಈ ಡಿಪ್ಲೋಮಾ ಪಡೆಯಲು ಅರ್ಹರಾಗಿದ್ದು, ಒಂದು ವರ್ಷದ ಎರಡು ಸೆಮಿಸ್ಟರಿನ ಈ ಕೋರ್ಸ್ ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ನಡೆಯಲಿದೆ. ಅಂತಿಮ ಪರೀಕ್ಷೆಯನ್ನು ವಿಶ್ವವಿದ್ಯಾಲಯವೇ ನಡೆಸುತ್ತದೆ. ಇದು ಪೂರ್ಣಕಾಲೀಕ ಕೋರ್ಸ್ ಆಗಿದ್ದು, ಈ ಕೋರ್ಸ್ ಪಡೆದವರಿಗೆ ಶಾಲೆ ಕಾಲೇಜುಗಳಲ್ಲಿ ರಂಗ ತರಬೇತಿ ಶಿಕ್ಷಕರಾಗಿ ದುಡಿಯಲು ಅವಕಾಶ ಲಭಿಸಲಿದೆ. ಅಗತ್ಯವುಳ್ಳವರಿಗೆ ಹಾಸ್ಟೆಲ್ ಸೌಲಭ್ಯವಿದೆ.
ಈ ಕೋರ್ಸ್ಗೆ ಸೇರಲಿಚ್ಛಿಸುವ ವಿದ್ಯಾರ್ಥಿಗಳು ಅರ್ಜಿಗಳನ್ನು www.manddsobhann.org ಡೌನ್ಲೋಡ್ ಮಾಡಿ, ಸರಿಯಾಗಿ ಭರ್ತಿ ಮಾಡಿ, ಸೂಕ್ತ ದಾಖಲೆಗಳೊಂದಿಗೆ, ಜೂನ್ 15ರೊಳಗೆ ಕಲಾಂಗಣ, ಮಕಾಳೆ, ಶಕ್ತಿನಗರ, ಮಂಗಳೂರು 575016 ಇಲ್ಲಿಗೆ ಅಂಚೆ ಮೂಲಕ ಅಥವಾ ಕೈಯಾರೆ ತಲುಪಿಸಬೇಕು. ಹೆಚ್ಚಿನ ಮಾಹಿತಿಗಾಗಿ (63640 22333-ಆಡಳಿತಾಧಿಕಾರಿ ಅಥವಾ 81052 26626-ಕಛೇರಿ) ಇಲ್ಲಿ ಸಂಪರ್ಕಿಸಬಹುದು. ಪತ್ರಿಕಾ ಗೋಷ್ಠಿಯಲ್ಲಿ ಲುವಿ ಜೆ. ಪಿಂಟೊ, ವಿದುಷಿ ರಾಜಶ್ರೀ ಎಸ್ ಶೆಣೈ, ಡಾ. ಎಸ್ಬಿಎಮ್ ಪ್ರಸನ್ನ, ಅರುಣ್ ರಾಜ್ ರೊಡ್ರಿಗಸ್ ಉಪಸ್ಥಿತರಿದ್ದರು.
Kalakul launches year-long diploma course in theatre training in Mangalore which has entered into an MoU with Dr Gangubai Hangal Music and Performing Arts University, Mysuru
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm