ಬ್ರೇಕಿಂಗ್ ನ್ಯೂಸ್
26-04-24 08:09 am Mangalore Correspondent ಕರಾವಳಿ
ಮಂಗಳೂರು, ಎ.26: ಲೋಕಸಭೆ ಚುನಾವಣೆಗೆ ಮಂಗಳೂರಿನಲ್ಲಿ ಮತದಾರರು ಬೆಳಗ್ಗಿನಿಂದಲೇ ಉತ್ಸಾಹದಿಂದಲೇ ಪಾಲ್ಗೊಂಡಿದ್ದಾರೆ. ನಗರದ ಕಪಿತಾನಿಯೋ ಸ್ಕೂಲ್ ಮತಗಟ್ಟೆಯಲ್ಲಿ ಬೆಳಗ್ಗೆ ಏಳು ಗಂಟೆಗೆ ಮತದಾನ ಶುರುವಾಗುವ ಮೊದಲೇ ಭಾರೀ ರಶ್ ಇತ್ತು.
ಸರತಿ ಸಾಲಿನಲ್ಲಿ ಮತದಾರರು ನಿಂತಿದ್ದು ಮತಗಟ್ಟೆ ಒಳ ಹೋಗಲು ಕಾಯುತ್ತಿದ್ದಾರೆ. ಬಿಸಿಲೇರುವ ಮೊದಲೇ ಮತ ಚಲಾಯಿಸಿ ಬರಬೇಕು ಎನ್ನುವ ಧಾವಂತದಲ್ಲಿ ಮಹಿಳೆಯರು, ಹಿರಿಯ ನಾಗರಿಕರು ಮತಗಟ್ಟೆಗೆ ಆಗಮಿಸಿದ್ದಾರೆ.
ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ಬಂದಿದ್ದು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಮತಗಟ್ಟೆಯತ್ತ ಬರುವಾಗಲೇ ಹಿರಿಯ ನಾಗರಿಕರೊಬ್ಬರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಭಾರೀ ಜನ ಇರುವುದರಿಂದ ಪದ್ಮರಾಜ್ ದಂಪತಿ ಎಪಿಕ್ ಕಾರ್ಡ್ ಹಿಡಿದು ಮತ ಸರತಿ ಸಾಲಿನಲ್ಲಿ ನಿಂತಿದ್ದಾರೆ.













ಮತಗಟ್ಟೆಯ ಹೊರಭಾಗದಲ್ಲಿ 30 ಮೀಟರ್ ಉದ್ದಕ್ಕೂ ಜನರು ಸರತಿಯಲ್ಲಿ ನಿಂತಿದ್ದಾರೆ. ಬಿಸಿಲು ಏರಿದರೆ ಶಾಲೆಯ ಅಂಗಳದಲ್ಲಿ ಕ್ಯೂ ನಿಲ್ಲುವುದು ಕಷ್ಟವಾಗಬಹುದು. ಬೆಳಗ್ಗೆ ಬೇಗ ಬಂದು ಮತ ಚಲಾಯಿಸಲು ಜನರು ಕಾತರರಾಗಿದ್ದಾರೆ. ಮಂಗಳೂರು ನಗರದ ಎಲ್ಲ ಕಡೆಯೂ ಜನರು ಇದೇ ರೀತಿ ಮತದಾನಕ್ಕೆ ಉತ್ಸಾಹ ತೋರಿದ್ದಾರೆ. ಹೊಸ ಮತದಾರರು ಕೂಡ ಬೇಗನೇ ಬಂದು ಮತ ಹಾಕುತ್ತಿದ್ದಾರೆ.
ಹೊಸ ಮತದಾರರು ಮೊದಲ ಬಾರಿಗೆ ಓಟ್ ಹಾಕಿದ ಖುಷಿಯಲ್ಲಿದ್ದಾರೆ. ದೇಶಕ್ಕಾಗಿ ಓಟ್ ಹಾಕಿದ್ದೇನೆಂಬ ಧನ್ಯತೆಯ ಭಾವನೆ ಇದೆ. ಓಟ್ ಹಾಕುವಾಗ ಹೆಮ್ಮೆಯ ಭಾವನೆ ಬಂತು. ದೇಶದ ಭವಿಷ್ಯ ನಿರ್ಣಯದಲ್ಲಿ ತನ್ನದೂ ಪಾತ್ರ ಇದೆಯೆಂಬ ಭಾವನೆ ಇದೆ ಎಂದು ಮೊದಲ ಬಾರಿಗೆ ಓಟ್ ಹಾಕಿದ ವಿದ್ಯಾರ್ಥಿನಿಯೊಬ್ಬರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು.
Mangalore loksabha elections 2024, people gather in large number to cast vote early morning at Capitanio High School near Pumpwell. Congress candidate Padmaraj and his family came to cast their votes.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm