ಬ್ರೇಕಿಂಗ್ ನ್ಯೂಸ್
25-04-24 10:01 pm Mangalore Correspondent ಕರಾವಳಿ
ಮಂಗಳೂರು, ಎ.25: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 1876 ಮತಗಟ್ಟೆಗಳಿದ್ದು, ಈ ಪೈಕಿ 18 ಮತಗಟ್ಟೆ ನಕ್ಸಲ್ ಪೀಡಿತ ಪ್ರದೇಶ ವ್ಯಾಪ್ತಿಯಲ್ಲಿದೆ. ಈ ಭಾಗದಲ್ಲಿ ನಕ್ಸಲ್ ನಿಗ್ರಹ ದಳದಿಂದ ಕೂಂಬಿಂಗ್ ಕಾರ್ಯಾಚರಣೆ ಚುರುಕು ಮಾಡಲಾಗಿದೆ.
ಇತ್ತೀಚೆಗೆ ಒಂದು ತಿಂಗಳ ಅಂತರದಲ್ಲಿ ನಾಲ್ಕು ಬಾರಿ ನಕ್ಸಲರು ಕಾಣಿಸಿಕೊಂಡಿದ್ದು ಭಾರೀ ಆತಂಕಕ್ಕೆ ಕಾರಣವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಆಸುಪಾಸು ಮತ್ತು ಕೊಡಗಿನ ಗಡಿಭಾಗದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು. ಆಬಳಿಕ ಎಎನ್ಎಫ್ ಕೂಂಬಿಂಗ್ ಆಗಿದ್ದರೂ, ನಕ್ಸಲರ ಪತ್ತೆ ಆಗಿರಲಿಲ್ಲ. ಇತ್ತೀಚೆಗೆ ಸೇನೆಯಲ್ಲಿ ಕರ್ತವ್ಯದಲ್ಲಿರುವ ಯುವಕನ ಮನೆಗೆ ಬಂದಿದ್ದ ನಕ್ಸಲರು ಅಲ್ಲಿ ಊಟ ಮಾಡಿ ತೆರಳಿದ್ದು ಚರ್ಚೆಗೆ ಕಾರಣವಾಗಿತ್ತು.
ನಕ್ಸಲರ ಚಲನವಲನ ಇರುವುದು ಖಚಿತವಾಗಿದ್ದರಿಂದ ಚುನಾವಣೆಗೆ ತೊಂದರೆ ಆಗಬಾರದು ಎಂದು ಪೊಲೀಸರು ಮತ್ತು ನಕ್ಸಲ್ ನಿಗ್ರಹ ಪಡೆಯವರು ಮುಂಜಾಗ್ರತೆ ವಹಿಸಿದ್ದಾರೆ. ಹೆಚ್ಚುವರಿ ಪೊಲೀಸರು ಮತ್ತು ಸಿಆರ್ ಪಿಎಫ್ ಪಡೆಯನ್ನು ಈ ಭಾಗದಲ್ಲಿ ನಿಯೋಜನೆ ಮಾಡಲಾಗಿದೆ. ಇತ್ತೀಚೆಗೆ ಕೇರಳದ ವಯನಾಡಿನಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು ಎನ್ನುವ ಮಾಹಿತಿ ಆಧರಿಸಿ ಅಲ್ಲಿಯೂ ಕೂಂಬಿಂಗ್ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ. ಅಲ್ಲಿನ ಕಾಡಂಚಿನ ಗ್ರಾಮಗಳಲ್ಲಿ ಚುನಾವಣೆ ಬಹಿಷ್ಕರಿಸುವಂತೆ ಕರಪತ್ರ ಹಂಚಿದ್ದರಿಂದ ಪೊಲೀಸರು ಅಲರ್ಟ್ ಆಗಿದ್ದಾರೆ.
ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 172 ಮತಗಟ್ಟೆಗಳನ್ನು ಸೂಕ್ಷ್ಮ ಎಂದು ಪರಿಗಣಿಸಲಾಗಿದ್ದು, ಅಲ್ಲಿಯೂ ಹೆಚ್ಚುಪರಿ ಪಡೆಗಳನ್ನು ನಿಯೋಜನೆ ಮಾಡಲಾಗಿದೆ. ಇದಲ್ಲದೆ, 900 ಮತಗಟ್ಟೆಗಳಲ್ಲಿ ಸಿಸಿಟಿವಿ ಅಳವಡಿಸಿದ್ದು, ನೇರ ವೆಬ್ ಕಾಸ್ಟಿಂಗ್ ನಿಗಾ ವಹಿಸಲು ವ್ಯವಸ್ಥೆ ಮಾಡಲಾಗಿದೆ. ಚುನಾವಣೆ ಕರ್ತವ್ಯಕ್ಕಾಗಿ ಸಿಆರ್ ಪಿಎಫ್ ಮತ್ತು ಸಿಎಪಿಎಫ್ ಪಡೆಯನ್ನು ಜಿಲ್ಲೆಗೆ ಕರೆಸಲಾಗಿದೆ.
There are a total of 1876 polling booths in the Dakshina Kannada Lok Sabha constituency, out of which 18 polling booths are in Naxal affected areas. Coombing operations have been intensified in this area by the anti-Naxal forces.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 09:48 pm
Mangaluru Correspondent
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm