ಬ್ರೇಕಿಂಗ್ ನ್ಯೂಸ್
20-04-24 04:45 pm Mangalore Correspondent ಕರಾವಳಿ
ಬಂಟ್ವಾಳ, ಎ.20: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್ ನಾಯಕಿ, ಸಿಎಂ ಸಿದ್ದರಾಮಯ್ಯ ಆಪ್ತರಾಗಿದ್ದ ಬಿಲ್ಲವ ಸಮುದಾಯಕ್ಕೆ ಸೇರಿದ ಕವಿತಾ ಸನಿಲ್ ಬಿಜೆಪಿ ಸೇರಿದ್ದಾರೆ.
ಬಂಟ್ವಾಳದ ಬಿಸಿ ರೋಡ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕವಿತಾ ಸನಿಲ್ ಮತ್ತು ಬಂಟ್ವಾಳದ ತಾಲೂಕು ಪಂಚಾಯತ್ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಸಮಾವೇಶದಲ್ಲಿ ಮಾತನಾಡಿದ ಕವಿತಾ ಸನಿಲ್, ನನ್ನ ರಾಜಕೀಯ ಗುರು ಜನಾರ್ದನ ಪೂಜಾರಿ ಆಶೀರ್ವಾದ ಪಡೆದು ಇಲ್ಲಿ ಬಂದಿದ್ದೇನೆ. ಒಳ್ಳೆಯದಾಗೋದಿದ್ದರೆ ಹೋಗು ಅಂತ ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಆಡಳಿತ ಇದೆ, ಏನೋ ಆಸೆ ಇಟ್ಟುಕೊಂಡು ಬಿಜೆಪಿ ಸೇರಿದ್ದೇನೆ ಅಂತ ಅಂದ್ಕೊಳ್ಳಬೇಡಿ. ಬಿಜೆಪಿಗೆ ಅಧಿಕಾರ ಇಲ್ಲ. ಪ್ರಧಾನಿ ಮೋದಿಯವರ ಆಡಳಿತ ನೋಡಿ ಬಿಜೆಪಿ ಸೇರುತ್ತಿದ್ದೇನೆ. ರಾಜ್ಯದಲ್ಲಿ ಏನಾಗುತ್ತಿದೆ ಅಂತ ನೋಡುತ್ತಿದ್ದೇವೆ.
ನಿನ್ನೆ ನೇಹಾ ಎಂಬ ವಿದ್ಯಾರ್ಥಿನಿಯನ್ನು ಹಾಡಹಗಲೇ ಕೊಲೆ ಮಾಡಿದ ಘಟನೆಯನ್ನು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಕ್ಷುಲ್ಲಕವಾಗಿ ಮಾತನಾಡಿದ್ದಾರೆ. ನಮ್ಮ ಜೀವಕ್ಕೆ ಬೆಲೆ ಇಲ್ಲವೇ ಎಂದು ಇವರಲ್ಲಿ ಕೇಳಬೇಕಾಗಿದೆ. ಕಳೆದ ಕೆಲವು ತಿಂಗಳಲ್ಲಿ ಕೊಲೆ ಸರಣಿಯೇ ಆಗಿಹೋಗಿದೆ. ಇದು ಇವರ ಆಡಳಿತ ಸ್ಥಿತಿ. ಅಯೋಧ್ಯೆಯಲ್ಲಿ ರಾಮ ಮಂದಿರ ಆಗಿರೋದು ನಮ್ಮೆಲ್ಲರ ಭಾಗ್ಯ. ಈ ಸಲದ ಚುನಾವಣೆ ಮೋದಿಗಾಗಿ ಕೊಡುವ ಮತ ಅಲ್ಲ. ರಾಮನಿಗಾಗಿ ಕೊಡುವ ಮತ. ಈ ಬಾರಿ ಅತಿ ಹೆಚ್ಚು ಮತಗಳಿಂದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರನ್ನು ನಾವು ಗೆಲ್ಲಿಸಬೇಕಾಗಿದೆ ಎಂದರು.
Kavitha Sanil Ex Mayor of Mangalore joins BJP party in the presence of BJP state president Yediyurappa Vijayendra at Bantwal.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm