ಬ್ರೇಕಿಂಗ್ ನ್ಯೂಸ್
24-04-24 06:24 pm Mangalore Correspondent ಕರಾವಳಿ
ಮಂಗಳೂರು, ಎ.24: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರ ಬಗ್ಗೆ ಬಂಟರ ಬ್ರಿಗೇಡ್ ಹೆಸರಲ್ಲಿ ಕರಪತ್ರ ಮುದ್ರಿಸಿ, ಆಕ್ಷೇಪಾರ್ಹ ವಿಚಾರಗಳನ್ನು ಬರೆದು ಜಾತಿ, ಜಾತಿಗಳ ನಡುವೆ ದ್ವೇಷ ಹಬ್ಬಿಸುವ ಯತ್ನ ನಡೆದಿದ್ದು ಬಿಜೆಪಿ ಕಾನೂನು ಪ್ರಕೋಷ್ಠದಿಂದ ಜಿಲ್ಲಾ ಚುನಾವಣಾಧಿಕಾರಿಗೆ ದೂರು ಸಲ್ಲಿಸಲಾಗಿದೆ.
ಕರಪತ್ರದಲ್ಲಿ ಬ್ರಿಜೇಶ್ ಚೌಟರ ಭಾವಚಿತ್ರ ಬಳಸಿ ಆಕ್ಷೇಪಾರ್ಹ ವಿಚಾರಗಳನ್ನು ಮುದ್ರಿಸಿ, ಮತದಾರರಲ್ಲಿ ದ್ವೇಷ ಹಬ್ಬಿಸುವ ಯತ್ನ ನಡೆದಿದೆ. ಎದುರಾಳಿ ಕಾಂಗ್ರೆಸ್ ಅಭ್ಯರ್ಥಿಯೇ ಈ ಕೃತ್ಯವನ್ನು ಮಾಡಿದ್ದಾರೆ. ಈ ರೀತಿಯ ಕರಪತ್ರವನ್ನು ಮುದ್ರಿಸಿ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ. ಜಾತಿಗಳ ನಡುವೆ ದ್ವೇಷ ಬಿತ್ತಿ ಅದರ ದುರ್ಲಾಭವನ್ನು ಕಾಂಗ್ರೆಸ್ ಅಭ್ಯರ್ಥಿ ಪಡೆಯುತ್ತಿದ್ದಾರೆ. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಕಾನೂನು ಪ್ರಕೋಷ್ಠದ ಜಿಲ್ಲಾ ಸಹ ಸಂಚಾಲಕ ದೇವಿಪ್ರಸಾದ್ ಸಾಮಾನಿ ಒತ್ತಾಯಿಸಿದ್ದಾರೆ.
ಬಂಟ ಬ್ರಿಗೇಡ್ ಎನ್ನುವ ಯಾವುದೇ ಸಂಸ್ಥೆ ಅಸ್ತಿತ್ವದಲ್ಲಿಲ್ಲ. ಅಂತಹ ಸಂಸ್ಥೆ ಹೆಸರಲ್ಲಿ ಕರಾವಳಿ ಭಾಗದಲ್ಲಿ ಯಾವುದೇ ಕಾರ್ಯ ಚಟುವಟಿಕೆ ನಡೆಸುವುದು ಕಂಡುಬಂದಿಲ್ಲ. ಚುನಾವಣೆಗೆ ಎರಡು ದಿನ ಇರುವಾಗ ಮತದಾರರಿಗೆ ಪ್ರಭಾವ ಬೀರುವ ಉದ್ದೇಶದಿಂದ ಈ ರೀತಿಯ ಕೃತ್ಯ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಇಂತಹ ವಿಚಾರಗಳನ್ನು ಪಸರಿಸಿ ಚುನಾವಣೆಯಲ್ಲಿ ಲಾಭ ಮಾಡಲು ಯತ್ನಿಸುತ್ತಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಚುನಾವಣಾ ಅಧಿಕಾರಿಯಲ್ಲಿ ಒತ್ತಾಯಿಸಿದ್ದಾರೆ.
Brijesh Chowta, Banta brigade letterhead in Mangalore creates rivalry among communities, a case has been filed in connection to this matter.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm