Blood donation, KMC manipal: ಲೋಕಸಭಾ ಚುನಾವಣೆಯ ಎಫೆಕ್ಟ್ ; ಆಸ್ಪತ್ರೆಯಲ್ಲಿ ತೀವ್ರ ರಕ್ತದ ಕೊರತೆ, 'ರಕ್ತದಾನ ಮಾಡಿ ಜೀವ ಉಳಿಸಿ' , ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಮನವಿ 

25-04-24 08:45 pm       Udupi Correspondent   ಕರಾವಳಿ

ಸದ್ಯ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಯಲ್ಲಿರುವುದರಿಂದ ಹೆಚ್ಚಿನ ಯಾವುದೇ ರಕ್ತ ದಾನ ಶಿಬಿರ ನಡೆಯುತ್ತಿಲ್ಲದ ಕಾರಣ ಕಸ್ತೂರ್ಬಾ ಆಸ್ಪತ್ರೆಯಲ್ಲಿ ರಕ್ತದ ತೀವ್ರ ಕೊರತೆ ಉಂಟಾಗಿದೆ ಎಂದು ಪ್ರಕಟಣೆ ಯೊಂದರಲ್ಲಿ ತಿಳಿಸಿರುವ ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, 'ರಕ್ತದಾನ ಮಾಡಿ ಜೀವ ಉಳಿಸಿ' ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಉಡುಪಿ, ಏ.25: ಸದ್ಯ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಯಲ್ಲಿರುವುದರಿಂದ ಹೆಚ್ಚಿನ ಯಾವುದೇ ರಕ್ತ ದಾನ ಶಿಬಿರ ನಡೆಯುತ್ತಿಲ್ಲದ ಕಾರಣ ಕಸ್ತೂರ್ಬಾ ಆಸ್ಪತ್ರೆಯಲ್ಲಿ ರಕ್ತದ ತೀವ್ರ ಕೊರತೆ ಉಂಟಾಗಿದೆ ಎಂದು ಪ್ರಕಟಣೆ ಯೊಂದರಲ್ಲಿ ತಿಳಿಸಿರುವ ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, 'ರಕ್ತದಾನ ಮಾಡಿ ಜೀವ ಉಳಿಸಿ' ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ರಕ್ತದ ಕೊರತೆಯಿಂದ ಕೆಲವೊಂದು ಕಾಯಿಲೆಗಳಿಗೆ ಮತ್ತು ಅಪಘಾತ ಸಂದರ್ಭದಲ್ಲಿ ತುರ್ತು ಶಸ್ತ್ರಚಿಕಿತ್ಸೆಗಳನ್ನು ಮುಂದೂ ಡುವ ಪ್ರಮೇಯ ತಲೆದೋರಿದೆ. ಆದ್ದರಿಂದ ಈ ಬಿಕ್ಕಟ್ಟನ್ನು ನಿವಾರಿಸಲು ಮತ್ತು ಜೀವ ಉಳಿಸಲು ಸಾರ್ವಜನಿಕರು ರಕ್ತದಾನ ಮಾಡುವಂತೆ ಮನವಿ ಮಾಡಿದ್ದಾರೆ. 

ನಿಮ್ಮ ಕೊಡುಗೆ ಗಮನಾರ್ಹ ವ್ಯತ್ಯಾಸವನ್ನು ಮಾಡಬಹುದು. ದಯವಿಟ್ಟು ರಕ್ತದಾನ ಮಾಡಿ ಮತ್ತು ಈ ತುರ್ತು ಅಗತ್ಯದ ಸಮಯದಲ್ಲಿ ನಮ್ಮ ಸಮುದಾಯಕ್ಕೆ ಸೇವೆ ಸಲ್ಲಿಸಲು ನಮಗೆ ಸಹಾಯ ಮಾಡಿ. ರಕ್ತ ನಿಧಿಯಲ್ಲಿ ಬೆಳಗ್ಗೆ 7ಗಂಟೆಯಿಂದ ರಾತ್ರಿ 7ಗಂಟೆಯವರೆಗೆ ರಕ್ತ ದಾನ ಮಾಡಬಹುದು. 

ಹೆಚ್ಚಿನ ಮಾಹಿತಿಗೆ ರಕ್ತನಿಧಿ ದೂರವಾಣಿ ಸಂಖ್ಯೆ: 0820-2923191 ಸಂಪರ್ಕಿಸುವಂತೆ' ಪ್ರಕಟಣೆಯಲ್ಲಿ ಡಾ.ಅವಿನಾಶ್ ಶೆಟ್ಟಿ ಮನವಿ ಮಾಡಿದ್ದಾರೆ.

Manipal Kmc hospital requests public to donate blood due to scarcity of blood.