ಬ್ರೇಕಿಂಗ್ ನ್ಯೂಸ್
22-04-24 09:34 pm Mangalore Correspondent ಕರಾವಳಿ
ಮಂಗಳೂರು, ಎ.22: ರಾಜ್ಯ ಸರ್ಕಾರ ನೇಹಾ ಹತ್ಯೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ. ಮೂರು ತಿಂಗಳೊಳಗೆ ತನಿಖೆ ಮುಗಿದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದು ರಾಜ್ಯ ಸರ್ಕಾರ ನೀಡುವ ಭರವಸೆ ಎಂದು ಎಐಸಿಸಿ ಸೆಕ್ರೆಟರಿ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನೇಹಾ ಪ್ರಕರಣಕ್ಕೆ ನ್ಯಾಯ ಒದಗಿಸುವುದೇ ಮುಖ್ಯ ಹೊರತು
ರಾಜಕೀಯಗೊಳಿಸುವುದಲ್ಲ. ನೇಹಾ ಪ್ರಕರಣವನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ. ನೇಹಾ ಕುಟುಂಬದ ಭಾವನೆಗಳಿಗೆ ಧಕ್ಕೆ ತರುತ್ತಿದೆ. ಈ ಹಿಂದೆ ಉತ್ತರ ಕನ್ನಡದ ಪರೇಶ್ ಮೇಸ್ತಾ ಹತ್ಯೆ ಪ್ರಕರಣ ನೆನಪಿರಬಹುದು. ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪರೇಶ್ ಮೇಸ್ತಾ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಂಡಿತ್ತು. ಮೋದಿಯಿಂದ ಹಿಡಿದು ರಾಜ್ಯದ ಎಲ್ಲಾ ನಾಯಕರು ಚುನಾವಣೆಯಲ್ಲಿ ಮೇಸ್ತಾ ವಿಚಾರ ಬಳಸಿದ್ರು. ಆ ಪ್ರಕರಣವನ್ನು ಸಿಬಿಐಗೆ ನೀಡಿದ್ದೇ ಕಾಂಗ್ರೆಸ್. ಪ್ರಕರಣದಲ್ಲಿ ತನಿಖೆ ನಡೆದು ಬೆಳಕಿಗೆ ಬಂದ ವಿಚಾರ ಎಲ್ಲರಿಗೂ ಗೊತ್ತಿದೆ. ಮೇಸ್ತಾ ವಿಚಾರದಲ್ಲಿ ಬಿಜೆಪಿ ಮುಖ ಭಂಗ ಅನುಭವಿಸಿತ್ತು ಎಂದರು.

ಎನ್.ಡಿ.ಆರ್.ಎಫ್ ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮೋಸ ಆಗಿದೆ. ಅಮಿತ್ ಶಾ ಕರ್ನಾಟಕಕ್ಕೆ ಮತ್ತೆ ಬರ್ತಾ ಇದ್ದಾರೆ. ಕಾಂಗ್ರೆಸ್ ಅಮಿತ್ ಶಾ ಅವರಿಗೆ ಎಚ್ಚರಿಕೆ ನೀಡುತ್ತಿದೆ. ರಾಜ್ಯಕ್ಕೆ ಬರುವ ಮೊದಲು ಬರ ಪರಿಹಾರದ ಹಣ ಬಿಡುಗಡೆ ಮಾಡಬೇಕು. ಇಂದು ಸಂಜೆಯೊಳಗಡೆ ಹಣ ಬಿಡಬೇಕು. ಹಣ ಬಿಡುಗಡೆ ಮಾಡಿದ ಬಳಿಕವೇ ರಾಜ್ಯಕ್ಕೆ ಕಾಲಿಡಬೇಕು ಎಂದು ಖಡಕ್ಕಾಗಿ ಹೇಳಿದರು.
ಕೇಂದ್ರ ಸರಕಾರ ಕನ್ನಡಿಗರಿಗೆ , ರಾಜ್ಯದ ರೈತರಿಗೆ ಅನ್ಯಾಯ ಮಾಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗಾದ ಸೋಲಿಗೆ ಸೇಡು ತೀರಿಸಿಕೊಳ್ಳಲಾಗಿದೆ. ಬರ ಪರಿಹಾರ ನೀಡದೇ ಕರ್ನಾಟಕದ ಜನರಲ್ಲಿ ಸೇಡು ತೀರಿಸಿಕೊಳ್ಳುತ್ತಿದೆ. ಪ್ರಧಾನಿ ಮೋದಿ, ಅಮಿತ್ ಶಾ ಸೇಡು ತೀರಿಸಿ ಕೊಳ್ಳುತ್ತಿದ್ದಾರೆ. ಬರ ಪರಿಹಾರ ನೀಡದೇ ರಾಜ್ಯದ ಜನರಿಗೆ ಅನ್ಯಾಯ ಮಾಡಲಾಗುತ್ತಿದೆ. ಕರ್ನಾಟಕದಿಂದ ಆಯ್ಕೆಯಾದ ವಿತ್ತ ಸಚಿವರು ಕರ್ನಾಕದ ಜನರಿಗೆ ಅನ್ಯಾಯ ಮಾಡಿದ್ದಾರೆ. ಕನ್ನಡಿಗ ಜನರಿಗೆ ಸುಳ್ಳು ಹೇಳಿ ವಂಚಿಸುತ್ತಿದ್ದಾರೆ ಎಂದು ಸುರ್ಜೇವಾಲಾ ಆರೋಪಿಸಿದರು.
ಸ್ಟೀಲ್ ಚೊಂಬು ಹಿಡಿದು ಬಿಜೆಪಿ ನಾಯಕರನ್ನು ಛೇಡಿಸಿದ ಸುರ್ಜೇವಾಲಾ, ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ್ದು ಚೊಂಬು ಮಾತ್ರ. ಬೇರೇನೂ ನೀಡಿಲ್ಲ. ಜನರೂ ಅವರಿಗೆ ಚೊಂಬು ನೀಡಬೇಕಾಗಿದೆ ಎಂದರು.
Mangalore Surjewala slams Modi and BJP for causing injustice to state of Karnataka. AICC general secretary and Karnataka state in-charge Ranadeep Singh Surjewala said, "Prime Minister Narendra Modi and BJP are committing gross injustice to the state and its farmers.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm