ಬ್ರೇಕಿಂಗ್ ನ್ಯೂಸ್
23-04-24 12:48 pm Mangalore Correspondent ಕರಾವಳಿ
ಬಂಟ್ವಾಳ, ಎ.23: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಬಂಟ್ವಾಳ ವಿಧಾನಸಭಾ ವ್ಯಾಪ್ತಿಯ ವಿವಿಧೆಡೆ ಬಿರುಸಿನ ಚುನಾವಣಾ ಪ್ರಚಾರ ನಡೆಸಿದ್ದಾರೆ.
ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಮಾಜಿ ಸಚಿವ ಬಿ. ರಮಾನಾಥ ರೈ ಸೇರಿದಂತೆ ಪ್ರಮುಖರು ಅಲ್ಲಿಪಾದೆ, ನಾವೂರು, ಅಮ್ಟಾಡಿ, ಮೂಲರಪಟ್ಣ, ಕರ್ಪೆ ಶ್ರೀ ರಾಮಾಂಜನೇಯ ಭಜನಾ ಮಂದಿರ, ಸಿದ್ಧಕಟ್ಟೆ, ರಾಯಿ, ಪಂಜಿಕಲ್ಲು, ಕುಕ್ಕಿಪ್ಪಾಡಿ, ಬಸ್ತಿಕೋಡಿ, ಇರ್ವತ್ತೂರು ಪದವು, ಕಾವಲ್ ಕಟ್ಟೆ, ವಗ್ಗ ಮೊದಲಾದ ಪ್ರದೇಶಗಳ ಮತದಾರ, ಕಾರ್ಯಕರ್ತರ ಬಳಿಗೆ ತೆರಳಿ ಮತಯಾಚನೆ ಮಾಡಿದರು.


ಪದ್ಮರಾಜ್ ಮಾತನಾಡಿ, ದ್ವೇಷದ ರಾಜಕಾರಣ ನಾವೆಂದೂ ಮಾಡಿಲ್ಲ. ಅದರ ಅಗತ್ಯವೂ ನಮಗಿಲ್ಲ. ಕಾಂಗ್ರೆಸ್ ಸರಕಾರದ ಸಾಧನೆ ಹಾಗೂ ನಾವು ಅಭಿವೃದ್ಧಿ ದೃಷ್ಟಿಯಿಂದ ಹಾಕಿಕೊಂಡಿರುವ ಯೋಜನೆಗಳನ್ನು ಜನರಿಗೆ ತಿಳಿಸಿ. ಖಂಡಿತವಾಗಿಯೂ ಜಿಲ್ಲೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ. ಸಾಮರಸ್ಯದ ಗತವೈಭವ ಮರಳಿ ಬರಲಿದೆ ಎಂದರು.
ವರದಿಗಳ ಪ್ರಕಾರವೂ ಕಾಂಗ್ರೆಸ್ ಗೆಲುವು ಖಾತ್ರಿಯಾಗಿದೆ. ಹಾಗೆಂದು ನಾವು ಜಾಗೃತರಾಗಿ ಇರಬೇಕಾಗಿದೆ. ಎದುರಾಳಿ ಪಕ್ಷದವರು ಗೆಲುವಿಗಾಗಿ ಅಪಪ್ರಚಾರದ ಹಾದಿ ಹಿಡಿಯುತ್ತಿದ್ದಾರೆ. ಮನೆ ಮನೆಗೆ ತೆರಳಿ ಗ್ರಂಥ, ತಾಳಿ ಹಿಡಿದು ಆಣೆ ಪ್ರಮಾಣ ಮಾಡಿಸುತ್ತಿದ್ದಾರೆ ಎಂಬ ಮಾಹಿತಿ ಇದೆ. ಆದ್ದರಿಂದ ತಾಳ್ಮೆಯಿಂದ ಸವಾಲನ್ನು ಎದುರಿಸಲು ಸಿದ್ಧರಾಗೋಣ. ಮುಂದಿನ ಎರಡು, ಮೂರು ದಿನ ಎಚ್ಚರಿಕೆಯಿಂದ ಕಾರ್ಯೋನ್ಮುಖರಾಗಬೇಕಾಗಿದೆ ಎಂದರು.
ಮಾಜಿ ಸಚಿವ ಬಿ. ರಮಾನಾಥ ರೈ, ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್, ಸುಧೀಪ್ ಕುಮಾರ್ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಜಿಲ್ಲಾ ಪ್ರಚಾರ ಸಮಿತಿಯ ಪಿಯೂಷ್ ರೋಡ್ರಿಗಸ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಲವೀನಾ ಮೋರಸ್, ಪಾಣೆಮಂಗಳೂರು ವಲಯ ಅಧ್ಯಕ್ಷೆ ಜಯಂತಿ ಪೂಜಾರಿ, ಸುದರ್ಶನ್ ಜೈನ್, ಬಂಟ್ವಾಳ ಬ್ಲಾಕ್ ಪ್ರಚಾರ ಸಮಿತಿಯ ಜಗದೀಶ್ ಕೊಯಿಲ, ಮಾಯಿಲಪ್ಪ ಸಾಲ್ಯಾನ್, ಕೈಲಾರ್ ಇಬ್ರಾಹಿಂ, ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಜೋರಾ, ಇಬ್ರಾಹಿಂ ನವಾಜ್, ಮಧುಸೂಧನ್ ಶೆಣೈ, ಸಂಜೀವ ಗೌಡ, ಚೆನ್ನಪ್ಪ ಸಾಲ್ಯಾನ್, ಅಬ್ದುಲ್ ರಹಿಮಾನ್, ಪರಮೇಶ್ವರ್ ನಾಯಕ್, ಜಯಂತ್, ಮಲ್ಲಿಕಾ ವಿ. ಪೂಜಾರಿ, ಸಂಜೀವ ಪೂಜಾರಿ, ನಾವೂರು ವಲಯ ಅಧ್ಯಕ್ಷ ವಿಜಯ, ಉಮೇಶ್ ಕುಲಾಲ್, ಸುರೇಶ್ ಕುಲಾಲ್, ಅಶ್ವನಿ ಕುಮಾರ್, ಕರ್ಪೆ ಶ್ರೀ ರಾಮಾಂಜನೇಯ ಭಜನಾ ಮಂದಿರದ ಅಧ್ಯಕ್ಷ ರಮೇಶ್, ಉಸ್ತುವಾರಿ ಶಶಿಧರ್ ಪ್ರಭು, ಉಪಾಧ್ಯಕ್ಷ ರಮೇಶ್, ದಯಾನಂದ ಗೌಡ, ಪ್ರಕಾಶ್ ಜೈನ್, ವಿಕ್ಟರ್, ದಿನೇಶ್ ಶೆಟ್ಟಿ, ಮೋಹನ್ ಶೆಟ್ಟಿ, ಕೃಷ್ಣಪ್ಪ ಕುಲಾಲ್, ವಿಶ್ವನಾಥ ಶೆಟ್ಟಿ, ದೇವಪ್ಪ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.
Congress candidate Padmaraj campaigns at Bantwal in Mangalore. Congress Lok Sabha candidate for Dakshina Kannada constituency visited various places in Bantwal on Tuesday.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm