ಬ್ರೇಕಿಂಗ್ ನ್ಯೂಸ್
26-04-24 01:47 pm Mangalore Correspondent ಕರಾವಳಿ
ಮಂಗಳೂರು, ಎ.26: ಪ್ರಧಾನಿ ನರೇಂದ್ರ ಮೋದಿ ಪಾಲಿಗೆ ನಾರಿಶಕ್ತಿಯೇ ಪರಮೋಚ್ಛ. ನವರಾತ್ರಿ ದಿನಗಳಲ್ಲಿ ಮೋದಿಯವರು ನವದುರ್ಗೆಯರನ್ನು ಆರಾಧಿಸಿ ಒಂಬತ್ತು ದಿನಗಳಲ್ಲಿ ಅನ್ನಾಹಾರ ತ್ಯಜಿಸಿ ಕೇವಲ ನೀರು ಕುಡಿದು ನವರಾತ್ರಿ ಆಚರಿಸುವುದನ್ನು ವಾಡಿಕೆ ಮಾಡಿಕೊಂಡಿದ್ದಾರೆ. ಪ್ರಧಾನಿ ಮೋದಿ ನಾರಿಶಕ್ತಿಗೆ ನೀಡುವ ಮನ್ನಣೆಯನ್ನು ಗುರುತಿಸಿ ಈ ಬಾರಿ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ, ಮೋದಿ ಪರವಾಗಿ ನಾರಿಶಕ್ತಿ ಒಗ್ಗೂಡುವಂತೆ ಕರೆ ನೀಡಿದ್ದರು. ಇದಕ್ಕೆ ಮಂಗಳೂರಿನಲ್ಲಿ ಒಳ್ಳೆಯ ಸ್ಪಂದನೆ ಸಿಕ್ಕಿದೆ.
ಎಲ್ಲ ಮತಗಟ್ಟೆಗಳಲ್ಲೂ ನವದುರ್ಗೆಯರಾಗಿ ಮಹಿಳೆಯರು ಮೊದಲು ಬಂದು ಮತ ಚಲಾಯಿಸಿದ್ದಾರೆ. ಇದರ ಫೋಟೋಗಳನ್ನು ಜಾಲತಾಣದಲ್ಲಿ ಶೇರ್ ಮಾಡಿದ್ದು, ಬಿಜೆಪಿ ಅಭ್ಯರ್ಥಿ ನೀಡಿರುವ ಕರೆಗೆ ಅಭೂತಪೂರ್ವ ಸ್ಪಂದನೆ ಸಿಕ್ಕಿರುವುದು ಕಂಡುಬಂದಿದೆ. ನವದುರ್ಗೆಯರ ರೂಪದಲ್ಲಿ ಮತಗಟ್ಟೆಗೆ ಮೊದಲು ಬಂದು ಮತ ಚಲಾಯಿಸಬೇಕು, ಆಮೂಲಕ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವಂತೆ ಆಶೀರ್ವಾದ ಮಾಡಬೇಕು ಎಂದು ಬ್ರಿಜೇಶ್ ಚೌಟ ಕರೆ ನೀಡಿದ್ದರು.
















ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಯಲ್ಲಿ ಒಂಬತ್ತು ಮಂದಿ ಮಹಿಳೆಯರು ಬೆಳಗ್ಗೆ 6.30ರ ವೇಳೆಗೇ ಬಂದು ಕುಳಿತುಕೊಂಡಿದ್ದರು. ಮತಗಟ್ಟೆ ತೆರೆಯುವ ಮೊದಲೇ ಸೀರೆಯುಟ್ಟ ನಾರಿಯರು ಹೊರಗಿನ ಅಂಗಣದಲ್ಲಿ ಕುಳಿತು ವಿಜಯದ ನಗೆ ಬೀರಿದ್ದಾರೆ. ಆಮೂಲಕ ನಾರಿಶಕ್ತಿಯ ಸಾಥ್ ನರೇಂದ್ರ ಮೋದಿ ಪರವಾಗಿದೆ ಎನ್ನುವ ಸಂದೇಶವನ್ನು ಮಹಿಳೆಯರು ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಕ್ಯಾ.ಬ್ರಿಜೇಶ್ ಚೌಟ, ಜಿಲ್ಲೆಯಾದ್ಯಂತ ನಾರಿಶಕ್ತಿಯರಿಂದ ಉತ್ತಮ ಸ್ಪಂದನೆ ಸಿಕ್ಕಿದ್ದು, ಮೊದಲ ಬಾರಿಗೆ ಮತಗಟ್ಟೆಗೆ ಬಂದು ಮೋದಿಯವರಿಗೆ ಆಶೀರ್ವದಿಸಿದ್ದಾರೆ. ಅವರಿಗೆಲ್ಲ ಆಭಾರಿಯಾಗಿದ್ದೇನೆ ಎಂದು ಹೇಳಿದ್ದಾರೆ.
ಸಾಮಾನ್ಯವಾಗಿ ಮಹಿಳೆಯರು ಬೆಳಗ್ಗೆ ಎಂದಿನ ತಮ್ಮ ಕೆಲಸ ಮುಗಿಸಿ ಮತಗಟ್ಟೆಗೆ ತೆರಳುವುದು ರೂಢಿ. ಆದರೆ, ಬ್ರಿಜೇಶ್ ಚೌಟರು ನವದುರ್ಗೆಯರ ರೂಪದಲ್ಲಿ ಬನ್ನಿ ಎನ್ನುವ ಕೋರಿಕೆ ಇಟ್ಟಿದ್ದನ್ನು ಮಹಿಳೆಯರು ಪುರಸ್ಕರಿಸಿದ್ದಾರೆ. ಆಮೂಲಕ ಮತದಾನ ಕೇಂದ್ರಗಳಲ್ಲಿ ಮಹಿಳೆಯರು ಬೆಳಗ್ಗೆಯೇ ಹೊಸ ಸಂಚಲನ ಮೂಡಿಸಿದ್ದಾರೆ.
For Prime Minister Narendra Modi, Nari Shakti is supreme. During Navratri, Modi worships Goddess Navadurga, gives up food for nine days and drinks only water to celebrate Navratri. This time, BJP candidate K Brijesh Chowta had called for nari shakti to unite in favour of Modi, recognising the recognition given to him by Prime Minister Narendra Modi. It has received a good response in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm