ಬ್ರೇಕಿಂಗ್ ನ್ಯೂಸ್
19-04-24 09:55 pm Mangalore Correspondent ಕರಾವಳಿ
ಮಂಗಳೂರು, ಎ.19: ರಸ್ತೆ ದಾಟುತ್ತಿದ್ದ ಯುವಕನೊಬ್ಬ ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದು ಆತನ ಮೇಲೆ ಟ್ಯಾಂಕರ್ ಲಾರಿ ಹರಿದ ಘಟನೆ ನಗರದ ಕೊಟ್ಟಾರ ಚೌಕಿ ಬಳಿ ನಡೆದಿದ್ದು ಸ್ಥಳದಲ್ಲೇ ಯುವಕ ದಾರುಣ ಮೃತಪಟ್ಟಿದ್ದಾನೆ.
ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್(29) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಕೊಟ್ಟಾರ ಬಳಿಯ ಕೋಡಿಕಲ್ ಕ್ರಾಸ್ ನಲ್ಲಿ ಘಟನೆ ನಡೆದಿದೆ.

ಬೆಳಗ್ಗೆ 9 ಗಂಟೆ ಸುಮಾರಿಗೆ ಅಪಘಾತವಾಗಿದ್ದು ಸ್ಥಳದಲ್ಲಿ ಟ್ರಾಫಿಕ್ ಬ್ಲಾಕ್ ಆಗಿ ಕಿಮೀ ಉದ್ದಕ್ಕೆ ವಾಹನಗಳು ಸಾಲುಗಟ್ಟಿದ್ದವು. ಯುವಕ ಸ್ಥಳದಲ್ಲೇ ಸಾವು ಕಂಡಿದ್ದರಿಂದ ಆತನ ಗುರುತು ಪತ್ತೆಯಾಗಿರಲಿಲ್ಲ. ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರು ಯುವಕನ ಕಿಸೆಯಲ್ಲಿ ಐಡಿ ಕಾರ್ಡ್ ಇದೆಯಾ ಎಂದು ಹುಡುಕಾಟ ನಡೆಸುತ್ತಿದ್ದರು. ಬಳಿಕ ಆತನ ಜೊತೆಗೆ ಕೆಲಸ ನಿರ್ವಹಿಸುತ್ತಿದ್ದವರು ಬಂದು ಗುರುತು ಹೇಳಿದ್ದಾರೆ.
ಕೋಡಿಕಲ್ ಕ್ರಾಸ್ ಆಗುವಲ್ಲಿ ಅತಿ ವೇಗದಿಂದ ಈ ಕಡೆಯಿಂದ ವಾಹನಗಳು ಸಾಗುವುದರಿಂದ ನಿರಂತರ ಅಪಘಾತಕ್ಕೆ ಕಾರಣವಾಗುತ್ತಿದೆ. ಅಸಮರ್ಪಕ ಹೆದ್ದಾರಿ ನಿರ್ಮಾಣವೂ ಇದಕ್ಕೆ ಕಾರಣ. ಯುವಕನಿಗೆ ಬೈಕ್ ತಾಗಿದ್ದರಿಂದ ಸವಾರನೂ ನೆಲಕ್ಕೆ ಬಿದ್ದು ಗಾಯಗೊಂಡಿದ್ದ. ಆದರೆ ಪಾದಚಾರಿ ಯುವಕನ ಮೇಲೆ ಹರಿದ ಟ್ಯಾಂಕರ್ ಲಾರಿ ಆತನ ಪ್ರಾಣ ಕಸಿದು ಬಿಟ್ಟಿದೆ. ಬೆಳಗ್ಗೆ ಆಗಿದ್ದರಿಂದ ಸ್ಥಳದಲ್ಲಿ ಪೊಲೀಸರೂ ಇಲ್ಲದೆ ಟ್ರಾಫಿಕ್ ಸರಿಪಡಿಸುವುದಕ್ಕೂ ಯಾರೂ ಇರಲಿಲ್ಲ. ಸ್ಥಳೀಯರೇ ಸೇರಿಕೊಂಡು ಟ್ರಾಫಿಕ್ ಸರಿಪಡಿಸಲು ಮುಂದಾಗಿದ್ದರು.
Mangalore accident worker from UP run over by tanker in Kulur. The deceased is identified as Guddu Yadav, 29, from Uttar Pradesh.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm