ಬ್ರೇಕಿಂಗ್ ನ್ಯೂಸ್
25-04-24 12:59 pm Mangalore Correspondent ಕರಾವಳಿ
ಮಂಗಳೂರು, ಎ.25: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ಸರಕಾರ ಮೀಸಲು ನೀಡುವ ಸಲುವಾಗಿ ಇಡೀ ಮುಸ್ಲಿಂ ಸಮುದಾಯವನ್ನು ಹಿಂದುಳಿದ ಜಾತಿಗಳ ಪಟ್ಟಿಗೆ ಸೇರಿಸಿರುವುದು ಬಹಳ ಆತಂಕಕಾರಿಯಾಗಿದೆ. ಮುಸ್ಲಿಮರ ವೋಟಿಗೋಸ್ಕರ ಹಿಂದುಳಿದ ವರ್ಗಕ್ಕೆ ಅವರನ್ನು ಸೇರಿಸಿ ಬಹುಸಂಖ್ಯಾತ ಹಿಂದೂಗಳ ಹಕ್ಕನ್ನು ಕಸಿದುಕೊಳ್ಳುವ ಸಾಧ್ಯತೆ ಇದೆ. ಶೈಕ್ಷಣಿಕ ಸಂಸ್ಥೆಗಳಲ್ಲಿ, ಸರಕಾರಿ ಕೆಲಸ ನೇಮಕಾತಿ, ಪೊಲೀಸ್ ಇಲಾಖೆ, ಇತರೆ ಸರಕಾರಿ ಸ್ವಾಮ್ಯಗಳ ಉದ್ಯೋಗ ನೇಮಕಾತಿಯಲ್ಲಿ ಮುಸ್ಲಿಮರಿಗೆ ಮುಕ್ತ ಅವಕಾಶ ಕೊಟ್ಟಂತಾಗುತ್ತದೆ. ಇದರಿಂದ ಹಿಂದುಳಿದ ವರ್ಗದ ಹಿಂದುಗಳಿಗೆ ಘೋರ ಅನ್ಯಾಯವಾಗಲಿದೆ ಎಂದು ವಿಶ್ವ ಹಿಂದು ಪರಿಷತ್ ವಿಭಾಗ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
ದೇಶದ ಸಂಪತ್ತು ಮುಸ್ಲಿಮರಿಗೂ ಪಾಲು; ಹಿಂದುಗಳಿಗೆ ಬಗೆದ ದ್ರೋಹ
ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಬಂದರೆ ದೇಶದ ಎಲ್ಲ ವರ್ಗದವರ ಸಂಪತ್ತನ್ನು ಸರ್ವೇ ಮಾಡಿ ಹಂಚಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ಬಹಳ ಗಂಭೀರವಾಗಿದೆ. ಶೇಕಡಾ 80 ಇರುವ ಹಿಂದೂಗಳ ಆಸ್ತಿ ಪಾಸ್ತಿ , ಸಂಪತ್ತು ಬಲವಂತವಾಗಿ ಕಸಿದುಕೊಂಡು ಮುಸ್ಲಿಮರಿಗೆ ನೀಡುವ ಉದ್ದೇಶ ಇದರ ಹಿಂದಿದ್ದು ಹಿಂದೂಗಳು ಎಚ್ಚೆತ್ತುಕೊಳ್ಳಬೇಕಾಗಿದೆ.
ಹಿಂದುಗಳನ್ನು 2ನೇ ದರ್ಜೆಯ ನಾಗರಿಕರನ್ನಾಗಿ ಮಾಡುವ ಉದ್ದೇಶ ಇದಾಗಿದ್ದು ಕಾಂಗ್ರೆಸ್ ನ ಈ ವೋಟ್ ಬ್ಯಾಂಕ್ ರಾಜಕೀಯವನ್ನು ಹಿಂದೂಗಳು ತಿರಸ್ಕರಿಸಬೇಕಾಗಿದೆ.
ಚುನಾವಣೆಯಲ್ಲಿ ಯೋಚಿಸಿ ಮತ ಚಲಾಯಿಸಿ
ಕಾಂಗ್ರೆಸಿನ ಈ ಹಿಂದೂ ವಿರೋಧಿ 'ಮುಸ್ಲಿಮರ ತುಷ್ಟೀಕರಣ ರಾಜಕಾರಣವನ್ನು ಧಿಕ್ಕರಿಸಿ ಹಿಂದೂಗಳ ಹಿತ ಬಯಸುವ , ದೇಶದ ಭದ್ರತೆ, ಅಭಿವೃದ್ಧಿಗಾಗಿ ಕೆಲಸ ಮಾಡುವ ಸರಕಾರ ಬರಬೇಕಾಗಿದೆ. ಚುನಾವಣೆಯಂದು ಹಿಂದೂಗಳು 100 % ಮತದಾನ ಮಾಡಬೇಕಾಗಿದೆ.
ಹಾಗಾಗಿ ಎಲ್ಲ ಹಿಂದೂಗಳು ಯಾರಿಗೆ ಮತ ಹಾಕಬೇಕು ಎಂಬುದನ್ನು ಯೋಚಿಸಿ ತಪ್ಪದೆ ಕಡ್ಡಾಯವಾಗಿ ಮತ ಚಲಾಯಿಸಬೇಕಾಗಿ ತಮ್ಮಲ್ಲಿ ವಿಶ್ವ ಹಿಂದೂ ಪರಿಷದ್ ವಿನಂತಿಸುತ್ತದೆ ಎಂದು ಶರಣ್ ಪಂಪ್ವೆಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Inclusion of Muslims in the backward class is a Wake up call for Hindus, think before you vote says Vishwa Hindu Parishad in Mangalore
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm