ಬ್ರೇಕಿಂಗ್ ನ್ಯೂಸ್
26-04-24 11:09 am Mangalore Correspondent ಕರಾವಳಿ
ಉಳ್ಳಾಲ, ಎ.26: ವಿಧಾನಸಭೆ ಸಭಾಧ್ಯಕ್ಷ ಯು.ಟಿ .ಖಾದರ್ ಅವರು ಬೋಳಿಯಾರು ಗ್ರಾಮದ ಜಾರದಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಟುಂಬ ಸಮೇತರಾಗಿ ಮತ ಚಲಾಯಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಕುಂಪಲ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿದರು.
ಯು.ಟಿ ಖಾದರ್ ಅವರು ಪತ್ನಿ ಲೆಮೀಝ್ ಖಾದರ್, ಪುತ್ರಿ ಹವ್ವಾ ನಸೀಮ, ಆಪ್ತ ಸಹಾಯಕರಾದ ಮಹಮ್ಮದ್ ಲಿಬ್ಝೆತ್ ಜೊತೆ ಜಾರದಗುಡ್ಡೆ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು. ಈ ವೇಳೆ ಮಾತನಾಡಿದ ಖಾದರ್ ಅವರು ಜೀವನದಲ್ಲಿ ಸಮಾನತೆ ಕಾಣುವುದು ಮತದಾನವೊಂದರಲ್ಲಿ ಮಾತ್ರ. ಎಷ್ಟೇ ಕಡು ಬಡವನಾದರೂ, ಆಗರ್ಭ ಶ್ರೀಮಂತನಾದರೂ ಎಲ್ಲರಿಗೂ ಒಂದೇ ಮತದಾನದ ಹಕ್ಕು ಮಾತ್ರ ಇರುತ್ತದೆ. ಈ ಸಮಾನತೆಯ ಸಾಂವಿಧಾನಿಕ ಹಕ್ಕನ್ನ ಚಲಾಯಿಸೋದು ನಮ್ಮೆಲ್ಲರ ಕರ್ತವ್ಯ. ದೇಶದ ಹಿತಕ್ಕಾಗಿ ಎಲ್ಲರೂ ಉತ್ಸಾಹದಿಂದ ಮತ ಚಲಾಯಿಸುವಂತೆ ಕರೆ ನೀಡಿದರು.



ಕುಂಪಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರು ಪಕ್ಷದ ಕಾರ್ಯಕರ್ತರ ಜೊತೆ ತೆರಳಿ ಮತದಾನ ಮಾಡಿದರು. ಈ ವೇಳೆ ಮಾತನಾಡಿದ ಅವರು ಸಧೃಢ, ವಿಕಸಿತ ಭಾರತ ನಿರ್ಮಾಣಕ್ಕೆ ಮೋದಿಯೇ ಮಗದೊಮ್ಮೆ ಪ್ರದಾನಿಯಾಗಿ ಆಯ್ಕೆಯಾಗಲಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಅತ್ಯಧಿಕ ಮತಗಳ ಅಂತರಗಳಲ್ಲಿ ಗೆಲ್ಲಲಿದ್ದಾರೆ ಎಂದರು.



ಮಂಗಳೂರು ವಿಧಾನಸಭಾ ಕ್ಷೇತ್ರದ ವಿವಿಧ ಮತಗಟ್ಟೆಗಳಲ್ಲಿ ಬಿಜೆಪಿಯ "ನಾರಿ ಶಕ್ತಿ ಬೂತ್ ಶಕ್ತಿ ಅಭಿಯಾನ" ಅಂಗವಾಗಿ ಶುಕ್ರವಾರ ಬೆಳ್ಳಂಬೆಳಗ್ಗೆ 7 ಗಂಟೆಗೆ ಸರದಿ ಸಾಲಿನಲ್ಲಿ ನಿಂತು ಪ್ರಥಮವಾಗಿ ನವ, ನಾರಿಯರು ಉತ್ಸಾಹದಿಂದ ಮತ ಚಲಾಯಿಸಿದರು. ಉಳ್ಳಾಲ ತಾಲೂಕಿನ ಕಲ್ಲಾಪು ಪಟ್ಲ ಉರ್ದು ಶಾಲೆ, ಕುಂಪಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಿಲಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ಅನೇಕ ಮತಗಟ್ಟೆಗಳಲ್ಲಿ ನವ ನಾರಿಯರು ಪ್ರಥಮವಾಗಿ ಮತ ಚಲಾಯಿಸಿದರು.
Speaker UT Khader cast vote at boliyar at Ullal in Mangalore with family, Khader along with his wife and his personal assistant Lifzi casted their vote.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm