ಬ್ರೇಕಿಂಗ್ ನ್ಯೂಸ್
20-04-24 12:12 pm Mangalore Correspondent ಕರಾವಳಿ
ಮಂಗಳೂರು, ಎ.20: ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಕಡೆ ನಿನ್ನೆ ರಾತ್ರಿ ಭಾರೀ ಮಳೆಯಾಗಿದೆ. ಮಂಗಳೂರು ನಗರ ಭಾಗದಲ್ಲಿ ನಸುಕಿನ ನಾಲ್ಕರಿಂದ 5 ಗಂಟೆ ವೇಳೆಗೆ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಭಾರೀ ಮಳೆಯಾಗಿದೆ. ಭಾರೀ ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನತೆ ಏಕಾಏಕಿ ಸುರಿದ ಮಳೆಯಿಂದ ನೆಮ್ಮದಿಯ ಉಸಿರು ಬಿಟ್ಟಿದ್ದಾರೆ.
ಸಿಡಿಲಿನ ಅಬ್ಬರಕ್ಕೆ ಮಂಗಳೂರಿನಲ್ಲಿ ವಿದ್ಯುತ್ ಕಡಿತಗೊಂಡಿತ್ತು. ಹವಾಮಾನ ಇಲಾಖೆ ಮಾಹಿತಿಯಂತೆ ಮುಂದಿನ ಮೂರು ದಿನ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಸುಳ್ಯ ಕಲ್ಮಡ್ಕ ಗ್ರಾಮದ ಮುಚ್ಚಿಲ ಕಜೆ ಅಬ್ಬಾಸ್ ಎಂಬವರ ಮನೆಗೆ ಸಿಡಿಲು ಬಡಿದಿದ್ದು ಹಟ್ಟಿಯಲ್ಲಿದ್ದ ಕರು ಬಲಿಯಾಗಿದೆ. ಮನೆಯ ವಯರಿಂಗ್, ಸ್ವಿಚ್ ಬೋರ್ಡ್ ಗಳು ಸಂಪೂರ್ಣ ಸುಟ್ಟು ಹೋಗಿದೆ. ಮನೆಮಂದಿ ಅಪಾಯದಿಂದ ಪಾರಾಗಿದ್ದಾರೆ.




ಶುಕ್ರವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರಿನ ಬಹುತೇಕ ಭಾಗದಲ್ಲಿ ಸಿಡಿಲು ಸಹಿತ ಉತ್ತಮ ಮಳೆಯಾಗಿತ್ತು. ಬೆಳ್ತಂಗಡಿಯ ಸೋಮಂತಡ್ಕ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ರಸ್ತೆಯನ್ನು ಸಂಪೂರ್ಣ ಅಗೆದು ಹಾಕಲಾಗಿದ್ದು, ಮಳೆಯಿಂದಾಗಿ ಕೆಸರು ರಸ್ತೆಯಲ್ಲೇ ಜನ ಪರದಾಡುವ ಸ್ಥಿತಿಯಾಗಿದೆ.
ಮಂಗಳೂರಿನಲ್ಲಿ ಹಂಪನಕಟ್ಟೆ ಬಳಿ ಭಾರಿ ಗಾತ್ರದ ಮರ ನೆಲಕ್ಕೆ ಉರುಳಿದ್ದರಿಂದ ರಸ್ತೆ ಬದಿ ನಿಲ್ಲಿಸಿದ್ದ ಕಾರು ಹಾಗೂ ಬೈಕ್ ಜಖಂಗೊಂಡಿವೆ. ವಾಹನದಲ್ಲಿ ಯಾರೂ ಇಲ್ಲದೇ ಇರೋದರಿಂದ ಜನಸಾಮಾನ್ಯರಿಗೆ ಯಾವುದೇ ಅಪಾಯ ಸಂಭವಿಸಲಿಲ್ಲ.
Various parts of Mangalore, Udupi receive first summer showers and heavy lightening. Residents of Dakshina Kannada and Udupi districts breathed a sigh of relief as substantial rainfall graced the region in the early hours of Saturday, April 20.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm