ಬ್ರೇಕಿಂಗ್ ನ್ಯೂಸ್
19-04-24 09:55 pm Mangalore Correspondent ಕರಾವಳಿ
ಮಂಗಳೂರು, ಎ.19: ರಸ್ತೆ ದಾಟುತ್ತಿದ್ದ ಯುವಕನೊಬ್ಬ ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದು ಆತನ ಮೇಲೆ ಟ್ಯಾಂಕರ್ ಲಾರಿ ಹರಿದ ಘಟನೆ ನಗರದ ಕೊಟ್ಟಾರ ಚೌಕಿ ಬಳಿ ನಡೆದಿದ್ದು ಸ್ಥಳದಲ್ಲೇ ಯುವಕ ದಾರುಣ ಮೃತಪಟ್ಟಿದ್ದಾನೆ.
ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್(29) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಕೊಟ್ಟಾರ ಬಳಿಯ ಕೋಡಿಕಲ್ ಕ್ರಾಸ್ ನಲ್ಲಿ ಘಟನೆ ನಡೆದಿದೆ.
ಬೆಳಗ್ಗೆ 9 ಗಂಟೆ ಸುಮಾರಿಗೆ ಅಪಘಾತವಾಗಿದ್ದು ಸ್ಥಳದಲ್ಲಿ ಟ್ರಾಫಿಕ್ ಬ್ಲಾಕ್ ಆಗಿ ಕಿಮೀ ಉದ್ದಕ್ಕೆ ವಾಹನಗಳು ಸಾಲುಗಟ್ಟಿದ್ದವು. ಯುವಕ ಸ್ಥಳದಲ್ಲೇ ಸಾವು ಕಂಡಿದ್ದರಿಂದ ಆತನ ಗುರುತು ಪತ್ತೆಯಾಗಿರಲಿಲ್ಲ. ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರು ಯುವಕನ ಕಿಸೆಯಲ್ಲಿ ಐಡಿ ಕಾರ್ಡ್ ಇದೆಯಾ ಎಂದು ಹುಡುಕಾಟ ನಡೆಸುತ್ತಿದ್ದರು. ಬಳಿಕ ಆತನ ಜೊತೆಗೆ ಕೆಲಸ ನಿರ್ವಹಿಸುತ್ತಿದ್ದವರು ಬಂದು ಗುರುತು ಹೇಳಿದ್ದಾರೆ.
ಕೋಡಿಕಲ್ ಕ್ರಾಸ್ ಆಗುವಲ್ಲಿ ಅತಿ ವೇಗದಿಂದ ಈ ಕಡೆಯಿಂದ ವಾಹನಗಳು ಸಾಗುವುದರಿಂದ ನಿರಂತರ ಅಪಘಾತಕ್ಕೆ ಕಾರಣವಾಗುತ್ತಿದೆ. ಅಸಮರ್ಪಕ ಹೆದ್ದಾರಿ ನಿರ್ಮಾಣವೂ ಇದಕ್ಕೆ ಕಾರಣ. ಯುವಕನಿಗೆ ಬೈಕ್ ತಾಗಿದ್ದರಿಂದ ಸವಾರನೂ ನೆಲಕ್ಕೆ ಬಿದ್ದು ಗಾಯಗೊಂಡಿದ್ದ. ಆದರೆ ಪಾದಚಾರಿ ಯುವಕನ ಮೇಲೆ ಹರಿದ ಟ್ಯಾಂಕರ್ ಲಾರಿ ಆತನ ಪ್ರಾಣ ಕಸಿದು ಬಿಟ್ಟಿದೆ. ಬೆಳಗ್ಗೆ ಆಗಿದ್ದರಿಂದ ಸ್ಥಳದಲ್ಲಿ ಪೊಲೀಸರೂ ಇಲ್ಲದೆ ಟ್ರಾಫಿಕ್ ಸರಿಪಡಿಸುವುದಕ್ಕೂ ಯಾರೂ ಇರಲಿಲ್ಲ. ಸ್ಥಳೀಯರೇ ಸೇರಿಕೊಂಡು ಟ್ರಾಫಿಕ್ ಸರಿಪಡಿಸಲು ಮುಂದಾಗಿದ್ದರು.
Mangalore accident worker from UP run over by tanker in Kulur. The deceased is identified as Guddu Yadav, 29, from Uttar Pradesh.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm