ಬ್ರೇಕಿಂಗ್ ನ್ಯೂಸ್
02-12-20 02:29 pm Mangalore Correspondent ಕರಾವಳಿ
ಮಂಗಳೂರು, ಡಿ.2 : ಬೋಟ್ ದುರಂತದಲ್ಲಿ ನಾಪತ್ತೆಯಾಗಿದ್ದ ಎಲ್ಲ ಆರು ಮಂದಿಯ ಮೃತದೇಹಗಳನ್ನು ಸಮುದ್ರದಿಂದ ಮೇಲೆತ್ತಲಾಗಿದೆ. ಬೆಳಗ್ಗೆ ಚಿಂತನ್ ಮತ್ತು ಅನ್ಸಾರ್ ಎಂಬ ಇಬ್ಬರ ಶವ ಪತ್ತೆಯಾಗಿತ್ತು. ಮಧ್ಯಾಹ್ನ ಸುಮಾರಿಗೆ ಜಿಯಾವುಲ್ಲಾ ಮತ್ತು ಹಸೈನಾರ್ ಎಂಬಿಬ್ಬರ ಶವವನ್ನು ನೀರಿನಿಂದ ಮೇಲೆತ್ತಲಾಗಿದೆ.
ಮೃತದೇಹಗಳನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಶವಗಳು ಬಾತುಕೊಂಡಿದ್ದು ಮುಖ ಗುರುತು ಹಿಡಿಯಲಾರದಷ್ಟು ಚರ್ಮ ಕಳಚಿ ಹೋಗಿದೆ.

ನಿನ್ನೆ ಸಂಜೆ ಪಾಂಡುರಂಗ ಸುವರ್ಣ ಮತ್ತು ಪ್ರೀತಮ್ ಎಂಬಿಬ್ಬರ ಮೃತದೇಹ ಪತ್ತೆಯಾಗಿತ್ತು. ಕೋಸ್ಟ್ ಗಾರ್ಡ್ ಮತ್ತು ಮೀನುಗಾರಿಕಾ ಇಲಾಖೆಯಿಂದ ಕಾರ್ಯಾಚರಣೆ ನಡೆಸಲಾಗಿತ್ತು. ರಾತ್ರಿ ವೇಳೆ ಕಾರ್ಯಾಚರಣೆ ನಿಲ್ಲಿಸಿ, ಮತ್ತೆ ಇಂದು ಬೆಳಗ್ಗಿನಿಂದ ಹುಡುಕಾಟ ನಡೆದಿತ್ತು. ಮೃತರು ಬೋಳಾರ, ಬೊಕ್ಕಪಟ್ಣ ಆಸುಪಾಸಿನ ನಿವಾಸಿಗಳಾಗಿದ್ದರು.



ಮೀನುಗಾರಿಕಾ ಬಂದರಿನ ಬೆಂಗರೆ ಪ್ರದೇಶದ ನೇರಕ್ಕೆ ಸುಮಾರು 15 ನಾಟಿಕಲ್ ಮೈಲು ದೂರದಲ್ಲಿ ಮಂಗಳವಾರ ನಸುಕಿನಲ್ಲಿ ದಾರುಣ ಘಟನೆ ಸಂಭವಿಸಿತ್ತು. ಬೋಳಾರದ ಪ್ರಶಾಂತ್ ಎಂಬವರ ಮಾಲಕತ್ವದ ‘ಶ್ರೀರಕ್ಷಾ’ ಹೆಸರಿನ ಪರ್ಸಿನ್ ಬೋಟು ಸೋಮವಾರ ನಸುಕಿನ ಜಾವ 5 ಗಂಟೆ ಸುಮಾರಿಗೆ ಮಂಗಳೂರಿನ ದಕ್ಕೆಯಿಂದ ಮೀನುಗಾರಿಕೆಗೆ ತೆರಳಿತ್ತು.
ಬೋಟ್ನಲ್ಲಿ ಸುಮಾರು 25 ಮಂದಿ ಮೀನುಗಾರರು ಇದ್ದರು. ದುರಂತದಲ್ಲಿ ಆರು ಮಂದಿ ನಾಪತ್ತೆಯಾಗಿದ್ದರು. 19 ಮಂದಿಯನ್ನು ಇತರೇ ಮೀನುಗಾರಿಕಾ ಬೋಟ್ ಮೂಲಕ ರಕ್ಷಣೆ ಮಾಡಲಾಗಿತ್ತು.
Video:
The Bodies of all four of the fishermen who went missing after their boat capsized in deep-sea on Monday were retrieved during a daylong reduce operation on Wednesday morning.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am